ಸದ್ಯದಲ್ಲೇ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರೋ ಟೀಮ್ ಇಂಡಿಯಾ!
ಏಕದಿನ ಕ್ರಿಕೆಟ್ನಲ್ಲಿ ಭಾರತ ತಂಡವನ್ನು ಮುನ್ನಡೆಸಲಿರೋ ರೋಹಿತ್
ಕೆ.ಎಲ್ ರಾಹುಲ್ ಕನಸಿಗೆ ಕೊಳ್ಳಿಯಿಟ್ಟ ಕೋಚ್ ಗೌತಮ್ ಗಂಭೀರ್
ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಫೈನಲ್ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಬರೋಬ್ಬರಿ 17 ವರ್ಷಗಳ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ. ಈ ಬೆನ್ನಲ್ಲೇ ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೂಡ ವಿದಾಯ ಹೇಳಿದ್ದಾರೆ. ರಾಹುಲ್ ದ್ರಾವಿಡ್ ಜಾಗಕ್ಕೆ ಗೌತಮ್ ಗಂಭೀರ್ ಬಂದು ಕೂತಿದ್ದಾರೆ.
ಗೌತಮ್ ಗಂಭೀರ್ ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ಅನೌನ್ಸ್ ಆಗಿದ್ದಾರೆ. ಈಗಾಗಲೇ ಟೀಮ್ ಇಂಡಿಯಾದಲ್ಲಿ ಹಲವು ಬದಲಾವಣೆಗಳನ್ನು ತರಲು ಗಂಭೀರ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ತನ್ನ ಮಾಸ್ಟರ್ ಪ್ಲಾನ್ ಜಾರಿಗಾಗಿ ಗಂಭೀರ್ ಯಾವುದೇ ರೀತಿಯ ಡೇರಿಂಗ್ ಡಿಸಿಷನ್ಸ್ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ. ಈ ವಿಚಾರ ಕೆಲವರಿಗೆ ಶಾಕಿಂಗ್ ಆದ್ರೆ, ಹಲವರಿಗೆ ವರವಾಗಿದೆ.
ಕಳೆದ ವರ್ಷ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಕನ್ನಡಿಗ ಕೆಎಲ್ ರಾಹುಲ್ ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ರಿಂದ ಗೆದ್ದು ಸಂಭ್ರಮಿಸಿದ್ರು. ಈ ಮೂಲಕ ಬರೋಬ್ಬರಿ 21 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಬಳಿಕ ಹರಿಣಿಗಳ ನಾಡಿನಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿದ 2ನೇ ಟೀಮ್ ಇಂಡಿಯಾ ನಾಯಕ ಎಂಬ ದಾಖಲೆ ನಿರ್ಮಿಸಿದ್ರು. ಹಾಗಾಗಿ ರೋಹಿತ್ ಶರ್ಮಾ ಉಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ದ ಕೆ.ಎಲ್ ರಾಹುಲ್ ಅವರೇ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದವು.
ಶ್ರೀಲಂಕಾ ವಿರುದ್ಧ ಜೂನ್ 27ನೇ ತಾರೀಕಿನಿಂದ 3 ಟಿ20 ಪಂದ್ಯ ಮತ್ತು 3 ಏಕದಿನ ಪಂದ್ಯಗಳ ಸರಣಿ ಶುರುವಾಗಲಿದೆ. ಈಗಾಗಲೇ ಶ್ರೀಲಂಕಾ ವಿರುದ್ಧದ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಅನೌನ್ಸ್ ಆಗಿದೆ. ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ, ರೋಹಿತ್ 20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ರು. ಅಷ್ಟೇ ಅಲ್ಲದೇ ಶ್ರೀಲಂಕಾ ಪ್ರವಾಸದಿಂದ ರೆಸ್ಟ್ ಕೂಡ ಕೇಳಿದ್ದರು. ಬಿಸಿಸಿಐ ಕೊಹ್ಲಿ, ರೋಹಿತ್ ಮತ್ತು ಬುಮ್ರಾಗೆ ರೆಸ್ಟ್ ನೀಡಿತ್ತು. ಗಂಭೀರ್ ಕೋಚ್ ಆದ ಬಳಿಕ ಇದು ಮೊದಲ ಸರಣಿ ಆಗಿದ್ದು, ಮೂವರು ಸ್ಟಾರ್ ಆಟಗಾರರು ಶ್ರೀಲಂಕಾ ವಿರುದ್ಧ ಏಕದಿನ ಸೀರೀಸ್ ಆಡಲೇಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ವಿರಾಟ್ ಕೊಹ್ಲಿ, ರೋಹಿತ್ ಸಮ್ಮತಿಸಿದ್ದು, ಈಗ ತಂಡಕ್ಕೆ ವಾಪಸ್ಸಾಗಿದ್ದಾರೆ.
ಇನ್ನು, ಟಿ20 ವಿಶ್ವಕಪ್ನಿಂದ ದೂರ ಉಳಿದಿದ್ದ ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಬುಮ್ರಾ ಮಾತ್ರ ರೆಸ್ಟ್ನಲ್ಲಿದ್ದಾರೆ.
ಕೆ.ಎಲ್ ರಾಹುಲ್ ಬಾಳಲ್ಲಿ ಚೆಲ್ಲಾಟ
ರೋಹಿತ್ ಶರ್ಮಾ ಏಕದಿನ ಸೀರೀಸ್ನಿಂದ ರೆಸ್ಟ್ ತೆಗೆದುಕೊಂಡಿದ್ದಾರೆ ಎನ್ನಲಾಗಿತ್ತು. ಹಾಗಾಗಿ ಏಕದಿನ ಮಾದರಿಯಲ್ಲಿ ಭಾರತ ತಂಡವನ್ನು ರಾಹುಲ್ ಅವರೇ ಮುನ್ನಡೆಸಲಿದ್ದಾರೆ. ಕೋಚ್ ಗೌತಮ್ ಗಂಭೀರ್ ಕೂಡ ಕೆ.ಎಲ್ ರಾಹುಲ್ ಭಾರತ ಏಕದಿನ ತಂಡದ ಕ್ಯಾಪ್ಟನ್ ಆಗಲಿ ಎಂಬ ಅಭಿಪ್ರಾಯ ಕೂಡ ವ್ಯಕ್ತಪಡಿಸಿದ್ದಾರೆ ಅನ್ನೋ ವಿಚಾರ ತಿಳಿದು ಬಂದಿತ್ತು. ಆದರೀಗ, ರೋಹಿತ್ ವಾಪಸ್ ಬಂದಿದ್ದು, ಅವರೇ ಮುನ್ನಡೆಸುತ್ತಿದ್ದಾರೆ. ವಿಚಿತ್ರ ಎಂದರೆ ಶುಭ್ಮನ್ ಗಿಲ್ ಉಪನಾಯಕನ ಪಟ್ಟ ಕಟ್ಟಲಾಗಿದೆ. ಈ ಮೂಲಕ ಟೀಮ್ ಇಂಡಿಯಾ ಮುಂದಿನ ಕ್ಯಾಪ್ಟನ್ ಆಗಬೇಕಿದ್ದ ಕೆ.ಎಲ್ ರಾಹುಲ್ಗೆ ಬಿಗ್ ಶಾಕ್ ನೀಡಲಾಗಿದೆ.
ಗಂಭೀರ್ ವಿರುದ್ಧ ಕನ್ನಡಿಗರ ಆಕ್ರೋಶ
ಗಂಭೀರ್ ಮುಖ್ಯ ಕೋಚ್ ಆದ ಕೂಡಲೇ ರಾಜಕೀಯ ಶುರು ಮಾಡಿದ್ದಾರೆ. ಶ್ರೀಲಂಕಾ ವಿರುದ್ಧ ಏಕದಿನ ಸರಣಿಗೆ ಟೀಮ್ ಇಂಡಿಯಾ ಅನೌನ್ಸ್ ಆಗಿದ್ದು, ಉಪನಾಯಕನ ಪಟ್ಟ ಶುಭ್ಮನ್ ಗಿಲ್ಗೆ ನೀಡಲಾಗಿದೆ. ಕೆ.ಎಲ್ ರಾಹುಲ್ಗೆ ಇದ್ದ ಅವಕಾಶ ಕಸಿದುಕೊಂಡ ಗಂಭೀರ್ಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಸದ್ಯದಲ್ಲೇ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರೋ ಟೀಮ್ ಇಂಡಿಯಾ!
ಏಕದಿನ ಕ್ರಿಕೆಟ್ನಲ್ಲಿ ಭಾರತ ತಂಡವನ್ನು ಮುನ್ನಡೆಸಲಿರೋ ರೋಹಿತ್
ಕೆ.ಎಲ್ ರಾಹುಲ್ ಕನಸಿಗೆ ಕೊಳ್ಳಿಯಿಟ್ಟ ಕೋಚ್ ಗೌತಮ್ ಗಂಭೀರ್
ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್ ಫೈನಲ್ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಬರೋಬ್ಬರಿ 17 ವರ್ಷಗಳ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ. ಈ ಬೆನ್ನಲ್ಲೇ ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೂಡ ವಿದಾಯ ಹೇಳಿದ್ದಾರೆ. ರಾಹುಲ್ ದ್ರಾವಿಡ್ ಜಾಗಕ್ಕೆ ಗೌತಮ್ ಗಂಭೀರ್ ಬಂದು ಕೂತಿದ್ದಾರೆ.
ಗೌತಮ್ ಗಂಭೀರ್ ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ಅನೌನ್ಸ್ ಆಗಿದ್ದಾರೆ. ಈಗಾಗಲೇ ಟೀಮ್ ಇಂಡಿಯಾದಲ್ಲಿ ಹಲವು ಬದಲಾವಣೆಗಳನ್ನು ತರಲು ಗಂಭೀರ್ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ತನ್ನ ಮಾಸ್ಟರ್ ಪ್ಲಾನ್ ಜಾರಿಗಾಗಿ ಗಂಭೀರ್ ಯಾವುದೇ ರೀತಿಯ ಡೇರಿಂಗ್ ಡಿಸಿಷನ್ಸ್ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ. ಈ ವಿಚಾರ ಕೆಲವರಿಗೆ ಶಾಕಿಂಗ್ ಆದ್ರೆ, ಹಲವರಿಗೆ ವರವಾಗಿದೆ.
ಕಳೆದ ವರ್ಷ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಕನ್ನಡಿಗ ಕೆಎಲ್ ರಾಹುಲ್ ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ರಿಂದ ಗೆದ್ದು ಸಂಭ್ರಮಿಸಿದ್ರು. ಈ ಮೂಲಕ ಬರೋಬ್ಬರಿ 21 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಬಳಿಕ ಹರಿಣಿಗಳ ನಾಡಿನಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿದ 2ನೇ ಟೀಮ್ ಇಂಡಿಯಾ ನಾಯಕ ಎಂಬ ದಾಖಲೆ ನಿರ್ಮಿಸಿದ್ರು. ಹಾಗಾಗಿ ರೋಹಿತ್ ಶರ್ಮಾ ಉಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ದ ಕೆ.ಎಲ್ ರಾಹುಲ್ ಅವರೇ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದವು.
ಶ್ರೀಲಂಕಾ ವಿರುದ್ಧ ಜೂನ್ 27ನೇ ತಾರೀಕಿನಿಂದ 3 ಟಿ20 ಪಂದ್ಯ ಮತ್ತು 3 ಏಕದಿನ ಪಂದ್ಯಗಳ ಸರಣಿ ಶುರುವಾಗಲಿದೆ. ಈಗಾಗಲೇ ಶ್ರೀಲಂಕಾ ವಿರುದ್ಧದ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಅನೌನ್ಸ್ ಆಗಿದೆ. ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ, ರೋಹಿತ್ 20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ರು. ಅಷ್ಟೇ ಅಲ್ಲದೇ ಶ್ರೀಲಂಕಾ ಪ್ರವಾಸದಿಂದ ರೆಸ್ಟ್ ಕೂಡ ಕೇಳಿದ್ದರು. ಬಿಸಿಸಿಐ ಕೊಹ್ಲಿ, ರೋಹಿತ್ ಮತ್ತು ಬುಮ್ರಾಗೆ ರೆಸ್ಟ್ ನೀಡಿತ್ತು. ಗಂಭೀರ್ ಕೋಚ್ ಆದ ಬಳಿಕ ಇದು ಮೊದಲ ಸರಣಿ ಆಗಿದ್ದು, ಮೂವರು ಸ್ಟಾರ್ ಆಟಗಾರರು ಶ್ರೀಲಂಕಾ ವಿರುದ್ಧ ಏಕದಿನ ಸೀರೀಸ್ ಆಡಲೇಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ವಿರಾಟ್ ಕೊಹ್ಲಿ, ರೋಹಿತ್ ಸಮ್ಮತಿಸಿದ್ದು, ಈಗ ತಂಡಕ್ಕೆ ವಾಪಸ್ಸಾಗಿದ್ದಾರೆ.
ಇನ್ನು, ಟಿ20 ವಿಶ್ವಕಪ್ನಿಂದ ದೂರ ಉಳಿದಿದ್ದ ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಬುಮ್ರಾ ಮಾತ್ರ ರೆಸ್ಟ್ನಲ್ಲಿದ್ದಾರೆ.
ಕೆ.ಎಲ್ ರಾಹುಲ್ ಬಾಳಲ್ಲಿ ಚೆಲ್ಲಾಟ
ರೋಹಿತ್ ಶರ್ಮಾ ಏಕದಿನ ಸೀರೀಸ್ನಿಂದ ರೆಸ್ಟ್ ತೆಗೆದುಕೊಂಡಿದ್ದಾರೆ ಎನ್ನಲಾಗಿತ್ತು. ಹಾಗಾಗಿ ಏಕದಿನ ಮಾದರಿಯಲ್ಲಿ ಭಾರತ ತಂಡವನ್ನು ರಾಹುಲ್ ಅವರೇ ಮುನ್ನಡೆಸಲಿದ್ದಾರೆ. ಕೋಚ್ ಗೌತಮ್ ಗಂಭೀರ್ ಕೂಡ ಕೆ.ಎಲ್ ರಾಹುಲ್ ಭಾರತ ಏಕದಿನ ತಂಡದ ಕ್ಯಾಪ್ಟನ್ ಆಗಲಿ ಎಂಬ ಅಭಿಪ್ರಾಯ ಕೂಡ ವ್ಯಕ್ತಪಡಿಸಿದ್ದಾರೆ ಅನ್ನೋ ವಿಚಾರ ತಿಳಿದು ಬಂದಿತ್ತು. ಆದರೀಗ, ರೋಹಿತ್ ವಾಪಸ್ ಬಂದಿದ್ದು, ಅವರೇ ಮುನ್ನಡೆಸುತ್ತಿದ್ದಾರೆ. ವಿಚಿತ್ರ ಎಂದರೆ ಶುಭ್ಮನ್ ಗಿಲ್ ಉಪನಾಯಕನ ಪಟ್ಟ ಕಟ್ಟಲಾಗಿದೆ. ಈ ಮೂಲಕ ಟೀಮ್ ಇಂಡಿಯಾ ಮುಂದಿನ ಕ್ಯಾಪ್ಟನ್ ಆಗಬೇಕಿದ್ದ ಕೆ.ಎಲ್ ರಾಹುಲ್ಗೆ ಬಿಗ್ ಶಾಕ್ ನೀಡಲಾಗಿದೆ.
ಗಂಭೀರ್ ವಿರುದ್ಧ ಕನ್ನಡಿಗರ ಆಕ್ರೋಶ
ಗಂಭೀರ್ ಮುಖ್ಯ ಕೋಚ್ ಆದ ಕೂಡಲೇ ರಾಜಕೀಯ ಶುರು ಮಾಡಿದ್ದಾರೆ. ಶ್ರೀಲಂಕಾ ವಿರುದ್ಧ ಏಕದಿನ ಸರಣಿಗೆ ಟೀಮ್ ಇಂಡಿಯಾ ಅನೌನ್ಸ್ ಆಗಿದ್ದು, ಉಪನಾಯಕನ ಪಟ್ಟ ಶುಭ್ಮನ್ ಗಿಲ್ಗೆ ನೀಡಲಾಗಿದೆ. ಕೆ.ಎಲ್ ರಾಹುಲ್ಗೆ ಇದ್ದ ಅವಕಾಶ ಕಸಿದುಕೊಂಡ ಗಂಭೀರ್ಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್