ಶ್ರೀಲಂಕಾ ಪ್ರವಾಸಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟಿಸಿದ ಬಿಸಿಸಿಐ
ವಿಶ್ವಕಪ್ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಭಾರೀ ರಾಜಕೀಯ ಶುರು!
ಕ್ಯಾಪ್ಟನ್ ರೋಹಿತ್ ಶರ್ಮಾ ವಿರುದ್ಧ ಆಕ್ರೋಶ ಹೊರಹಾಕಿದ ನೆಟ್ಟಿಗರು
ಜಿಂಬಾಬ್ವೆ ವಿರುದ್ಧ ನಡೆದ ಟಿ20 ಸರಣಿಯಲ್ಲಿ 4-1 ಅಂತರದಿಂದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ ಟಿ20 ವಿಶ್ವಕಪ್ ಚಾಂಪಿಯನ್ ಆಗಿರೋ ಟೀಮ್ ಇಂಡಿಯಾ ಮತ್ತೊಂದು ಸರಣಿ ಗೆದ್ದಿದೆ. ಜೂನ್ 27ನೇ ತಾರೀಕಿನಿಂದ ಶ್ರೀಲಂಕಾ ಪ್ರವಾಸ ಶುರುವಾಗಲಿದ್ದು, 3 ಟಿ20 ಪಂದ್ಯ ಮತ್ತು 3 ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಕೊನೆಗೂ ಬಿಸಿಸಿಐ ಅಳೆದು ತೂಗಿ ಬಲಿಷ್ಠ ಟೀಮ್ ಇಂಡಿಯಾ ಅನೌನ್ಸ್ ಮಾಡಿದೆ.
ವಿಶ್ವಕಪ್ ಗೆದ್ದ ಕೂಡಲೇ ಕ್ಯಾಪ್ಟನ್ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಗುಡ್ ಬೈ ಹೇಳಿದ್ರು. ಹಾಗಾಗಿ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾಗೆ ಹೊಸ ಕ್ಯಾಪ್ಟನ್ ಬೇಕಿತ್ತು. ಭಾರತ ಟಿ20 ಕ್ರಿಕೆಟ್ ತಂಡದ ಕ್ಯಾಪ್ಟನ್ ರೇಸ್ನಲ್ಲಿ ಹಾರ್ದಿಕ್ ಪಾಂಡ್ಯ ಹೆಸರು ಕೇಳಿ ಬಂದಿತ್ತು. ಕ್ಯಾಪ್ಟನ್ ಆಗೋ ಕನಸು ಕಂಡಿದ್ದ ಹಾರ್ದಿಕ್ ಪಾಂಡ್ಯಗೆ ರೋಹಿತ್ ಬಿಗ್ ಶಾಕ್ ಕೊಟ್ಟಿದ್ದಾರೆ.
ಹಾರ್ದಿಕ್ ಪಾಂಡ್ಯಗೆ ಚೆಕ್ಮೇಟ್ ಇಟ್ಟ ರೋಹಿತ್..!
ಹಾರ್ದಿಕ್ ಪಾಂಡ್ಯ ಬದಲಿಗೆ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಭಾರತ ಟಿ20 ತಂಡದ ಕ್ಯಾಪ್ಟನ್ ಆಗಲಿ ಎಂದು ರೋಹಿತ್ ಶರ್ಮಾ ಸೆಲೆಕ್ಷನ್ ಕಮಿಟಿ ಮುಂದೆ ಪ್ರಪೋಸಲ್ ಇಟ್ಟಿದ್ದರು. ಯಾವುದೇ ಕಾರಣಕ್ಕೂ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ಆಗೋದು ಬೇಡ. ಇವರ ಬದಲಿಗೆ ಸೂರ್ಯ ಭಾರತ ತಂಡವನ್ನು ಮುನ್ನಡೆಸಲಿ ಎಂದಿದ್ದರು. ಅದರಂತೆಯೇ ರೋಹಿತ್ ಮಾತಿಗೆ ಮನ್ನಣೆ ನೀಡಿದ ಸೆಲೆಕ್ಷನ್ ಕಮಿಟಿ ಟೀಮ್ ಇಂಡಿಯಾ ಟಿ20 ಕ್ಯಾಪ್ಟನ್ ಆಗಿ ಸೂರ್ಯ ಅವರನ್ನು ಆಯ್ಕೆ ಮಾಡಿದೆ.
Rohit sharma is the biggest Politician I have ever seen
KL Rahul was in Future Contention for ODI Captaincy, he removed him from even VC
Hardik pandya was all set to become T20i Captain, he suggested Sky over him
Did politics with Virat Kohli a few years back#INDvsSL pic.twitter.com/SrSVsOzlow
— 𝙎𝙤𝙣𝙪 ✨ (@KLfied_) July 18, 2024
ರೋಹಿತ್ ವಿರುದ್ಧ ಭಾರೀ ಅಸಮಾಧಾನ
ಇನ್ನು, ಈ ಬೆಳವಣಿಗೆ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಎಲ್ ರಾಹುಲ್ ಮುಂದಿನ ಭಾರತ ತಂಡದ ಏಕದಿನ ಕ್ಯಾಪ್ಟನ್ ಆಗಬೇಕಿತ್ತು. ಆದರೆ, ರೋಹಿತ್ ರಾಹುಲ್ ಅವರನ್ನು ಉಪನಾಯಕನ ಸ್ಥಾನದಿಂದ ಕಿತ್ತು ಹಾಕಿದ. ಹಾರ್ದಿಕ್ ಪಾಂಡ್ಯ ಟಿ20 ಕ್ಯಾಪ್ಟನ್ ಆಗಬೇಕಿದ್ದ. ಆತನಿಗೂ ಮೋಸ ಮಾಡಿದ. ವಿರಾಟ್ ಕೊಹ್ಲಿ ಕ್ಯಾಪ್ಟನ್ ಆಗಿದ್ದಾಗಲೂ ರಾಜಕೀಯ ಮಾಡಿದ್ದ. ಹಾಗಾಗಿ ರೋಹಿತ್ ಕ್ರಿಕೆಟರ್ ಅಲ್ಲ, ಒಬ್ಬ ರಾಜಕಾರಣಿ ಎಂದು ನೆಟ್ಟಿಗರು ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ: ಹಾರ್ದಿಕ್ಗೆ ಬಿಗ್ ಶಾಕ್ ಕೊಟ್ಟ ರೋಹಿತ್.. ಟೀಮ್ ಇಂಡಿಯಾದಲ್ಲಿ ಪಾಂಡ್ಯ ಯುಗಾಂತ್ಯ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಶ್ರೀಲಂಕಾ ಪ್ರವಾಸಕ್ಕೆ ಬಲಿಷ್ಠ ಟೀಮ್ ಇಂಡಿಯಾ ಪ್ರಕಟಿಸಿದ ಬಿಸಿಸಿಐ
ವಿಶ್ವಕಪ್ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಭಾರೀ ರಾಜಕೀಯ ಶುರು!
ಕ್ಯಾಪ್ಟನ್ ರೋಹಿತ್ ಶರ್ಮಾ ವಿರುದ್ಧ ಆಕ್ರೋಶ ಹೊರಹಾಕಿದ ನೆಟ್ಟಿಗರು
ಜಿಂಬಾಬ್ವೆ ವಿರುದ್ಧ ನಡೆದ ಟಿ20 ಸರಣಿಯಲ್ಲಿ 4-1 ಅಂತರದಿಂದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ ಟಿ20 ವಿಶ್ವಕಪ್ ಚಾಂಪಿಯನ್ ಆಗಿರೋ ಟೀಮ್ ಇಂಡಿಯಾ ಮತ್ತೊಂದು ಸರಣಿ ಗೆದ್ದಿದೆ. ಜೂನ್ 27ನೇ ತಾರೀಕಿನಿಂದ ಶ್ರೀಲಂಕಾ ಪ್ರವಾಸ ಶುರುವಾಗಲಿದ್ದು, 3 ಟಿ20 ಪಂದ್ಯ ಮತ್ತು 3 ಏಕದಿನ ಪಂದ್ಯಗಳ ಸರಣಿ ನಡೆಯಲಿದೆ. ಕೊನೆಗೂ ಬಿಸಿಸಿಐ ಅಳೆದು ತೂಗಿ ಬಲಿಷ್ಠ ಟೀಮ್ ಇಂಡಿಯಾ ಅನೌನ್ಸ್ ಮಾಡಿದೆ.
ವಿಶ್ವಕಪ್ ಗೆದ್ದ ಕೂಡಲೇ ಕ್ಯಾಪ್ಟನ್ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ಗೆ ಗುಡ್ ಬೈ ಹೇಳಿದ್ರು. ಹಾಗಾಗಿ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾಗೆ ಹೊಸ ಕ್ಯಾಪ್ಟನ್ ಬೇಕಿತ್ತು. ಭಾರತ ಟಿ20 ಕ್ರಿಕೆಟ್ ತಂಡದ ಕ್ಯಾಪ್ಟನ್ ರೇಸ್ನಲ್ಲಿ ಹಾರ್ದಿಕ್ ಪಾಂಡ್ಯ ಹೆಸರು ಕೇಳಿ ಬಂದಿತ್ತು. ಕ್ಯಾಪ್ಟನ್ ಆಗೋ ಕನಸು ಕಂಡಿದ್ದ ಹಾರ್ದಿಕ್ ಪಾಂಡ್ಯಗೆ ರೋಹಿತ್ ಬಿಗ್ ಶಾಕ್ ಕೊಟ್ಟಿದ್ದಾರೆ.
ಹಾರ್ದಿಕ್ ಪಾಂಡ್ಯಗೆ ಚೆಕ್ಮೇಟ್ ಇಟ್ಟ ರೋಹಿತ್..!
ಹಾರ್ದಿಕ್ ಪಾಂಡ್ಯ ಬದಲಿಗೆ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಭಾರತ ಟಿ20 ತಂಡದ ಕ್ಯಾಪ್ಟನ್ ಆಗಲಿ ಎಂದು ರೋಹಿತ್ ಶರ್ಮಾ ಸೆಲೆಕ್ಷನ್ ಕಮಿಟಿ ಮುಂದೆ ಪ್ರಪೋಸಲ್ ಇಟ್ಟಿದ್ದರು. ಯಾವುದೇ ಕಾರಣಕ್ಕೂ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಕ್ಯಾಪ್ಟನ್ ಆಗೋದು ಬೇಡ. ಇವರ ಬದಲಿಗೆ ಸೂರ್ಯ ಭಾರತ ತಂಡವನ್ನು ಮುನ್ನಡೆಸಲಿ ಎಂದಿದ್ದರು. ಅದರಂತೆಯೇ ರೋಹಿತ್ ಮಾತಿಗೆ ಮನ್ನಣೆ ನೀಡಿದ ಸೆಲೆಕ್ಷನ್ ಕಮಿಟಿ ಟೀಮ್ ಇಂಡಿಯಾ ಟಿ20 ಕ್ಯಾಪ್ಟನ್ ಆಗಿ ಸೂರ್ಯ ಅವರನ್ನು ಆಯ್ಕೆ ಮಾಡಿದೆ.
Rohit sharma is the biggest Politician I have ever seen
KL Rahul was in Future Contention for ODI Captaincy, he removed him from even VC
Hardik pandya was all set to become T20i Captain, he suggested Sky over him
Did politics with Virat Kohli a few years back#INDvsSL pic.twitter.com/SrSVsOzlow
— 𝙎𝙤𝙣𝙪 ✨ (@KLfied_) July 18, 2024
ರೋಹಿತ್ ವಿರುದ್ಧ ಭಾರೀ ಅಸಮಾಧಾನ
ಇನ್ನು, ಈ ಬೆಳವಣಿಗೆ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆ.ಎಲ್ ರಾಹುಲ್ ಮುಂದಿನ ಭಾರತ ತಂಡದ ಏಕದಿನ ಕ್ಯಾಪ್ಟನ್ ಆಗಬೇಕಿತ್ತು. ಆದರೆ, ರೋಹಿತ್ ರಾಹುಲ್ ಅವರನ್ನು ಉಪನಾಯಕನ ಸ್ಥಾನದಿಂದ ಕಿತ್ತು ಹಾಕಿದ. ಹಾರ್ದಿಕ್ ಪಾಂಡ್ಯ ಟಿ20 ಕ್ಯಾಪ್ಟನ್ ಆಗಬೇಕಿದ್ದ. ಆತನಿಗೂ ಮೋಸ ಮಾಡಿದ. ವಿರಾಟ್ ಕೊಹ್ಲಿ ಕ್ಯಾಪ್ಟನ್ ಆಗಿದ್ದಾಗಲೂ ರಾಜಕೀಯ ಮಾಡಿದ್ದ. ಹಾಗಾಗಿ ರೋಹಿತ್ ಕ್ರಿಕೆಟರ್ ಅಲ್ಲ, ಒಬ್ಬ ರಾಜಕಾರಣಿ ಎಂದು ನೆಟ್ಟಿಗರು ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ: ಹಾರ್ದಿಕ್ಗೆ ಬಿಗ್ ಶಾಕ್ ಕೊಟ್ಟ ರೋಹಿತ್.. ಟೀಮ್ ಇಂಡಿಯಾದಲ್ಲಿ ಪಾಂಡ್ಯ ಯುಗಾಂತ್ಯ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ