newsfirstkannada.com

‘ನಿನ್ನ ತಾಯಿಯ ಕಾಲು ಕಟ್ಟಿದ್ರು, ಪ್ರಜ್ವಲ್ ಬಲತ್ಕಾರ ಮಾಡಿದ್ರು..’ ರೇವಣ್ಣ ವಿರುದ್ಧ ಕಿಡ್ನಾಪ್‌ ಕೇಸ್ ದಾಖಲು

Share :

Published May 3, 2024 at 12:05pm

Update May 4, 2024 at 9:17am

    ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದೆ- ದೂರಿನಲ್ಲಿ ಸಂತ್ರಸ್ತ ಹೇಳಿಕೆ

    ‘ಅಶ್ಲೀಲ ವಿಡಿಯೋ ಬೆಳಕಿಗೆ ಬಂದ ಬಳಿಕ ತಾಯಿ ನಾಪತ್ತೆ ಆಗಿದ್ದಾಳೆ’

    ‘ತಾಯಿಯನ್ನು ಭವಾನಿ ಅಕ್ಕ ಕರೆಯುತ್ತಿದ್ದಾರೆಂದು ಹೇಳಿ ಕರ್ಕೊಂಡು ಹೋಗಿದ್ದರು’

ಮೈಸೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಕಿಡ್ನಾಪ್‌ ಕೇಸ್ ದಾಖಲಾಗಿದೆ. ಸಂತ್ರಸ್ತೆಯ ಮಗ ನನ್ನ ತಾಯಿ ಕಾಣೆಯಾಗಿದ್ದಾರೆಂದು ದೂರು ದಾಖಲಿಸಿದ್ದಾರೆ. ಕೆ.ಆರ್.ನಗರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಅಶ್ಲೀಲ ವಿಡಿಯೋ ಬೆಳಕಿಗೆ ಬಂದ ಬಳಿಕ ತಾಯಿ ನಾಪತ್ತೆಯಾಗಿದ್ದಾರೆ. ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದೆ ಎಂದು ಸಂತ್ರಸ್ತ ದೂರಿನಲ್ಲಿ ಉಲ್ಲೇಖಿಸಿದ್ದಾನೆ.

ತಾಯಿಯನ್ನಯ ಬೈಕ್​ನಲ್ಲಿ ಕರೆದುಕೊಂಡು ಹೋದರು

ಸತೀಶ್ ಎಂಬಾತ ಬೈಕಿನಲ್ಲಿ ಕರೆದೊಯ್ದ ಎಂದು ಸಂತ್ರಸ್ತೆಯ ಮಗ ದೂರಿನಲ್ಲಿ ಉಲ್ಲೇಖಿಸಿದ್ದಾನೆ. ಹೊಳೆನರಸೀಪುರದ ಚೆನ್ನಾಂಬಿಕಾ ಥಿಯೇಟರ್ ಪಕ್ಕದ ಮನೆಯಲ್ಲಿ ಕೆಲಸ ತಾಯಿ ಮಾಡಿಕೊಂಡಿದ್ದರು. ಸುಮಾರು 6 ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದರು.ಲೋಕಸಭಾ ಚುನಾವಣೆ ವೇಳೆ ಸತೀಶ್ ಕರೆದುಕೊಂಡು‌ ಹೋಗಿದ್ದರು. ಭವಾನಿ ಅಕ್ಕ ಕರೆಯುತ್ತಿದ್ದಾರೆಂದು ಹೇಳಿ ಕರೆದುಕೊಂಡು‌ ಹೋಗಿದ್ದರು.

ಪೊಲೀಸ್ ಬಂದರೆ ಏನೂ‌ ಹೇಳಬೇಡಿ

ಸಂಜೆ ಮನೆಗೆ ಕರೆದುಕೊಂಡು ಬಂದು ಬಿಟ್ಟರು. ಪೊಲೀಸ್ ಬಂದರೆ ಏನೂ‌ ಹೇಳಬೇಡಿ. ಅವರಿಗೆ ಯಾವುದೇ ಕಾರಣಕ್ಕೂ ಸಿಗಬೇಡಿ. ನಿಮ್ಮ ಮೇಲೆ ಕೇಸ್ ಹಾಕಲಾಗುತ್ತದೆ. ಅವರು ಬಂದರೆ ನಮಗೆ ನೀವು ತಿಳಿಸಿ. ನಾನು ಬಂದು ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿರುವುದಾಗಿ ಸಂತ್ರಸ್ತೆಯ ಮಗ ದೂರಿನಲ್ಲಿ ವಿವರವಾಗಿ ತಿಳಿಸಿದ್ದಾನೆ.

ರಾತ್ರಿ 9 ಗಂಟೆಗೆ ತಾಯಿಯ ಅಪಹರಣವಾಗಿದೆ

ಏಪ್ರಿಲ್ 29ರಂದು ರಾತ್ರಿ 9 ಗಂಟೆಗೆ ತಾಯಿಯ ಅಪಹರಣವಾಗಿದೆ. ಎ2 ಆರೋಪಿ ಸತೀಶ್ ತಾಯಿಯನ್ನು ಕರೆದುಕೊಂಡು ಹೋದರು. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ಒತ್ತಾಯ ಮಾಡಿ ಕರೆದುಕೊಂಡು ಹೋದರು.

ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ

ಸತೀಶ್ ಹಿರೋಹೊಂಡ ಸ್ಪೈಂಡರ್ ಬೈಕ್ ನಲ್ಲಿ ಕರೆದೊಯ್ದರು‌. ನನ್ನ ತಾಯಿಯನ್ನ ಎಲ್ಲಿಗೆ ಕರೆದೊಯ್ದರು ಗೊತ್ತಿಲ್ಲ. ಮೇ. 1 ರಂದು ಗೆಳೆಯರ ಮೂಲಕ ಅಶ್ಲೀಲ ವಿಡಿಯೋ ಬಂತು. ನಿನ್ನ ಅಮ್ಮ ಕಾಲು ಕಟ್ಟಿದರು, ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಗೆಳೆಯರು ತಿಳಿಸಿದರು. ಈ ಸಂಬಂಧ ದೊಡ್ಡ ಕೇಸ್ ಆಗಿದೆ ಎಂದು ಗೆಳೆಯರೇ ಮಾಹಿತಿ ನೀಡಿದರು. ನನ್ನ ತಾಯಿಯನ್ನ ಕೂಡಿಹಾಕಿದ್ದಾರೆ. ಆ ಸಂದರ್ಭದಲ್ಲಿ ನನ್ನ ತಾಯಿಯನ್ನು ವಾಪಸ್ ಕರೆತರಲು ಸತೀಶ್​ಗೆ ಹೇಳಿದೆ. ಆದರೆ ಹಲ್ಲೆ ಪ್ರಕರಣದಲ್ಲಿ ನಿಮ್ಮ ತಾಯಿ ಆರೋಪಿ ಅಂತಾ ಸುಳ್ಳು ಹೇಳಿದ್ರು‌. ನನ್ನ ತಾಯಿಯನ್ನ ಒತ್ತಾಯಪೂರ್ವಕವಾಗಿ ಕೂಡಿಹಾಕಿದ್ದಾರೆ ಎಂದು ಸಂತ್ರಸ್ತೆಯ ಪುತ್ರ ದೂರಿನಲ್ಲಿ ಅಳಲು ತೋಡಿಕೊಂಡಿದ್ದಾನೆ.

ಸದ್ಯ ಪ್ರಕರಣದಲ್ಲಿ A1 ಆರೋಪಿ ರೇವಣ್ಣ ಮತ್ತು A2 ಆರೋಪಿ ಸತೀಶ್ ಬಾಬು ವಿರುದ್ಧ ಸೆಕ್ಷನ್ 364(A) ,365, ಹಾಗು 34 ಅಡಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ನಿನ್ನ ತಾಯಿಯ ಕಾಲು ಕಟ್ಟಿದ್ರು, ಪ್ರಜ್ವಲ್ ಬಲತ್ಕಾರ ಮಾಡಿದ್ರು..’ ರೇವಣ್ಣ ವಿರುದ್ಧ ಕಿಡ್ನಾಪ್‌ ಕೇಸ್ ದಾಖಲು

https://newsfirstlive.com/wp-content/uploads/2024/05/Revanna-1.jpg

    ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದೆ- ದೂರಿನಲ್ಲಿ ಸಂತ್ರಸ್ತ ಹೇಳಿಕೆ

    ‘ಅಶ್ಲೀಲ ವಿಡಿಯೋ ಬೆಳಕಿಗೆ ಬಂದ ಬಳಿಕ ತಾಯಿ ನಾಪತ್ತೆ ಆಗಿದ್ದಾಳೆ’

    ‘ತಾಯಿಯನ್ನು ಭವಾನಿ ಅಕ್ಕ ಕರೆಯುತ್ತಿದ್ದಾರೆಂದು ಹೇಳಿ ಕರ್ಕೊಂಡು ಹೋಗಿದ್ದರು’

ಮೈಸೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಕಿಡ್ನಾಪ್‌ ಕೇಸ್ ದಾಖಲಾಗಿದೆ. ಸಂತ್ರಸ್ತೆಯ ಮಗ ನನ್ನ ತಾಯಿ ಕಾಣೆಯಾಗಿದ್ದಾರೆಂದು ದೂರು ದಾಖಲಿಸಿದ್ದಾರೆ. ಕೆ.ಆರ್.ನಗರ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಅಶ್ಲೀಲ ವಿಡಿಯೋ ಬೆಳಕಿಗೆ ಬಂದ ಬಳಿಕ ತಾಯಿ ನಾಪತ್ತೆಯಾಗಿದ್ದಾರೆ. ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದೆ ಎಂದು ಸಂತ್ರಸ್ತ ದೂರಿನಲ್ಲಿ ಉಲ್ಲೇಖಿಸಿದ್ದಾನೆ.

ತಾಯಿಯನ್ನಯ ಬೈಕ್​ನಲ್ಲಿ ಕರೆದುಕೊಂಡು ಹೋದರು

ಸತೀಶ್ ಎಂಬಾತ ಬೈಕಿನಲ್ಲಿ ಕರೆದೊಯ್ದ ಎಂದು ಸಂತ್ರಸ್ತೆಯ ಮಗ ದೂರಿನಲ್ಲಿ ಉಲ್ಲೇಖಿಸಿದ್ದಾನೆ. ಹೊಳೆನರಸೀಪುರದ ಚೆನ್ನಾಂಬಿಕಾ ಥಿಯೇಟರ್ ಪಕ್ಕದ ಮನೆಯಲ್ಲಿ ಕೆಲಸ ತಾಯಿ ಮಾಡಿಕೊಂಡಿದ್ದರು. ಸುಮಾರು 6 ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದರು.ಲೋಕಸಭಾ ಚುನಾವಣೆ ವೇಳೆ ಸತೀಶ್ ಕರೆದುಕೊಂಡು‌ ಹೋಗಿದ್ದರು. ಭವಾನಿ ಅಕ್ಕ ಕರೆಯುತ್ತಿದ್ದಾರೆಂದು ಹೇಳಿ ಕರೆದುಕೊಂಡು‌ ಹೋಗಿದ್ದರು.

ಪೊಲೀಸ್ ಬಂದರೆ ಏನೂ‌ ಹೇಳಬೇಡಿ

ಸಂಜೆ ಮನೆಗೆ ಕರೆದುಕೊಂಡು ಬಂದು ಬಿಟ್ಟರು. ಪೊಲೀಸ್ ಬಂದರೆ ಏನೂ‌ ಹೇಳಬೇಡಿ. ಅವರಿಗೆ ಯಾವುದೇ ಕಾರಣಕ್ಕೂ ಸಿಗಬೇಡಿ. ನಿಮ್ಮ ಮೇಲೆ ಕೇಸ್ ಹಾಕಲಾಗುತ್ತದೆ. ಅವರು ಬಂದರೆ ನಮಗೆ ನೀವು ತಿಳಿಸಿ. ನಾನು ಬಂದು ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿರುವುದಾಗಿ ಸಂತ್ರಸ್ತೆಯ ಮಗ ದೂರಿನಲ್ಲಿ ವಿವರವಾಗಿ ತಿಳಿಸಿದ್ದಾನೆ.

ರಾತ್ರಿ 9 ಗಂಟೆಗೆ ತಾಯಿಯ ಅಪಹರಣವಾಗಿದೆ

ಏಪ್ರಿಲ್ 29ರಂದು ರಾತ್ರಿ 9 ಗಂಟೆಗೆ ತಾಯಿಯ ಅಪಹರಣವಾಗಿದೆ. ಎ2 ಆರೋಪಿ ಸತೀಶ್ ತಾಯಿಯನ್ನು ಕರೆದುಕೊಂಡು ಹೋದರು. ರೇವಣ್ಣ ಸಾಹೇಬರು ಕರೆದುಕೊಂಡು ಬರಲು ಹೇಳಿದ್ದಾರೆ ಎಂದು ಒತ್ತಾಯ ಮಾಡಿ ಕರೆದುಕೊಂಡು ಹೋದರು.

ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ

ಸತೀಶ್ ಹಿರೋಹೊಂಡ ಸ್ಪೈಂಡರ್ ಬೈಕ್ ನಲ್ಲಿ ಕರೆದೊಯ್ದರು‌. ನನ್ನ ತಾಯಿಯನ್ನ ಎಲ್ಲಿಗೆ ಕರೆದೊಯ್ದರು ಗೊತ್ತಿಲ್ಲ. ಮೇ. 1 ರಂದು ಗೆಳೆಯರ ಮೂಲಕ ಅಶ್ಲೀಲ ವಿಡಿಯೋ ಬಂತು. ನಿನ್ನ ಅಮ್ಮ ಕಾಲು ಕಟ್ಟಿದರು, ಪ್ರಜ್ವಲ್ ಬಲತ್ಕಾರ ಮಾಡಿದ್ದಾರೆ ಎಂದು ಗೆಳೆಯರು ತಿಳಿಸಿದರು. ಈ ಸಂಬಂಧ ದೊಡ್ಡ ಕೇಸ್ ಆಗಿದೆ ಎಂದು ಗೆಳೆಯರೇ ಮಾಹಿತಿ ನೀಡಿದರು. ನನ್ನ ತಾಯಿಯನ್ನ ಕೂಡಿಹಾಕಿದ್ದಾರೆ. ಆ ಸಂದರ್ಭದಲ್ಲಿ ನನ್ನ ತಾಯಿಯನ್ನು ವಾಪಸ್ ಕರೆತರಲು ಸತೀಶ್​ಗೆ ಹೇಳಿದೆ. ಆದರೆ ಹಲ್ಲೆ ಪ್ರಕರಣದಲ್ಲಿ ನಿಮ್ಮ ತಾಯಿ ಆರೋಪಿ ಅಂತಾ ಸುಳ್ಳು ಹೇಳಿದ್ರು‌. ನನ್ನ ತಾಯಿಯನ್ನ ಒತ್ತಾಯಪೂರ್ವಕವಾಗಿ ಕೂಡಿಹಾಕಿದ್ದಾರೆ ಎಂದು ಸಂತ್ರಸ್ತೆಯ ಪುತ್ರ ದೂರಿನಲ್ಲಿ ಅಳಲು ತೋಡಿಕೊಂಡಿದ್ದಾನೆ.

ಸದ್ಯ ಪ್ರಕರಣದಲ್ಲಿ A1 ಆರೋಪಿ ರೇವಣ್ಣ ಮತ್ತು A2 ಆರೋಪಿ ಸತೀಶ್ ಬಾಬು ವಿರುದ್ಧ ಸೆಕ್ಷನ್ 364(A) ,365, ಹಾಗು 34 ಅಡಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More