ಒಬ್ಬರನ್ನು ಅಳಿಸಿ ತಾವು ನಗೋದು ಕಾಮಿಡಿ ಅನಿಸುತ್ತಾ?- ಖಡಕ್​​ ವಾರ್ನಿಂಗ್​ ಕೊಟ್ಟ ಕಿಚ್ಚ ಸುದೀಪ್​

author-image
Veena Gangani
Updated On
ಒಬ್ಬರನ್ನು ಅಳಿಸಿ ತಾವು ನಗೋದು ಕಾಮಿಡಿ ಅನಿಸುತ್ತಾ?- ಖಡಕ್​​ ವಾರ್ನಿಂಗ್​ ಕೊಟ್ಟ ಕಿಚ್ಚ ಸುದೀಪ್​
Advertisment
  • ವಾರದ ಕತೆ ಕಿಚ್ಚನ ಜೊತೆ ಪಂಚಾಯ್ತಿ ಕಟ್ಟೆಯಲ್ಲಿ ಮಾತುಕಥೆ ಶುರು
  • ಬಿಗ್​ಬಾಸ್​ ಸೀಸನ್ 10ಕ್ಕೆ ಗ್ರ್ಯಾಂಡ್​ ಆಗಿ ಎಂಟ್ರಿಕೊಟ್ಟ ಸ್ಪರ್ಧಿಗಳು
  • ದೇವರೇ ಕ್ಷಮಿಸಿ ಒಂದು ವರ ಕೊಡುತ್ತಾನೆ ಎಂದ ಕಿಚ್ಚ ಸುದೀಪ್​​

ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್ ಸೀಸನ್​ 10 ಶುರುವಾಗಿ ಒಂದು ವಾರ ಕಳೆದಿದೆ. ಬಿಗ್​ಬಾಸ್​ ಸೀಸನ್ 10ನೇ ಮೊದಲ ವಾರದ ಕಿಚ್ಚನ ಪಂಚಾಯ್ತಿ ಕಟ್ಟೆ ಸಜ್ಜಾಗಿದೆ. ಕಿಚ್ಚನ ಮೊದಲ ‘ವಾರದ ಕಥೆ ಕಿಚ್ಚನ ಜೊತೆ’ ಕಾರ್ಯಕ್ರಮ ನಡೆಯುತ್ತಿದೆ. ಇನ್ನೂ ಕಲರ್ಸ್​ ಕನ್ನಡ ಇನ್​ಸ್ಟಾಗ್ರಾಮ್​​ ಪೇಜ್​​​ನಲ್ಲಿ ಪ್ರೋಮೋ ರಿಲೀಸ್ ಆಗಿದೆ.

publive-image

ರಿಲೀಸ್​ ಆದ ಪ್ರೋಮೋದಲ್ಲಿ ಕಿಚ್ಚ ಸುದೀಪ್​ ಅವರು ಆಡಿದ ಮಾತುಗಳು ಸಖತ್ ಕುತೂಹಲ ಮೂಡಿಸಿವೆ. ‘ದೇವರ ಮುಂದೆ ನಿಯತ್ತಾಗಿ ಬೇಡಿಕೊಂಡರೆ, ದೇವರೇ ಕ್ಷಮಿಸಿ ಒಂದು ವರ ಕೊಡುತ್ತಾನೆ’ ಎಂದು ಹೇಳಿರೋ ಮಾತುಗಳು ಸಾಮಾಜಿಕ ಜಾಲತಾಣಲ್ಲಿ ಭಾರೀ ವೈರಲ್ ಆಗಿದೆ.

publive-image

ಮತ್ತೊಂದು ಪ್ರೋಮೋದಲ್ಲಿ ಕಿಚ್ಚ ಸುದೀಪ್​ ಅವರು ಸಂತೋಷ ಅವರು ಡ್ರೋನ್​ ಪ್ರತಾಪ್​ ಬಗ್ಗೆ ಮಾತಾಡುವುದರ ಬಗ್ಗೆ ಖಡಕ್​ ವಾರ್ನಿಂಗ್ ಕೊಟ್ಟಿದ್ದಾರೆ. ಆ ಮಾತುಗಳನ್ನು ಅವರು ಯಾರಿಗೆ ಹೇಳಿದ್ದಾರೆ ಎಂಬುವುದು ಪ್ರೊಮೋದಲ್ಲಿ ಗೊತ್ತಾಗುತ್ತಿವೆ. ಇನ್ನೂ ಕಿಚ್ಚನ ಜೊತೆ ಮೊದಲ ಪಂಚಾಯತಿಯಲ್ಲಿ ಬಿಗ್​ಬಾಸ್​ ಸ್ಪರ್ಧಿಗಳು ಮಾತನಾಡೋಕೆ ಕಾತುರದಿಂದ ಕಾಯುತ್ತಿದ್ದಾರೆ. ಈಗ ಕಿಚ್ಚ ಸುದೀಪ್​ ಅವರ ಜೊತೆ ಮಾತುಕಥೆ ನಡೆಸುವ ಹಂತ ಬಂದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment