newsfirstkannada.com

ಬೆಂಗಳೂರು: ವಿಪರೀತ ಶೋಕಿ.. ಸಾಲ ತೀರಿಸಲು ಮನೆ ಮಾಲಕಿಯನ್ನು ಕೊಂದಾಕೆ ಕೊನೆಗೂ ಅರೆಸ್ಟ್​

Share :

Published May 15, 2024 at 10:42am

Update May 15, 2024 at 11:05am

    ಶೋಕಿ ಮಾಡಲು ಸಾಲ ಮಾಡಿಕೊಂಡಿದ್ದ ಯುವತಿ

    ಜೀವನ ನಡೆಸಲು ವಾಸವಿದ್ದ ಮನೆ ಮಾಲಕಿಯನ್ನೇ ಹತ್ಯೆ ಮಾಡಿದಳು

    ಇಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಬೆಚ್ಚಿ ಬೀಳಿಸುವ ಘಟನೆ

ಸಾಲ ತೀರಿಸಲು ಮನೆ ಮಾಲಕಿ ದಿವ್ಯಾ ಎಂಬಾಕೆಯ ಹತ್ಯೆ ನಡೆದಿತ್ತು. ಮೇ 10 ರಂದು ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಈ ಘಟನೆ ನಡೆದಿತ್ತು. ಆದರೀಗ ದಿವ್ಯಾಳನ್ನು ಕೊಲೆ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಮೋನಿಕಳನ್ನು(24) ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಮೋನಿಕಾ ಸಾಲ ತೀರಿಸಲು ಹಾಗೂ ಶೋಕಿ ಜೀವನ ನಡೆಸಲು ವಾಸವಿದ್ದ ಮನೆ ಮಾಲಕಿಯ ಹತ್ಯೆ ಮಾಡಿದ್ದಳು. ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡಿದ್ದ ಮೋನಿಕ, ಮೂಲತಃ ಕೋಲಾರ ಜಿಲ್ಲೆಯವಳು. ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು.

ಗುರುಮೂರ್ತಿ ಎಂಬುವವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನ ಗಂಡ ಎಂದು ಹೇಳಿ ಬಾಡಿಗೆ ಮನೆ ಗಿಟ್ಟಿಸಿಕೊಂಡಿದ್ದಳು. ಆದರೆ ಒಂಬಂಟಿಯಾಗಿ ವಾಸವಿದ್ದ ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಅತ್ತ ಮೋನಿಕ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳು. ಜೊತೆಗೆ ಪ್ರಿಯಕರನಿಗೆ ಟಾಟಾ ಎಸ್ ವಾಹನ ಖರೀದಿಸಲು ಹಣ ಬೇಕಾಗಿತ್ತು. ಹೀಗಾಗಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಮೋನಿಕ ಕಣ್ಣು ಬಿದ್ದಿತ್ತು.

ಇದನ್ನೂ ಓದಿ: ಆಯತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು.. ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹ

ದಿವ್ಯಾ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದರು. ದಿವ್ಯಾ ಅತ್ತೆ, ಮಾವ ಸಹ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ ಮಗು ಮಾತ್ರ ಮನೆಯಲ್ಲಿರುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದು ಕುತ್ತಿಗೆ ಹಿಸುಕಿ ಮೋನಿಕ ಕೊಲೆ ಮಾಡಿದ್ದಾಳೆ.

ಇದನ್ನೂ ಓದಿ: ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದ ಎರಡು ದ್ವಿಚಕ್ರ ವಾಹನ; ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಕೊಲೆ ಮಾಡಿ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರ ಕಸಿದುಕೊಂಡಿದ್ದಾಳೆ. ಸದ್ಯ ಪ್ರಕರಣ ದಾಖಲಿಸಿದ ಕೆಂಗೇರಿ ಪೊಲೀಸರು ಮೋನಿಕಾಳನ್ನು ಬಂಧಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರು: ವಿಪರೀತ ಶೋಕಿ.. ಸಾಲ ತೀರಿಸಲು ಮನೆ ಮಾಲಕಿಯನ್ನು ಕೊಂದಾಕೆ ಕೊನೆಗೂ ಅರೆಸ್ಟ್​

https://newsfirstlive.com/wp-content/uploads/2024/05/Monika.jpg

    ಶೋಕಿ ಮಾಡಲು ಸಾಲ ಮಾಡಿಕೊಂಡಿದ್ದ ಯುವತಿ

    ಜೀವನ ನಡೆಸಲು ವಾಸವಿದ್ದ ಮನೆ ಮಾಲಕಿಯನ್ನೇ ಹತ್ಯೆ ಮಾಡಿದಳು

    ಇಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಬೆಚ್ಚಿ ಬೀಳಿಸುವ ಘಟನೆ

ಸಾಲ ತೀರಿಸಲು ಮನೆ ಮಾಲಕಿ ದಿವ್ಯಾ ಎಂಬಾಕೆಯ ಹತ್ಯೆ ನಡೆದಿತ್ತು. ಮೇ 10 ರಂದು ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಈ ಘಟನೆ ನಡೆದಿತ್ತು. ಆದರೀಗ ದಿವ್ಯಾಳನ್ನು ಕೊಲೆ ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ. ಮೋನಿಕಳನ್ನು(24) ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಮೋನಿಕಾ ಸಾಲ ತೀರಿಸಲು ಹಾಗೂ ಶೋಕಿ ಜೀವನ ನಡೆಸಲು ವಾಸವಿದ್ದ ಮನೆ ಮಾಲಕಿಯ ಹತ್ಯೆ ಮಾಡಿದ್ದಳು. ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡಿದ್ದ ಮೋನಿಕ, ಮೂಲತಃ ಕೋಲಾರ ಜಿಲ್ಲೆಯವಳು. ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು.

ಗುರುಮೂರ್ತಿ ಎಂಬುವವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನ ಗಂಡ ಎಂದು ಹೇಳಿ ಬಾಡಿಗೆ ಮನೆ ಗಿಟ್ಟಿಸಿಕೊಂಡಿದ್ದಳು. ಆದರೆ ಒಂಬಂಟಿಯಾಗಿ ವಾಸವಿದ್ದ ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಅತ್ತ ಮೋನಿಕ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳು. ಜೊತೆಗೆ ಪ್ರಿಯಕರನಿಗೆ ಟಾಟಾ ಎಸ್ ವಾಹನ ಖರೀದಿಸಲು ಹಣ ಬೇಕಾಗಿತ್ತು. ಹೀಗಾಗಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಮೋನಿಕ ಕಣ್ಣು ಬಿದ್ದಿತ್ತು.

ಇದನ್ನೂ ಓದಿ: ಆಯತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು.. ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹ

ದಿವ್ಯಾ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದರು. ದಿವ್ಯಾ ಅತ್ತೆ, ಮಾವ ಸಹ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ ಮಗು ಮಾತ್ರ ಮನೆಯಲ್ಲಿರುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದು ಕುತ್ತಿಗೆ ಹಿಸುಕಿ ಮೋನಿಕ ಕೊಲೆ ಮಾಡಿದ್ದಾಳೆ.

ಇದನ್ನೂ ಓದಿ: ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದ ಎರಡು ದ್ವಿಚಕ್ರ ವಾಹನ; ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಕೊಲೆ ಮಾಡಿ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರ ಕಸಿದುಕೊಂಡಿದ್ದಾಳೆ. ಸದ್ಯ ಪ್ರಕರಣ ದಾಖಲಿಸಿದ ಕೆಂಗೇರಿ ಪೊಲೀಸರು ಮೋನಿಕಾಳನ್ನು ಬಂಧಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More