ಹೈಕಮಾಂಡ್ ಮುಂದೆ ಕೋಲಾರ ಕಾಂಗ್ರೆಸ್ ನಾಯಕರ ಫೈಟ್
ರಮೇಶ್ ಕುಮಾರ್ ಯಾರಿಗೆ ಟಿಕೆಟ್ ನೀಡಬೇಕು ಎನ್ನುತ್ತಿದ್ದಾರೆ?
ಸಚಿವ ಕೆ.ಹೆಚ್. ಮುನಿಯಪ್ಪರ ಲಾಬಿ ಯಾರಿಗಾಗಿ..?
ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ಕಾವೇರತೊಡಗಿದೆ. ಮತ್ತೊಂದೆಡೆ ರಾಜಕೀಯ ಪಕ್ಷಗಳು ಗೆಲ್ಲುವ ಕುದುರೆಗಳನ್ನು ಅಖಾಡಕ್ಕಿಳಿಸಲು ಭಾರೀ ಕಸರತ್ತು ಮಾಡ್ತಿವೆ. ರಾಜ್ಯದ 2ನೇ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್ ಹೈಕಮಾಂಡ್ ಬಳಿ ಚರ್ಚೆ ನಡೆಸಿದೆ. ಆದರೆ ಕಾಂಗ್ರೆಸ್ಗೆ ಕೋಲಾರದ ಟಿಕೆಟ್ ತಲೆನೋವಾಗಿ ಪರಿಣಮಿಸಿದೆ. ಕೋಲಾರದ ಟಿಕೆಟ್ಗಾಗಿ ಆಕಾಂಕ್ಷಿಗಳು ದೆಹಲಿಯಲ್ಲಿ ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಬೆಂಬಲಿಗರ ಜೊತೆ ರಮೇಶ್ಕುಮಾರ್, ಮುನಿಯಪ್ಪ ದೆಹಲಿ ಪ್ರವಾಸ
ಕೋಲಾರದ ಕಾಂಗ್ರೆಸ್ ಟಿಕೆಟ್ಗಾಗಿ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ಮಾಜಿ ಸಚಿವ ರಮೇಶ್ಕುಮಾರ್ ಮಧ್ಯೆ ಭಾರೀ ಪೈಪೋಟಿ ಏರ್ಪಟ್ಟಿದೆ. ಅಷ್ಟೇ ಅಲ್ಲ, ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ತೆರಳಿ, ಹೈಕಮಾಂಡ್ ಬಳಿ ಟಿಕೆಟ್ ಡಿಮ್ಯಾಂಡ್ ಇಟ್ಟಿದ್ದಾರೆ.
ಕೋಲಾರ ‘ಕೈ’ ಟಿಕೆಟ್ ಕದನ
ದೆಹಲಿಯಲ್ಲಿ ಟಿಕೆಟ್ಗಾಗಿ ಕಾಂಗ್ರೆಸ್ ನಾಯಕರ ಬಣ ಶಕ್ತಿ ಪ್ರದರ್ಶನ ಮಾಡಿದ್ದು. ಎಲ್. ಹನುಮಂತಯ್ಯ ಪರ ರಮೇಶ್ ಕುಮಾರ್ ಟೀಂ ಲಾಬಿ ಮಾಡಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಲ್.ಹನುಮಂತಯ್ಯ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಚಿವ ಕೆ.ಹೆಚ್.ಮುನಿಯಪ್ಪಗೆ ಕೋಲಾರದಿಂದ ಸ್ಪರ್ಧೆ ಮಾಡುವಂತೆ ಹೈಕಮಾಂಡ್ ಸೂಚಿಸಿದೆ. ಆದ್ರೆ ಇದಕ್ಕೆ ಹಿಂದೇಟು ಹಾಕಿರುವ ಸಚಿವ ಕೆ.ಹೆಚ್.ಮುನಿಯಪ್ಪ ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.
ಹತ್ತು-ಹದಿನೈದು ಮಂದಿಯ ತಂಡದೊಂದಿಗೆ ಉಭಯ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಬಣಗಳ ವಾದಕ್ಕೆ ಹೈಕಮಾಂಡ್ ನಾಯಕರು ಸುಸ್ತಾಗಿದ್ದಾರೆ. ಒಂದ್ವೇಳೆ ರಮೇಶ್ ಕುಮಾರ್ ಬಣಕ್ಕೆ ಟಿಕೆಟ್ ಕೊಟ್ಟರೆ ಮುನಿಯಪ್ಪಗೆ ಸಿಟ್ಟು.. ಅತ್ತ ಮುನಿಯಪ್ಪಗೆ ಕೊಟ್ಟರೆ ರಮೇಶ್ ಕುಮಾರ್ ಅಸಮಾಧಾನಗೊಳ್ಳಲಿದ್ದಾರೆ. ಹೀಗಾಗಿ ಯಾವ ಬಣಕ್ಕೆ ಮಣೆ ಹಾಕಬೇಕೆಂಬ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿಲುಕಿಕೊಂಡಿದ್ದಾರೆ.
17 ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮ
ರಾಜ್ಯದ 21 ಕ್ಷೇತ್ರಗಳ ಟಿಕೆಟ್ ಫೈನಲ್ಗಾಗಿ ಕಳೆದ ಎರಡು ದಿನಗಳಿಂದ ಸಿಎಂ, ಡಿಸಿಎಂ ದೆಹಲಿಯಲ್ಲಿ ಬೀಡುಬಿಟ್ಟು, ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಪಟ್ಟಿ ಫೈನಲ್ ಮಾಡಿದ್ದಾರೆ. 2ನೇ ಪಟ್ಟಿಯಲ್ಲಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಕೋಲಾರದಲ್ಲಿ ಟಿಕೆಟ್ ಫೈಟ್ ಇರುವ ಕಾರಣ, ಕೋಲಾರ ಸೇರಿದಂತೆ 4 ಕ್ಷೇತ್ರಗಳನ್ನು ಪೆಂಡಿಂಗ್ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು ಎಂದು ಸಿಇಸಿ ಸಭೆ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಇವತ್ತು ಬೆಳಗ್ಗೆಯೇ ಕಾಂಗ್ರೆಸ್ ಪಟ್ಟಿ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಬಾರಿ ಐವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. 50% ಯುವಕರಿಗೆ ಅವಕಾಶ ನೀಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಒಟ್ಟಾರೆ, ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ 20 ಕ್ಷೇತ್ರಗಳ ಟಾರ್ಗೆಟ್ ಫಿಕ್ಸ್ ಮಾಡಿಕೊಂಡಿರುವ ಕಾಂಗ್ರೆಸ್ ಗೆಲ್ಲುವ ಕುದುರೆಗಳನ್ನು ಅಖಾಡಕ್ಕೆ ಇಳಿಸಲು ಕಸರತ್ತು ಮಾಡ್ತಿದೆ. ಆದ್ರೆ 3-4 ಕ್ಷೇತ್ರಗಳಲ್ಲಿ ಗೊಂದಲವಿದ್ದು, ಅದನ್ನು ಯಾವ ರೀತಿ ಪರಿಹರಿಸುತ್ತೆ ಅನ್ನೋದನ್ನ ಕಾದುನೋಡಬೇಕಿದೆ.
ವಿಶೇಷ ವರದಿ: ಜಗದೀಶ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಹೈಕಮಾಂಡ್ ಮುಂದೆ ಕೋಲಾರ ಕಾಂಗ್ರೆಸ್ ನಾಯಕರ ಫೈಟ್
ರಮೇಶ್ ಕುಮಾರ್ ಯಾರಿಗೆ ಟಿಕೆಟ್ ನೀಡಬೇಕು ಎನ್ನುತ್ತಿದ್ದಾರೆ?
ಸಚಿವ ಕೆ.ಹೆಚ್. ಮುನಿಯಪ್ಪರ ಲಾಬಿ ಯಾರಿಗಾಗಿ..?
ರಾಜ್ಯದಲ್ಲಿ ಲೋಕಸಭೆ ಚುನಾವಣೆ ಕಾವು ಕಾವೇರತೊಡಗಿದೆ. ಮತ್ತೊಂದೆಡೆ ರಾಜಕೀಯ ಪಕ್ಷಗಳು ಗೆಲ್ಲುವ ಕುದುರೆಗಳನ್ನು ಅಖಾಡಕ್ಕಿಳಿಸಲು ಭಾರೀ ಕಸರತ್ತು ಮಾಡ್ತಿವೆ. ರಾಜ್ಯದ 2ನೇ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್ ಹೈಕಮಾಂಡ್ ಬಳಿ ಚರ್ಚೆ ನಡೆಸಿದೆ. ಆದರೆ ಕಾಂಗ್ರೆಸ್ಗೆ ಕೋಲಾರದ ಟಿಕೆಟ್ ತಲೆನೋವಾಗಿ ಪರಿಣಮಿಸಿದೆ. ಕೋಲಾರದ ಟಿಕೆಟ್ಗಾಗಿ ಆಕಾಂಕ್ಷಿಗಳು ದೆಹಲಿಯಲ್ಲಿ ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನ ಮಾಡಿದ್ದಾರೆ.
ಬೆಂಬಲಿಗರ ಜೊತೆ ರಮೇಶ್ಕುಮಾರ್, ಮುನಿಯಪ್ಪ ದೆಹಲಿ ಪ್ರವಾಸ
ಕೋಲಾರದ ಕಾಂಗ್ರೆಸ್ ಟಿಕೆಟ್ಗಾಗಿ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ಮಾಜಿ ಸಚಿವ ರಮೇಶ್ಕುಮಾರ್ ಮಧ್ಯೆ ಭಾರೀ ಪೈಪೋಟಿ ಏರ್ಪಟ್ಟಿದೆ. ಅಷ್ಟೇ ಅಲ್ಲ, ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ತೆರಳಿ, ಹೈಕಮಾಂಡ್ ಬಳಿ ಟಿಕೆಟ್ ಡಿಮ್ಯಾಂಡ್ ಇಟ್ಟಿದ್ದಾರೆ.
ಕೋಲಾರ ‘ಕೈ’ ಟಿಕೆಟ್ ಕದನ
ದೆಹಲಿಯಲ್ಲಿ ಟಿಕೆಟ್ಗಾಗಿ ಕಾಂಗ್ರೆಸ್ ನಾಯಕರ ಬಣ ಶಕ್ತಿ ಪ್ರದರ್ಶನ ಮಾಡಿದ್ದು. ಎಲ್. ಹನುಮಂತಯ್ಯ ಪರ ರಮೇಶ್ ಕುಮಾರ್ ಟೀಂ ಲಾಬಿ ಮಾಡಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಎಲ್.ಹನುಮಂತಯ್ಯ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಸಚಿವ ಕೆ.ಹೆಚ್.ಮುನಿಯಪ್ಪಗೆ ಕೋಲಾರದಿಂದ ಸ್ಪರ್ಧೆ ಮಾಡುವಂತೆ ಹೈಕಮಾಂಡ್ ಸೂಚಿಸಿದೆ. ಆದ್ರೆ ಇದಕ್ಕೆ ಹಿಂದೇಟು ಹಾಕಿರುವ ಸಚಿವ ಕೆ.ಹೆಚ್.ಮುನಿಯಪ್ಪ ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.
ಹತ್ತು-ಹದಿನೈದು ಮಂದಿಯ ತಂಡದೊಂದಿಗೆ ಉಭಯ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಬಣಗಳ ವಾದಕ್ಕೆ ಹೈಕಮಾಂಡ್ ನಾಯಕರು ಸುಸ್ತಾಗಿದ್ದಾರೆ. ಒಂದ್ವೇಳೆ ರಮೇಶ್ ಕುಮಾರ್ ಬಣಕ್ಕೆ ಟಿಕೆಟ್ ಕೊಟ್ಟರೆ ಮುನಿಯಪ್ಪಗೆ ಸಿಟ್ಟು.. ಅತ್ತ ಮುನಿಯಪ್ಪಗೆ ಕೊಟ್ಟರೆ ರಮೇಶ್ ಕುಮಾರ್ ಅಸಮಾಧಾನಗೊಳ್ಳಲಿದ್ದಾರೆ. ಹೀಗಾಗಿ ಯಾವ ಬಣಕ್ಕೆ ಮಣೆ ಹಾಕಬೇಕೆಂಬ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರು ಸಿಲುಕಿಕೊಂಡಿದ್ದಾರೆ.
17 ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮ
ರಾಜ್ಯದ 21 ಕ್ಷೇತ್ರಗಳ ಟಿಕೆಟ್ ಫೈನಲ್ಗಾಗಿ ಕಳೆದ ಎರಡು ದಿನಗಳಿಂದ ಸಿಎಂ, ಡಿಸಿಎಂ ದೆಹಲಿಯಲ್ಲಿ ಬೀಡುಬಿಟ್ಟು, ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯಲ್ಲಿ ಪಟ್ಟಿ ಫೈನಲ್ ಮಾಡಿದ್ದಾರೆ. 2ನೇ ಪಟ್ಟಿಯಲ್ಲಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಕೋಲಾರದಲ್ಲಿ ಟಿಕೆಟ್ ಫೈಟ್ ಇರುವ ಕಾರಣ, ಕೋಲಾರ ಸೇರಿದಂತೆ 4 ಕ್ಷೇತ್ರಗಳನ್ನು ಪೆಂಡಿಂಗ್ ಇಟ್ಟುಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು ಎಂದು ಸಿಇಸಿ ಸಭೆ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಇವತ್ತು ಬೆಳಗ್ಗೆಯೇ ಕಾಂಗ್ರೆಸ್ ಪಟ್ಟಿ ರಿಲೀಸ್ ಆಗುವ ಸಾಧ್ಯತೆ ಇದೆ. ಈ ಬಾರಿ ಐವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. 50% ಯುವಕರಿಗೆ ಅವಕಾಶ ನೀಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಒಟ್ಟಾರೆ, ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ 20 ಕ್ಷೇತ್ರಗಳ ಟಾರ್ಗೆಟ್ ಫಿಕ್ಸ್ ಮಾಡಿಕೊಂಡಿರುವ ಕಾಂಗ್ರೆಸ್ ಗೆಲ್ಲುವ ಕುದುರೆಗಳನ್ನು ಅಖಾಡಕ್ಕೆ ಇಳಿಸಲು ಕಸರತ್ತು ಮಾಡ್ತಿದೆ. ಆದ್ರೆ 3-4 ಕ್ಷೇತ್ರಗಳಲ್ಲಿ ಗೊಂದಲವಿದ್ದು, ಅದನ್ನು ಯಾವ ರೀತಿ ಪರಿಹರಿಸುತ್ತೆ ಅನ್ನೋದನ್ನ ಕಾದುನೋಡಬೇಕಿದೆ.
ವಿಶೇಷ ವರದಿ: ಜಗದೀಶ್
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ