newsfirstkannada.com

ಇಂದಿನ ಆರ್​​​ಸಿಬಿ, ಕೆಕೆಆರ್​ ನಡುವಿನ ಪಂದ್ಯ ದಿಢೀರ್​​ ರದ್ದು? ಸ್ಟೋರಿ ಓದಿದ್ರೆ ಶಾಕ್​ ಆಗ್ತೀರಾ!

Share :

Published April 21, 2024 at 2:45pm

    ಇಂದು ಆರ್​​ಸಿಬಿ, ಕೋಲ್ಕತ್ತಾ ನೈಟ್​ ರೈಡರ್ಸ್​ ಮಧ್ಯೆ ರೋಚಕ ಪಂದ್ಯ

    ಈಡನ್​ ಗಾರ್ಡೆನ್​ ಸ್ಟೇಡಿಯಮ್​ನಲ್ಲಿ ನಡೆಯಲಿರೋ ಹೈವೋಲ್ಟೇಜ್​ ಮ್ಯಾಚ್

    ​​ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್​​!

ಕಳೆದ ಒಂದು ವಾರದಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗುತ್ತಿದೆ. ಇಂದು ಕೋಲ್ಕತ್ತಾದಲ್ಲೂ ಜೋರು ಮಳೆ ಆಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈಡೆನ್​ ಗಾರ್ಡೆನ್​ ಸ್ಟೇಡಿಯಮ್​ನಲ್ಲಿ ನಡೆಯಲಿರೋ ರಾಯಲ್​ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​​ ಮಧ್ಯೆ ಪಂದ್ಯ ರದ್ದಾಗಲಿದೆ ಎನ್ನಲಾಗುತ್ತಿದೆ.

ಆರ್‌ಸಿಬಿ ಇದುವರೆಗೂ ಪ್ರದರ್ಶನದಲ್ಲಿ ಸ್ಥಿರತೆ ತೋರಿಲ್ಲ. 7 ಪಂದ್ಯಗಳಲ್ಲಿ ಕೇವಲ 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಸನ್​ರೈಸರ್ಸ್​​​ ಹೈದರಾಬಾದ್​​​​ ವಿರುದ್ಧ ರೋಚಕ ಸೋಲು ಕಂಡಿತ್ತು. ಇದರಿಂದ ನೆಟ್ ರನ್ ರೇಟ್ ಕೂಡ ಹದಗೆಟ್ಟಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವನ್ನು ಕಡೆಗಣಿಸುವಂತಿಲ್ಲ. ಆದರೆ, ಎಲ್ಲರೂ ತಮ್ಮ ಪ್ರದರ್ಶನದಲ್ಲಿ ಸ್ಥಿರವಾಗಿರಬೇಕು. ಈಗಂತೂ ವಿರಾಟ್, ದಿನೇಶ್​ ಕಾರ್ತಿಕ್​​​, ಫಾಫ್​ ಡುಪ್ಲೆಸಿಸ್​​ ಫಾರ್ಮ್​ಗೆ ಬಂದಿದ್ದಾರೆ.

ಇನ್ನು, ಆರ್​ಸಿಬಿ ಮತ್ತು ಕೆಕೆಆರ್​ ​ನಡುವಿನ ಪಂದ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಮಧ್ಯಾಹ್ನ ಮ್ಯಾಚ್​​ ನಡೆಯೋ ಕಾರಣ ಹನಿ ಮಳೆಯಾಗೋ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 3 ಗಂಟೆಯಿಂದ 7ರ ನಡುವೆ ಮಳೆ ಬರುವ ಸಾಧ್ಯತೆ ಇದ್ದು, ಪಂದ್ಯ ರದ್ದು ಕೂಡ ಆಗಬಹುದು.

ಇದನ್ನೂ ಓದಿ:

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಇಂದಿನ ಆರ್​​​ಸಿಬಿ, ಕೆಕೆಆರ್​ ನಡುವಿನ ಪಂದ್ಯ ದಿಢೀರ್​​ ರದ್ದು? ಸ್ಟೋರಿ ಓದಿದ್ರೆ ಶಾಕ್​ ಆಗ್ತೀರಾ!

https://newsfirstlive.com/wp-content/uploads/2024/04/Shreyas-Iyer_Virat-Kohli.jpg

    ಇಂದು ಆರ್​​ಸಿಬಿ, ಕೋಲ್ಕತ್ತಾ ನೈಟ್​ ರೈಡರ್ಸ್​ ಮಧ್ಯೆ ರೋಚಕ ಪಂದ್ಯ

    ಈಡನ್​ ಗಾರ್ಡೆನ್​ ಸ್ಟೇಡಿಯಮ್​ನಲ್ಲಿ ನಡೆಯಲಿರೋ ಹೈವೋಲ್ಟೇಜ್​ ಮ್ಯಾಚ್

    ​​ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಅಭಿಮಾನಿಗಳಿಗೆ ಬ್ಯಾಡ್​ನ್ಯೂಸ್​​!

ಕಳೆದ ಒಂದು ವಾರದಿಂದ ಇಡೀ ದೇಶಾದ್ಯಂತ ಭಾರೀ ಮಳೆಯಾಗುತ್ತಿದೆ. ಇಂದು ಕೋಲ್ಕತ್ತಾದಲ್ಲೂ ಜೋರು ಮಳೆ ಆಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈಡೆನ್​ ಗಾರ್ಡೆನ್​ ಸ್ಟೇಡಿಯಮ್​ನಲ್ಲಿ ನಡೆಯಲಿರೋ ರಾಯಲ್​ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​​ ಮಧ್ಯೆ ಪಂದ್ಯ ರದ್ದಾಗಲಿದೆ ಎನ್ನಲಾಗುತ್ತಿದೆ.

ಆರ್‌ಸಿಬಿ ಇದುವರೆಗೂ ಪ್ರದರ್ಶನದಲ್ಲಿ ಸ್ಥಿರತೆ ತೋರಿಲ್ಲ. 7 ಪಂದ್ಯಗಳಲ್ಲಿ ಕೇವಲ 2 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಸನ್​ರೈಸರ್ಸ್​​​ ಹೈದರಾಬಾದ್​​​​ ವಿರುದ್ಧ ರೋಚಕ ಸೋಲು ಕಂಡಿತ್ತು. ಇದರಿಂದ ನೆಟ್ ರನ್ ರೇಟ್ ಕೂಡ ಹದಗೆಟ್ಟಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವನ್ನು ಕಡೆಗಣಿಸುವಂತಿಲ್ಲ. ಆದರೆ, ಎಲ್ಲರೂ ತಮ್ಮ ಪ್ರದರ್ಶನದಲ್ಲಿ ಸ್ಥಿರವಾಗಿರಬೇಕು. ಈಗಂತೂ ವಿರಾಟ್, ದಿನೇಶ್​ ಕಾರ್ತಿಕ್​​​, ಫಾಫ್​ ಡುಪ್ಲೆಸಿಸ್​​ ಫಾರ್ಮ್​ಗೆ ಬಂದಿದ್ದಾರೆ.

ಇನ್ನು, ಆರ್​ಸಿಬಿ ಮತ್ತು ಕೆಕೆಆರ್​ ​ನಡುವಿನ ಪಂದ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಮಧ್ಯಾಹ್ನ ಮ್ಯಾಚ್​​ ನಡೆಯೋ ಕಾರಣ ಹನಿ ಮಳೆಯಾಗೋ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 3 ಗಂಟೆಯಿಂದ 7ರ ನಡುವೆ ಮಳೆ ಬರುವ ಸಾಧ್ಯತೆ ಇದ್ದು, ಪಂದ್ಯ ರದ್ದು ಕೂಡ ಆಗಬಹುದು.

ಇದನ್ನೂ ಓದಿ:

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

Load More