ಭೀಕರ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 156ಕ್ಕೆ ಏರಿಕೆ
ರಾಜ್ಯದ 10 ಮಂದಿ ನಾಪತ್ತೆ ಆಗಿರುವ ಬಗ್ಗೆ ಮಾಹಿತಿ ಲಭ್ಯ
ಭೂ-ಕುಸಿತದಲ್ಲಿ ನಾಪತ್ತೆಯಾದ ಲೀಲಾವತಿ ಕುಟುಂಬಸ್ಥರ ಕಣ್ಣೀರು
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ. 200ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇನ್ನು, ಕರ್ನಾಟಕದ 10 ಮಂದಿ ನಾಪತ್ತೆ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಜೀವ ಉಳಿಸಿದ ಆ ಮೆಸೇಜ್! ವಯನಾಡು ದುರಂತದಲ್ಲಿ ಸಾವನ್ನೇ ಗೆದ್ದು ಬಂದ ಬೆಂಗಳೂರು ಕಾರು ಚಾಲಕ..
ಗುರುಮಲ್ಲನ್(10) ಸಾವಿತ್ರಿ (54), ಸಬಿತಾ (43),ಶಿವಣ್ಣನ್ (50), ಅಪ್ಪಣ್ಣನ್( 39), ಅಶ್ವಿನ್ (13), ಜೀತು (11), ದಿವ್ಯಾ (35), ರತ್ನ (48) ಸ್ವಾಮಿಶೆಟ್ಟಿ, ಪುತ್ರ ನಿಹಾಲ್ (2.5), ಅತ್ತೆ ಲೀಲಾವತಿ (55) ಸೇರಿ ಅನೇಕರು ನಾಪತ್ತೆಯಾಗಿದ್ದಾರೆ. ಕರ್ನಾಟಕ ಮೂಲದ ನಾಲ್ಕು ಮಂದಿಯ ಮೃತದೇಹ ಪತ್ತೆ ಹಚ್ಚಲಾಗಿದೆ ಎಂದು ರಕ್ಷಣಾ ಸಿಬ್ಬಂದಿ ಮಾಹಿತಿ ಕೊಟ್ಟಿದ್ದಾರೆ. ಅದರಲ್ಲಿ ಚಾಮರಾಜನಗರ ಜಿಲ್ಲೆಯ ಇರಸವಾಡಿ ಗ್ರಾಮದ ರಾಜೇಂದ್ರ (50), ರತ್ನಮ್ಮ (45), ಪುಟ್ಟ ಸಿದ್ದ ಶೆಟ್ಟಿ (62), ರಾಣಿ (50) ಮೃತದೇಹಗಳನ್ನು ರಕ್ಷಣಾ ಪಡೆಗಳು ಹೊರ ತೆಗೆದಿದ್ದಾರೆ.
ಮಂಡ್ಯ ಜಿಲ್ಲೆ ಕೆಆರ್ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿರಾಣಿ ಕುಟುಂಬ ಕೂಡ ಸಂಕಷ್ಟಕ್ಕೆ ಸಿಲುಕಿದೆ. ಝಾನಿರಾಣಿ ಪುತ್ರ ನಿಹಾಲ್, ಅತ್ತೆ ಲೀಲಾವತಿ ನಾಪತ್ತೆ ಆಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಝಾನ್ಸಿರಾಣಿಯನ್ನು ಮದುವೆ ಮಾಡಿಕೊಟ್ಟಿದ್ದರು. ಅನಿಲ್ ಕೇರಳದ ಮುಂಡಕೈಯಲ್ಲಿ ನೆಲೆಸಿದ್ದರು. ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ಜೊತೆ ವಾಸವಿದ್ದರು.
ನಿಹಾಲ್ ಹಾಗೂ ಲೀಲಾವತಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಮತ್ತೊಂದೆಡೆ ಗಂಭೀರವಾಗಿ ಗಾಯಗೊಂಡಿರುವ ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಅವರು ಸಾವು ಬದುಕಿನ ನಡುವೆ ಹೋರಾಟ ಮಾಡ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಿದೆ. ಇತ್ತ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ಕೇರಳ ಗುಡ್ಡ ಕುಸಿತದಲ್ಲಿ ಕರ್ನಾಟಕದ ಅಜ್ಜಿ, ಮೊಮ್ಮಗ ನಾಪತ್ತೆ.. ಇದೇ ಕುಟುಂಬದ ಮೂವರ ರೋಚಕ ರಕ್ಷಣೆ
ಭೂಕುಸಿತದಲ್ಲಿ ನಾಪತ್ತೆಯಾದ ಲೀಲಾವತಿ ಮಗಳು ಮಂಜುಳಾ ನ್ಯೂಸ್ ಫಸ್ಟ್ ಮುಂದೆ ಕಣ್ಣೀರು ಹಾಕಿದ್ದಾರೆ. ತುಂಬಾ ಮಳೆ ಬರುತ್ತಿದೆ. ನಾಳೆ ಬರುತ್ತೇವೆ ಎಂದವರು ಬರಲಿಲ್ಲ. ವಿಧಿ, ಮಳೆಯೇ ಅವರನ್ನ ಕರೆದೊಯ್ತು. ನಾನು ಬರಲ್ಲ ಮಗ, ಸೊಸೆ ಕಳಿಸುತ್ತೇನೆ ಎಂದು ಅಮ್ಮ ಹೇಳಿದ್ದರು. ಬರಲಿಲ್ಲ ಅಂದರೆ ಅಲ್ಲೇ ಸಾಯಿ ಎಂದಿದ್ದೆ. ಹೀಗಾಗುತ್ತದೆ ಎಂದು ಗೊತ್ತಿರಲಿಲ್ಲ. ಮಲಗಿರುವಾಗ ಗುಡ್ಡ ಕುಸಿದು, ಮಗು ಕೊಚ್ಚಿ ಹೋಗಿದೆ. ನಮ್ಮಮ್ಮನ ಕೈ ಕಾಣುತ್ತಿದೆ, ಮಗು ಮಕಾಡೆ ಮಲಗಿದೆ. ಹೇಗಾದರೂ ಮಾಡಿ ಮೃತದೇಹ ಕರ್ನಾಟಕಕ್ಕೆ ತನ್ನಿ, ಕಡೆ ಬಾರಿ ಮುಖ ನೋಡಿಕೊಳ್ತೀವಿ. ನನ್ನ ತಮ್ಮ ಅನಿಲ್ ಮುಂಡಕೈಲಿ ಮನೆ ಕಟ್ಟಿದ್ರು, ಮುಂದಿನ ತಿಂಗಳು ಗೃಹಪ್ರವೇಶ ಇತ್ತು ಎಂದು ಕಣ್ಣೀರು ಇಟ್ಟಿದ್ದಾರೆ.
51 ವರ್ಷದಿಂದ ನಮ್ಮ ತಂದೆ ತಾಯಿ ಅಲ್ಲೆ ನೆಲೆಸಿದ್ದರು. ಯುರೋಪ್ನಲ್ಲಿದ್ದ ಅನಿಲ್ ಆಗಸ್ಟ್ 10 ವಾಪಸ್ ಆಗಬೇಕಿತ್ತು. ಆದರೆ ವಿಧಿ ಲೆಕ್ಕಾಚಾರ ಬೇರೆ ಆಗಿತ್ತು. ಪಾಪು, ಅಮ್ಮನನ್ನ ಕಳೆದುಕೊಂಡಿದ್ದೇವೆ. ಝಾನ್ಸಿ ಕೈಗೆ ಏಟಾಗಿದೆ. ಮಗು ಕಳೆದುಕೊಂಡು ದುಃಖದಲ್ಲಿದ್ದಾಳೆ. ಅನಿಲ್ ಕಣ್ಣು, ಮೂಗು, ಶ್ವಾಸಕೋಶಕ್ಕೆ ಮಣ್ಣು ತುಂಬಿದೆ. ಸ್ಪೈನಲ್ ಕಾರ್ಡ್ ಕಟ್ಟಾಗಿದೆ. ತಂದೆ ದೇವರಾಜು ಅವರಿಗೆ ಕಾಲು ಪೆಟ್ಟಾಗಿದೆ. ಅವರನ್ನು ಕರ್ನಾಟಕಕ್ಕೆ ಕಳುಹಿಸಿಕೊಡಿ ನಾವು ಚಿಕಿತ್ಸೆ ಕೊಡಿಸಿಕೊಳ್ತೀವಿ ಅಂತ ಕಣ್ಣೀರು ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಭೀಕರ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 156ಕ್ಕೆ ಏರಿಕೆ
ರಾಜ್ಯದ 10 ಮಂದಿ ನಾಪತ್ತೆ ಆಗಿರುವ ಬಗ್ಗೆ ಮಾಹಿತಿ ಲಭ್ಯ
ಭೂ-ಕುಸಿತದಲ್ಲಿ ನಾಪತ್ತೆಯಾದ ಲೀಲಾವತಿ ಕುಟುಂಬಸ್ಥರ ಕಣ್ಣೀರು
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 156ಕ್ಕೆ ಏರಿಕೆಯಾಗಿದೆ. 200ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ಕೆಲವರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇನ್ನು, ಕರ್ನಾಟಕದ 10 ಮಂದಿ ನಾಪತ್ತೆ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: ಜೀವ ಉಳಿಸಿದ ಆ ಮೆಸೇಜ್! ವಯನಾಡು ದುರಂತದಲ್ಲಿ ಸಾವನ್ನೇ ಗೆದ್ದು ಬಂದ ಬೆಂಗಳೂರು ಕಾರು ಚಾಲಕ..
ಗುರುಮಲ್ಲನ್(10) ಸಾವಿತ್ರಿ (54), ಸಬಿತಾ (43),ಶಿವಣ್ಣನ್ (50), ಅಪ್ಪಣ್ಣನ್( 39), ಅಶ್ವಿನ್ (13), ಜೀತು (11), ದಿವ್ಯಾ (35), ರತ್ನ (48) ಸ್ವಾಮಿಶೆಟ್ಟಿ, ಪುತ್ರ ನಿಹಾಲ್ (2.5), ಅತ್ತೆ ಲೀಲಾವತಿ (55) ಸೇರಿ ಅನೇಕರು ನಾಪತ್ತೆಯಾಗಿದ್ದಾರೆ. ಕರ್ನಾಟಕ ಮೂಲದ ನಾಲ್ಕು ಮಂದಿಯ ಮೃತದೇಹ ಪತ್ತೆ ಹಚ್ಚಲಾಗಿದೆ ಎಂದು ರಕ್ಷಣಾ ಸಿಬ್ಬಂದಿ ಮಾಹಿತಿ ಕೊಟ್ಟಿದ್ದಾರೆ. ಅದರಲ್ಲಿ ಚಾಮರಾಜನಗರ ಜಿಲ್ಲೆಯ ಇರಸವಾಡಿ ಗ್ರಾಮದ ರಾಜೇಂದ್ರ (50), ರತ್ನಮ್ಮ (45), ಪುಟ್ಟ ಸಿದ್ದ ಶೆಟ್ಟಿ (62), ರಾಣಿ (50) ಮೃತದೇಹಗಳನ್ನು ರಕ್ಷಣಾ ಪಡೆಗಳು ಹೊರ ತೆಗೆದಿದ್ದಾರೆ.
ಮಂಡ್ಯ ಜಿಲ್ಲೆ ಕೆಆರ್ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿರಾಣಿ ಕುಟುಂಬ ಕೂಡ ಸಂಕಷ್ಟಕ್ಕೆ ಸಿಲುಕಿದೆ. ಝಾನಿರಾಣಿ ಪುತ್ರ ನಿಹಾಲ್, ಅತ್ತೆ ಲೀಲಾವತಿ ನಾಪತ್ತೆ ಆಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಝಾನ್ಸಿರಾಣಿಯನ್ನು ಮದುವೆ ಮಾಡಿಕೊಟ್ಟಿದ್ದರು. ಅನಿಲ್ ಕೇರಳದ ಮುಂಡಕೈಯಲ್ಲಿ ನೆಲೆಸಿದ್ದರು. ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ಜೊತೆ ವಾಸವಿದ್ದರು.
ನಿಹಾಲ್ ಹಾಗೂ ಲೀಲಾವತಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಮತ್ತೊಂದೆಡೆ ಗಂಭೀರವಾಗಿ ಗಾಯಗೊಂಡಿರುವ ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಅವರು ಸಾವು ಬದುಕಿನ ನಡುವೆ ಹೋರಾಟ ಮಾಡ್ತಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಿದೆ. ಇತ್ತ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ಕೇರಳ ಗುಡ್ಡ ಕುಸಿತದಲ್ಲಿ ಕರ್ನಾಟಕದ ಅಜ್ಜಿ, ಮೊಮ್ಮಗ ನಾಪತ್ತೆ.. ಇದೇ ಕುಟುಂಬದ ಮೂವರ ರೋಚಕ ರಕ್ಷಣೆ
ಭೂಕುಸಿತದಲ್ಲಿ ನಾಪತ್ತೆಯಾದ ಲೀಲಾವತಿ ಮಗಳು ಮಂಜುಳಾ ನ್ಯೂಸ್ ಫಸ್ಟ್ ಮುಂದೆ ಕಣ್ಣೀರು ಹಾಕಿದ್ದಾರೆ. ತುಂಬಾ ಮಳೆ ಬರುತ್ತಿದೆ. ನಾಳೆ ಬರುತ್ತೇವೆ ಎಂದವರು ಬರಲಿಲ್ಲ. ವಿಧಿ, ಮಳೆಯೇ ಅವರನ್ನ ಕರೆದೊಯ್ತು. ನಾನು ಬರಲ್ಲ ಮಗ, ಸೊಸೆ ಕಳಿಸುತ್ತೇನೆ ಎಂದು ಅಮ್ಮ ಹೇಳಿದ್ದರು. ಬರಲಿಲ್ಲ ಅಂದರೆ ಅಲ್ಲೇ ಸಾಯಿ ಎಂದಿದ್ದೆ. ಹೀಗಾಗುತ್ತದೆ ಎಂದು ಗೊತ್ತಿರಲಿಲ್ಲ. ಮಲಗಿರುವಾಗ ಗುಡ್ಡ ಕುಸಿದು, ಮಗು ಕೊಚ್ಚಿ ಹೋಗಿದೆ. ನಮ್ಮಮ್ಮನ ಕೈ ಕಾಣುತ್ತಿದೆ, ಮಗು ಮಕಾಡೆ ಮಲಗಿದೆ. ಹೇಗಾದರೂ ಮಾಡಿ ಮೃತದೇಹ ಕರ್ನಾಟಕಕ್ಕೆ ತನ್ನಿ, ಕಡೆ ಬಾರಿ ಮುಖ ನೋಡಿಕೊಳ್ತೀವಿ. ನನ್ನ ತಮ್ಮ ಅನಿಲ್ ಮುಂಡಕೈಲಿ ಮನೆ ಕಟ್ಟಿದ್ರು, ಮುಂದಿನ ತಿಂಗಳು ಗೃಹಪ್ರವೇಶ ಇತ್ತು ಎಂದು ಕಣ್ಣೀರು ಇಟ್ಟಿದ್ದಾರೆ.
51 ವರ್ಷದಿಂದ ನಮ್ಮ ತಂದೆ ತಾಯಿ ಅಲ್ಲೆ ನೆಲೆಸಿದ್ದರು. ಯುರೋಪ್ನಲ್ಲಿದ್ದ ಅನಿಲ್ ಆಗಸ್ಟ್ 10 ವಾಪಸ್ ಆಗಬೇಕಿತ್ತು. ಆದರೆ ವಿಧಿ ಲೆಕ್ಕಾಚಾರ ಬೇರೆ ಆಗಿತ್ತು. ಪಾಪು, ಅಮ್ಮನನ್ನ ಕಳೆದುಕೊಂಡಿದ್ದೇವೆ. ಝಾನ್ಸಿ ಕೈಗೆ ಏಟಾಗಿದೆ. ಮಗು ಕಳೆದುಕೊಂಡು ದುಃಖದಲ್ಲಿದ್ದಾಳೆ. ಅನಿಲ್ ಕಣ್ಣು, ಮೂಗು, ಶ್ವಾಸಕೋಶಕ್ಕೆ ಮಣ್ಣು ತುಂಬಿದೆ. ಸ್ಪೈನಲ್ ಕಾರ್ಡ್ ಕಟ್ಟಾಗಿದೆ. ತಂದೆ ದೇವರಾಜು ಅವರಿಗೆ ಕಾಲು ಪೆಟ್ಟಾಗಿದೆ. ಅವರನ್ನು ಕರ್ನಾಟಕಕ್ಕೆ ಕಳುಹಿಸಿಕೊಡಿ ನಾವು ಚಿಕಿತ್ಸೆ ಕೊಡಿಸಿಕೊಳ್ತೀವಿ ಅಂತ ಕಣ್ಣೀರು ಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ