ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್
ಇದರ ಬೆನ್ನಲ್ಲೇ ಪ್ರತಿಷ್ಠಿ ಐಸಿಸಿ 2024ರ ಟಿ20 ವಿಶ್ವಕಪ್ ನಡೆಯಲಿದೆ!
ದಿನೇಶ್ ಕಾರ್ತಿಕ್ ಬಗ್ಗೆ ಟೀಮ್ ಇಂಡಿಯಾ ಸೆಲೆಕ್ಷನ್ ಕಮಿಟಿ ಸಭೆ
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಪ್ರತಿಷ್ಠಿತ ಐಸಿಸಿ 2024ರ ಟಿ20 ವಿಶ್ವಕಪ್ ನಡೆಯಲಿದೆ. ಟಿ20 ವಿಶ್ವಕಪ್ಗಾಗಿ ಬಲಿಷ್ಠ ಟೀಮ್ ಇಂಡಿಯಾ ಆಯ್ಕೆ ಮಾಡಲು ಸೆಲೆಕ್ಷನ್ ಕಮಿಟಿ ಭಾರೀ ಕಸರತ್ತು ನಡೆಸುತ್ತಿದೆ. ಈ ಮಧ್ಯೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ.
ಹೌದು, ಇತ್ತೀಚೆಗೆ ಮುಂಬೈನಲ್ಲಿ ಟೀಮ್ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್, ಸೆಲೆಕ್ಷನ್ ಕಮಿಟಿ ಚೀಫ್ ಅಜಿತ್ ಅಗರ್ಕರ್ ಅವರನ್ನು ಕ್ಯಾಪ್ಟನ್ ರೋಹಿತ್ ಶರ್ಮಾ ಭೇಟಿಯಾಗಿದ್ದರು. ಈ ಮೂವರ ಮಧ್ಯೆ ಮಹತ್ವದ ಸಭೆ ನಡೆದಿದೆ. ಈ ಸಭೆಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಜೋಡಿ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಓಪನಿಂಗ್ ಮಾಡಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಇಷ್ಟೇ ಅಲ್ಲ ಆರ್ಸಿಬಿ ಸ್ಟಾರ್ ಫಿನಿಶರ್ ದಿನೇಶ್ ಕಾರ್ತಿಕ್ ಅವರು ಕೂಡ ವಿಕೆಟ್ ಕೀಪರ್ ಬ್ಯಾಟರ್ ರೋಲ್ ರೇಸ್ನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗೆ ತನ್ನ ಅದ್ಭುತ ಪ್ರದರ್ಶನ ಮುಂದುವರಿಸಿದ್ರೆ ಮೊದಲ ಆದ್ಯತೆ ಮೇರೆಗೆ ಆಯ್ಕೆ ಮಾಡಲಾಗುವುದು ಎಂಬ ಚರ್ಚೆ ನಡೆದಿದೆಯಂತೆ.
ಸದ್ಯ ನಡೆಯುತ್ತಿರೋ ಐಪಿಎಲ್ನಲ್ಲಿ ದಿನೇಶ್ ಕಾರ್ತಿಕ್ ಆರ್ಸಿಬಿ ಪರ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇತ್ತೀಚೆಗೆ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲೂ ಚೇಸಿಂಗ್ನಲ್ಲಿ ಹೈದರಬಾದ್ ಬೌಲರ್ಗಳ ಬೆಂಡೆತ್ತಿದ್ರು. ತಾನು ಆಡಿದ ಕೇವಲ 35 ಬಾಲ್ನಲ್ಲಿ ದಿನೇಶ್ ಕಾರ್ತಿಕ್ ಬರೋಬ್ಬರಿ 7 ಸಿಕ್ಸರ್, 3 ಫೋರ್ ಸಮೇತ 83 ರನ್ ಸಿಡಿಸಿದ್ರು. ಇವರ ಸ್ಟ್ರೈಕ್ ರೇಟ್ 240ಕ್ಕೂ ಹೆಚ್ಚು ಇತ್ತು.
ಇದನ್ನೂ ಓದಿ: T20 ವಿಶ್ವಕಪ್; ಕೊಹ್ಲಿಗಾಗಿ ರೋಹಿತ್, ದ್ರಾವಿಡ್ ಮಹತ್ವದ ಸಭೆ; ಅಸಲಿಗೆ ಆಗಿದ್ದೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಬಹುನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್
ಇದರ ಬೆನ್ನಲ್ಲೇ ಪ್ರತಿಷ್ಠಿ ಐಸಿಸಿ 2024ರ ಟಿ20 ವಿಶ್ವಕಪ್ ನಡೆಯಲಿದೆ!
ದಿನೇಶ್ ಕಾರ್ತಿಕ್ ಬಗ್ಗೆ ಟೀಮ್ ಇಂಡಿಯಾ ಸೆಲೆಕ್ಷನ್ ಕಮಿಟಿ ಸಭೆ
ಇಂಡಿಯನ್ ಪ್ರೀಮಿಯರ್ ಲೀಗ್ ಬೆನ್ನಲ್ಲೇ ಪ್ರತಿಷ್ಠಿತ ಐಸಿಸಿ 2024ರ ಟಿ20 ವಿಶ್ವಕಪ್ ನಡೆಯಲಿದೆ. ಟಿ20 ವಿಶ್ವಕಪ್ಗಾಗಿ ಬಲಿಷ್ಠ ಟೀಮ್ ಇಂಡಿಯಾ ಆಯ್ಕೆ ಮಾಡಲು ಸೆಲೆಕ್ಷನ್ ಕಮಿಟಿ ಭಾರೀ ಕಸರತ್ತು ನಡೆಸುತ್ತಿದೆ. ಈ ಮಧ್ಯೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ.
ಹೌದು, ಇತ್ತೀಚೆಗೆ ಮುಂಬೈನಲ್ಲಿ ಟೀಮ್ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್, ಸೆಲೆಕ್ಷನ್ ಕಮಿಟಿ ಚೀಫ್ ಅಜಿತ್ ಅಗರ್ಕರ್ ಅವರನ್ನು ಕ್ಯಾಪ್ಟನ್ ರೋಹಿತ್ ಶರ್ಮಾ ಭೇಟಿಯಾಗಿದ್ದರು. ಈ ಮೂವರ ಮಧ್ಯೆ ಮಹತ್ವದ ಸಭೆ ನಡೆದಿದೆ. ಈ ಸಭೆಯಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಜೋಡಿ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಓಪನಿಂಗ್ ಮಾಡಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಇಷ್ಟೇ ಅಲ್ಲ ಆರ್ಸಿಬಿ ಸ್ಟಾರ್ ಫಿನಿಶರ್ ದಿನೇಶ್ ಕಾರ್ತಿಕ್ ಅವರು ಕೂಡ ವಿಕೆಟ್ ಕೀಪರ್ ಬ್ಯಾಟರ್ ರೋಲ್ ರೇಸ್ನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗೆ ತನ್ನ ಅದ್ಭುತ ಪ್ರದರ್ಶನ ಮುಂದುವರಿಸಿದ್ರೆ ಮೊದಲ ಆದ್ಯತೆ ಮೇರೆಗೆ ಆಯ್ಕೆ ಮಾಡಲಾಗುವುದು ಎಂಬ ಚರ್ಚೆ ನಡೆದಿದೆಯಂತೆ.
ಸದ್ಯ ನಡೆಯುತ್ತಿರೋ ಐಪಿಎಲ್ನಲ್ಲಿ ದಿನೇಶ್ ಕಾರ್ತಿಕ್ ಆರ್ಸಿಬಿ ಪರ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇತ್ತೀಚೆಗೆ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲೂ ಚೇಸಿಂಗ್ನಲ್ಲಿ ಹೈದರಬಾದ್ ಬೌಲರ್ಗಳ ಬೆಂಡೆತ್ತಿದ್ರು. ತಾನು ಆಡಿದ ಕೇವಲ 35 ಬಾಲ್ನಲ್ಲಿ ದಿನೇಶ್ ಕಾರ್ತಿಕ್ ಬರೋಬ್ಬರಿ 7 ಸಿಕ್ಸರ್, 3 ಫೋರ್ ಸಮೇತ 83 ರನ್ ಸಿಡಿಸಿದ್ರು. ಇವರ ಸ್ಟ್ರೈಕ್ ರೇಟ್ 240ಕ್ಕೂ ಹೆಚ್ಚು ಇತ್ತು.
ಇದನ್ನೂ ಓದಿ: T20 ವಿಶ್ವಕಪ್; ಕೊಹ್ಲಿಗಾಗಿ ರೋಹಿತ್, ದ್ರಾವಿಡ್ ಮಹತ್ವದ ಸಭೆ; ಅಸಲಿಗೆ ಆಗಿದ್ದೇನು?
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್