ಕಾಲೇಜಿಗೆ ತೆರಳುತಿದ್ದ ವೇಳೆ ಯುವಕನನ್ನು ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು
ಕೈ ಕಾಲು ಕಟ್ಟಿಹಾಕಿ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿರಾತಕರು
ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು
ಬೆಂಗಳೂರು: ಪ್ರೀತಿಸಿದ ತಪ್ಪಿಗೆ ಯವಕನೋರ್ವನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಕಾಲೇಜಿಗೆ ತೆರಳುತಿದ್ದ ವೇಳೆ ಯುವಕನನ್ನು ಕಿಡ್ನಾಪ್ ಮಾಡಿದ ಕಿರಾತಕರು ಈ ಕೃತ್ಯವೆಸಗಿದ್ದಾರೆ.
ಆರ್ ಆರ್ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್ ಮೇಲೆ ಕಿರಾತಕರು ಪೆಟ್ರೋಲ್ ಸುರಿದು ಬೆಂಕಿ ಹಾಕಿದ್ದಾರೆ. ಶಶಾಂಕ್ ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸುತಿದ್ದ. ಆದರೆ ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಕಳೆದ ಸೋಮವಾರದಂದು ಮೈಸೂರಿನಿಂದ ಬೆಂಗಳೂರಿಗೆ ಯುವತಿ ಬಂದಿದ್ದಳು.
ತನ್ನನ್ನು ನಂಬಿ ಬೆಂಗಳೂರಿಗೆ ಬಂದ ಯುವತಿಯನ್ನು ಶಶಾಂಕ್ ಮನೆಗೆ ಕರೆದೊಯ್ದಿದ್ದನು. ಈ ವೇಳೆ ಯುವತಿಯ ಪೋಷಕರು ಶಶಾಂಕ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಯುವತಿಯನ್ನು ಕರೆದುಕೊಂಡು ಹೋಗಿದ್ದಾರೆ. ಇದಾದ ಬಳಿಕ ಯುವತಿ ಸಹವಾಸಕ್ಕೆ ಹೋಗಲ್ಲ ಎಂದು ಹೇಳಿ ಶಶಾಂಕ್ ತನ್ನ ಪಾಡಿಗೆ ಕಾಲೇಜಿಗೆ ಹೋಗಿದ್ದಾನೆ.
ನಿನ್ನೆ ಬೆಳಗ್ಗ ತಂದೆ ರಂಗನಾಥ ಶಶಾಂಕ್ನನ್ನು ಕಾಲೇಜಿಗೆ ಡ್ರಾಪ್ ಮಾಡಿದ್ದಾರೆ.ಈ ವೇಳೆ ಬಸ್ ನಿಲ್ದಾಣದಲ್ಲಿ ಬಸ್ಗೆ ಕಾಯುತಿದ್ದ ಶಶಾಂಕ್ನನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಕೈ ಕಾಲು ಕಟ್ಟಿಹಾಕಿದ್ದಾರೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾರೆ.
ಸದ್ಯ ಶಶಾಂಕ್ ಬೆಂಕಿಯ ತಗುಲಿ ತೀವ್ರವಾಗಿ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣ ಸಂಬಂಧಿಸಿದಂತೆ ಕುಂಬಳಗೋಡು ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಾಲೇಜಿಗೆ ತೆರಳುತಿದ್ದ ವೇಳೆ ಯುವಕನನ್ನು ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು
ಕೈ ಕಾಲು ಕಟ್ಟಿಹಾಕಿ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿರಾತಕರು
ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು
ಬೆಂಗಳೂರು: ಪ್ರೀತಿಸಿದ ತಪ್ಪಿಗೆ ಯವಕನೋರ್ವನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಕಾಲೇಜಿಗೆ ತೆರಳುತಿದ್ದ ವೇಳೆ ಯುವಕನನ್ನು ಕಿಡ್ನಾಪ್ ಮಾಡಿದ ಕಿರಾತಕರು ಈ ಕೃತ್ಯವೆಸಗಿದ್ದಾರೆ.
ಆರ್ ಆರ್ ನಗರದ ನಿವಾಸಿ ರಂಗನಾಥ್ ಮತ್ತು ಸತ್ಯಪ್ರೇಮ ದಂಪತಿಯ ಪುತ್ರ ಶಶಾಂಕ್ ಮೇಲೆ ಕಿರಾತಕರು ಪೆಟ್ರೋಲ್ ಸುರಿದು ಬೆಂಕಿ ಹಾಕಿದ್ದಾರೆ. ಶಶಾಂಕ್ ತನ್ನ ಸಂಬಂಧಿಕರ ಯುವತಿಯನ್ನು ಪ್ರೀತಿಸುತಿದ್ದ. ಆದರೆ ಇಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಕಳೆದ ಸೋಮವಾರದಂದು ಮೈಸೂರಿನಿಂದ ಬೆಂಗಳೂರಿಗೆ ಯುವತಿ ಬಂದಿದ್ದಳು.
ತನ್ನನ್ನು ನಂಬಿ ಬೆಂಗಳೂರಿಗೆ ಬಂದ ಯುವತಿಯನ್ನು ಶಶಾಂಕ್ ಮನೆಗೆ ಕರೆದೊಯ್ದಿದ್ದನು. ಈ ವೇಳೆ ಯುವತಿಯ ಪೋಷಕರು ಶಶಾಂಕ್ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಯುವತಿಯನ್ನು ಕರೆದುಕೊಂಡು ಹೋಗಿದ್ದಾರೆ. ಇದಾದ ಬಳಿಕ ಯುವತಿ ಸಹವಾಸಕ್ಕೆ ಹೋಗಲ್ಲ ಎಂದು ಹೇಳಿ ಶಶಾಂಕ್ ತನ್ನ ಪಾಡಿಗೆ ಕಾಲೇಜಿಗೆ ಹೋಗಿದ್ದಾನೆ.
ನಿನ್ನೆ ಬೆಳಗ್ಗ ತಂದೆ ರಂಗನಾಥ ಶಶಾಂಕ್ನನ್ನು ಕಾಲೇಜಿಗೆ ಡ್ರಾಪ್ ಮಾಡಿದ್ದಾರೆ.ಈ ವೇಳೆ ಬಸ್ ನಿಲ್ದಾಣದಲ್ಲಿ ಬಸ್ಗೆ ಕಾಯುತಿದ್ದ ಶಶಾಂಕ್ನನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಕೈ ಕಾಲು ಕಟ್ಟಿಹಾಕಿದ್ದಾರೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಇಟ್ಟಿದ್ದಾರೆ.
ಸದ್ಯ ಶಶಾಂಕ್ ಬೆಂಕಿಯ ತಗುಲಿ ತೀವ್ರವಾಗಿ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣ ಸಂಬಂಧಿಸಿದಂತೆ ಕುಂಬಳಗೋಡು ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ