ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಕೆ ಮಾಡಿದ ಕಾವೇರಿ ಪ್ರಾಧಿಕಾರ
ನೀರು ಬಳಸಿಲ್ಲ ಎಂದು ಉಲ್ಲೇಖಿಸಿದ ತಮಿಳುನಾಡು
ಸಂವಿಧಾನ ಪೀಠದಲ್ಲಿ ಆರ್ಟಿಕಲ್ 370 ವಿಚಾರಣೆ
ಕರ್ನಾಟಕ ಮತ್ತು ತಮಿಳುನಾಡಿನ ಮಧ್ಯೆ ಕಾವೇರಿ ವಿವಾದ ತಾರಕಕ್ಕೇರಿದ್ದು, ಕಾವೇರಿ ಪ್ರಾಧಿಕಾರ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಕೆ ಮಾಡಿದೆ. ಸುಪ್ರೀಂಕೋರ್ಟ್ ಸೂಚನೆಯಂತೆ ಪ್ರಾಧಿಕಾರವು ಸಭೆ ನಡೆಸಿ, ವರದಿಯನ್ನು ಸಿದ್ದಪಡಿಸಿದೆ.
ಇನ್ನು ಕರ್ನಾಟಕವು CWMA ನೀಡಿದ್ದ ಆದೇಶವನ್ನ ಸರಿಯಾದ ರೀತಿಯಲ್ಲಿ ಪಾಲನೆ ಮಾಡಿದೆ ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ತಿಳಿಸಿದೆ ಹಾಗೂ ತಮಿಳುನಾಡು ವಿವೇಚನಾಯುತವಾಗಿ ನೀರು ಬಳಸಿಲ್ಲ ಎಂದು ಉಲ್ಲೇಖಿಸಿದೆ. ಕಾವೇರಿ ಪ್ರಾಧಿಕಾರ ಸಲ್ಲಿಸಿರುವ ಅಫಿಡವಿಟ್ನಲ್ಲಿ ಆಧಾರದಲ್ಲಿ ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ, ತಮಿಳುನಾಡು ಸಲ್ಲಿಸಿರುವ ಕಾವೇರಿ ನೀರು ವಿವಾದದ ಅರ್ಜಿ ವಿಚಾರಣೆ ನಡೆಯಲಿದೆ.
ಆದರೆ ನಾಳೆ ಸುಪ್ರೀಂಕೋರ್ಟ್ನಲ್ಲಿ ಕಾವೇರಿ ನೀರು ವಿವಾದದ ಬಗ್ಗೆ ವಿಚಾರಣೆ ನಡೆಯೋದು ಅನುಮಾನ ಎಂದು ಹೇಳಲಾಗುತ್ತಿದೆ. ಸಂವಿಧಾನ ಪೀಠದಲ್ಲಿ ಆರ್ಟಿಕಲ್ 370 ವಿಚಾರಣೆ ಇದ್ದು, ಈ ಸಂವಿಧಾನ ಪೀಠದಲ್ಲಿ ನ್ಯಾ.B.R.ಗವಾಯಿಯವರು ಭಾಗಿಯಾಗಲಿದ್ದಾರೆ. ಈ ಕಾರಣ ಕಾವೇರಿ ಅರ್ಜಿ ವಿಚಾರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಕೆ ಮಾಡಿದ ಕಾವೇರಿ ಪ್ರಾಧಿಕಾರ
ನೀರು ಬಳಸಿಲ್ಲ ಎಂದು ಉಲ್ಲೇಖಿಸಿದ ತಮಿಳುನಾಡು
ಸಂವಿಧಾನ ಪೀಠದಲ್ಲಿ ಆರ್ಟಿಕಲ್ 370 ವಿಚಾರಣೆ
ಕರ್ನಾಟಕ ಮತ್ತು ತಮಿಳುನಾಡಿನ ಮಧ್ಯೆ ಕಾವೇರಿ ವಿವಾದ ತಾರಕಕ್ಕೇರಿದ್ದು, ಕಾವೇರಿ ಪ್ರಾಧಿಕಾರ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಕೆ ಮಾಡಿದೆ. ಸುಪ್ರೀಂಕೋರ್ಟ್ ಸೂಚನೆಯಂತೆ ಪ್ರಾಧಿಕಾರವು ಸಭೆ ನಡೆಸಿ, ವರದಿಯನ್ನು ಸಿದ್ದಪಡಿಸಿದೆ.
ಇನ್ನು ಕರ್ನಾಟಕವು CWMA ನೀಡಿದ್ದ ಆದೇಶವನ್ನ ಸರಿಯಾದ ರೀತಿಯಲ್ಲಿ ಪಾಲನೆ ಮಾಡಿದೆ ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ತಿಳಿಸಿದೆ ಹಾಗೂ ತಮಿಳುನಾಡು ವಿವೇಚನಾಯುತವಾಗಿ ನೀರು ಬಳಸಿಲ್ಲ ಎಂದು ಉಲ್ಲೇಖಿಸಿದೆ. ಕಾವೇರಿ ಪ್ರಾಧಿಕಾರ ಸಲ್ಲಿಸಿರುವ ಅಫಿಡವಿಟ್ನಲ್ಲಿ ಆಧಾರದಲ್ಲಿ ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ, ತಮಿಳುನಾಡು ಸಲ್ಲಿಸಿರುವ ಕಾವೇರಿ ನೀರು ವಿವಾದದ ಅರ್ಜಿ ವಿಚಾರಣೆ ನಡೆಯಲಿದೆ.
ಆದರೆ ನಾಳೆ ಸುಪ್ರೀಂಕೋರ್ಟ್ನಲ್ಲಿ ಕಾವೇರಿ ನೀರು ವಿವಾದದ ಬಗ್ಗೆ ವಿಚಾರಣೆ ನಡೆಯೋದು ಅನುಮಾನ ಎಂದು ಹೇಳಲಾಗುತ್ತಿದೆ. ಸಂವಿಧಾನ ಪೀಠದಲ್ಲಿ ಆರ್ಟಿಕಲ್ 370 ವಿಚಾರಣೆ ಇದ್ದು, ಈ ಸಂವಿಧಾನ ಪೀಠದಲ್ಲಿ ನ್ಯಾ.B.R.ಗವಾಯಿಯವರು ಭಾಗಿಯಾಗಲಿದ್ದಾರೆ. ಈ ಕಾರಣ ಕಾವೇರಿ ಅರ್ಜಿ ವಿಚಾರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ