ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಬಹಿರಂಗ ಆಕ್ರೋಶ!
ಗಂಭೀರ್ ವಿರುದ್ಧ ಆಕ್ರೋಶ ಹೊರಹಾಕಿದ ಕೆ.ಎಲ್ ರಾಹುಲ್ ಫ್ಯಾನ್ಸ್
ಟಿ20 ಸೀರೀಸ್ನಲ್ಲಿ ರಾಹುಲ್ಗೆ ಅವಕಾಶ ನೀಡಬೇಕಿತ್ತು ಎಂದು ಕಿಡಿ
ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಹಲವು ದಿನಗಳಿಂದ ಅವಕಾಶಕ್ಕಾಗಿ ಎದರು ನೋಡುತ್ತಿದ್ದರು. ಭಾರತ ಕ್ರಿಕೆಟ್ ತಂಡದಲ್ಲಿ ಸಂಜು ಸ್ಯಾಮ್ಸನ್ಗೆ ಸ್ಥಾನ ಸಿಗಬೇಕು ಎಂದು ಅಭಿಮಾನಿಗಳು ಕೂಡ ಬೆಂಬಲಕ್ಕೆ ನಿಂತಿದ್ದರು. ಈಗ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತವಾಗಿ ಡಕೌಟ್ ಆದ ಸಂಜು ಸ್ಯಾಮ್ಸನ್ ಸ್ಥಾನವನ್ನು ಅದೇ ಅಭಿಮಾನಿಗಳು ಪ್ರಶ್ನಿಸಿದ್ದಾರೆ.
ಕೆ.ಎಲ್ ರಾಹುಲ್ಗೆ ಅವಕಾಶ ನೀಡಬೇಕಿತ್ತು ಎಂದ ಫ್ಯಾನ್ಸ್!
ಭಾರತ ಟಿ20 ಕ್ರಿಕೆಟ್ ತಂಡದಲ್ಲಿ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡಬಾರದಿತ್ತು. ಅಷ್ಟೇ ಅಲ್ಲ ಸ್ಟಾರ್ ವಿಕೆಟ್ ಕೀಪರ್ ಪಂತ್ಗೂ ಚಾನ್ಸ್ ಕೊಡಬಾರದಿತ್ತು. ಬದಲಿಗೆ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಅವರನ್ನು ಆಯ್ಕೆ ಮಾಡಬೇಕಿತ್ತು ಎಂದು ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಸಲಹೆ ನೀಡಿದ್ದಾರೆ. ಪಂತ್, ಸಂಜು ಸ್ಯಾಮ್ಸನ್ಗಿಂತಲೂ ಕೆ.ಎಲ್ ರಾಹುಲ್ ಉತ್ತಮ ಆಟಗಾರ ಎಂದು ಟ್ರೆಂಡ್ ಮಾಡುತ್ತಿದ್ದಾರೆ. ರಾಹುಲ್ಗೆ ಅವಕಾಶ ನೀಡದಿದ್ದಕ್ಕೆ ಗಂಭೀರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಜೋಡಿ ಶುಭಾರಂಭ ಮಾಡಿದೆ.
ಒಂದೆಡೆ ಹಲವು ಸ್ಟಾರ್ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ರೆ, ಇನ್ನೂ ಕೆಲವು ಕ್ರಿಕೆಟರ್ಸ್ ಮುಖ್ಯ ಕೋಚ್ ಗೌತಮ್ ಗಂಭೀರ್ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಡಕ್ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಸತತ 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಡಕ್ಗೆ ವಿಕೆಟ್ ಒಪ್ಪಿಸುವ ಮೂಲಕ ಕೋಚ್ ಗಂಭೀರ್ ನಂಬಿಕೆ ಕಳೆದುಕೊಂಡರು.
ಶ್ರೀಲಂಕಾ ವಿರುದ್ಧ ಮತ್ತೆ ಸಂಜು ಫೇಲ್ಯೂರ್!
ಇನ್ನು, 3ನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಎಲೆವೆನ್ನಲ್ಲಿ ಭಾರೀ ಬದಲಾವಣೆ ಮಾಡಲಾಗಿತ್ತು. ರಿಷಬ್ ಪಂತ್ ಬದಲಿಗೆ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡಲಾಗಿತ್ತು. ಮೊದಲ 2 ಪಂದ್ಯಗಳಲ್ಲಿ ಅವಕಾಶ ನೀಡಿದ್ರೂ ಪಂತ್ ಸರಿಯಾಗಿ ಬಳಸಿಕೊಳ್ಳಲಿಲ್ಲ ಅನ್ನೋ ಆರೋಪ ಕೇಳಿ ಬಂದಿತ್ತು. ಹಾಗಾಗಿ ಸಂಜು ಅವರನ್ನೇ ಆಡಿಸಲಾಯ್ತು. ಕಳೆದ ಪಂದ್ಯದಲ್ಲಿ ಗೋಲ್ಡನ್ ಡಕೌಟ್ ಆಗಿದ್ದ ಸಂಜು ಸ್ಯಾಮ್ಸನ್ ಈ ಸಲ ಡಕೌಟ್ ಆಗಿದ್ದಾರೆ. ಹಾಗಾಗಿ ಫ್ಯಾನ್ಸ್ ನಿನಗೆ ಎಷ್ಟು ಅವಕಾಶ ಕೊಟ್ರೂ ವೇಸ್ಟ್. ಅದೇ ರಾಗ ಅದೇ ಹಾಡು, ಚೂರಾದ್ರೂ ನಾಚಿಕೆ ಆಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.
ಇದನ್ನೂ ಓದಿ: ರಿಸ್ಕ್ ಮಾಡಿ ಅವಕಾಶ ನೀಡಿದ್ದ ಕೋಚ್.. ಗಂಭೀರ್ ನಂಬಿಕೆ ಕಳೆದುಕೊಂಡ ಸ್ಟಾರ್ ಪ್ಲೇಯರ್!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಬಹಿರಂಗ ಆಕ್ರೋಶ!
ಗಂಭೀರ್ ವಿರುದ್ಧ ಆಕ್ರೋಶ ಹೊರಹಾಕಿದ ಕೆ.ಎಲ್ ರಾಹುಲ್ ಫ್ಯಾನ್ಸ್
ಟಿ20 ಸೀರೀಸ್ನಲ್ಲಿ ರಾಹುಲ್ಗೆ ಅವಕಾಶ ನೀಡಬೇಕಿತ್ತು ಎಂದು ಕಿಡಿ
ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಹಲವು ದಿನಗಳಿಂದ ಅವಕಾಶಕ್ಕಾಗಿ ಎದರು ನೋಡುತ್ತಿದ್ದರು. ಭಾರತ ಕ್ರಿಕೆಟ್ ತಂಡದಲ್ಲಿ ಸಂಜು ಸ್ಯಾಮ್ಸನ್ಗೆ ಸ್ಥಾನ ಸಿಗಬೇಕು ಎಂದು ಅಭಿಮಾನಿಗಳು ಕೂಡ ಬೆಂಬಲಕ್ಕೆ ನಿಂತಿದ್ದರು. ಈಗ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತವಾಗಿ ಡಕೌಟ್ ಆದ ಸಂಜು ಸ್ಯಾಮ್ಸನ್ ಸ್ಥಾನವನ್ನು ಅದೇ ಅಭಿಮಾನಿಗಳು ಪ್ರಶ್ನಿಸಿದ್ದಾರೆ.
ಕೆ.ಎಲ್ ರಾಹುಲ್ಗೆ ಅವಕಾಶ ನೀಡಬೇಕಿತ್ತು ಎಂದ ಫ್ಯಾನ್ಸ್!
ಭಾರತ ಟಿ20 ಕ್ರಿಕೆಟ್ ತಂಡದಲ್ಲಿ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡಬಾರದಿತ್ತು. ಅಷ್ಟೇ ಅಲ್ಲ ಸ್ಟಾರ್ ವಿಕೆಟ್ ಕೀಪರ್ ಪಂತ್ಗೂ ಚಾನ್ಸ್ ಕೊಡಬಾರದಿತ್ತು. ಬದಲಿಗೆ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ಅವರನ್ನು ಆಯ್ಕೆ ಮಾಡಬೇಕಿತ್ತು ಎಂದು ಅಭಿಮಾನಿಗಳು ಸಾಮಾಜಿಕ ಮಾಧ್ಯಮದಲ್ಲಿ ಸಲಹೆ ನೀಡಿದ್ದಾರೆ. ಪಂತ್, ಸಂಜು ಸ್ಯಾಮ್ಸನ್ಗಿಂತಲೂ ಕೆ.ಎಲ್ ರಾಹುಲ್ ಉತ್ತಮ ಆಟಗಾರ ಎಂದು ಟ್ರೆಂಡ್ ಮಾಡುತ್ತಿದ್ದಾರೆ. ರಾಹುಲ್ಗೆ ಅವಕಾಶ ನೀಡದಿದ್ದಕ್ಕೆ ಗಂಭೀರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಜೋಡಿ ಶುಭಾರಂಭ ಮಾಡಿದೆ.
ಒಂದೆಡೆ ಹಲವು ಸ್ಟಾರ್ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ರೆ, ಇನ್ನೂ ಕೆಲವು ಕ್ರಿಕೆಟರ್ಸ್ ಮುಖ್ಯ ಕೋಚ್ ಗೌತಮ್ ಗಂಭೀರ್ ನಂಬಿಕೆಯನ್ನು ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಶ್ರೀಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ಡಕ್ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಸತತ 2ನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಡಕ್ಗೆ ವಿಕೆಟ್ ಒಪ್ಪಿಸುವ ಮೂಲಕ ಕೋಚ್ ಗಂಭೀರ್ ನಂಬಿಕೆ ಕಳೆದುಕೊಂಡರು.
ಶ್ರೀಲಂಕಾ ವಿರುದ್ಧ ಮತ್ತೆ ಸಂಜು ಫೇಲ್ಯೂರ್!
ಇನ್ನು, 3ನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಎಲೆವೆನ್ನಲ್ಲಿ ಭಾರೀ ಬದಲಾವಣೆ ಮಾಡಲಾಗಿತ್ತು. ರಿಷಬ್ ಪಂತ್ ಬದಲಿಗೆ ಸಂಜು ಸ್ಯಾಮ್ಸನ್ ಅವರಿಗೆ ಅವಕಾಶ ನೀಡಲಾಗಿತ್ತು. ಮೊದಲ 2 ಪಂದ್ಯಗಳಲ್ಲಿ ಅವಕಾಶ ನೀಡಿದ್ರೂ ಪಂತ್ ಸರಿಯಾಗಿ ಬಳಸಿಕೊಳ್ಳಲಿಲ್ಲ ಅನ್ನೋ ಆರೋಪ ಕೇಳಿ ಬಂದಿತ್ತು. ಹಾಗಾಗಿ ಸಂಜು ಅವರನ್ನೇ ಆಡಿಸಲಾಯ್ತು. ಕಳೆದ ಪಂದ್ಯದಲ್ಲಿ ಗೋಲ್ಡನ್ ಡಕೌಟ್ ಆಗಿದ್ದ ಸಂಜು ಸ್ಯಾಮ್ಸನ್ ಈ ಸಲ ಡಕೌಟ್ ಆಗಿದ್ದಾರೆ. ಹಾಗಾಗಿ ಫ್ಯಾನ್ಸ್ ನಿನಗೆ ಎಷ್ಟು ಅವಕಾಶ ಕೊಟ್ರೂ ವೇಸ್ಟ್. ಅದೇ ರಾಗ ಅದೇ ಹಾಡು, ಚೂರಾದ್ರೂ ನಾಚಿಕೆ ಆಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.
ಇದನ್ನೂ ಓದಿ: ರಿಸ್ಕ್ ಮಾಡಿ ಅವಕಾಶ ನೀಡಿದ್ದ ಕೋಚ್.. ಗಂಭೀರ್ ನಂಬಿಕೆ ಕಳೆದುಕೊಂಡ ಸ್ಟಾರ್ ಪ್ಲೇಯರ್!
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್