Subscribe

0

user
  • Manage Subscription
  • Bookmarks
  • My Profile
  • Log Out
  • LIVE
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ವಿದೇಶ
  • ಸ್ಪೋರ್ಟ್ಸ್
  • ಆರೋಗ್ಯ
  • ಲೈಫ್‌ಸ್ಟೈಲ್
  • ಎಜುಕೇಶನ್
  • ಟೆಕ್
  • Sign in with Email

By clicking the button, I accept the Terms of Use of the service and its Privacy Policy, as well as consent to the processing of personal data.

Don’t have an account? Signup

ad_close_btn
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸ್ಪೋರ್ಟ್ಸ್
  • ಆರೋಗ್ಯ

Powered by :

IPL-2025 ಟಾಪ್ ನ್ಯೂಸ್

ಒಂದು ಫೋಟೋ ಹಲವು ಅರ್ಥ.. KL ರಾಹುಲ್ ಸೈಲೆಂಟ್​ ಅಲ್ಲೇ ಟಕ್ಕರ್ ಕೊಟ್ರಾ?

author-image
Ganesh
29 May 2024 14:13 IST
Updated On 30 May 2024 06:15 IST
Follow Us
ಒಂದು ಫೋಟೋ ಹಲವು ಅರ್ಥ.. KL ರಾಹುಲ್ ಸೈಲೆಂಟ್​ ಅಲ್ಲೇ ಟಕ್ಕರ್ ಕೊಟ್ರಾ?
Advertisment
  • ರಾಹುಲ್ ಮುಖ ನೋಡಿ RCB ಫ್ಯಾನ್ಸ್ ಇಟ್ಟ ಬೇಡಿಕೆ ಏನು?
  • ರಾಹುಲ್​ಗೆ ಅವಮಾನ ಮಾಡಿರುವ LSG ಮಾಲೀಕ
  • ನಾವು ನಿಮ್ಮನ್ನು ಮಿಸ್ ಮಾಡಿಕೊಳ್ತಿದ್ದೇವೆ ಎಂದ ಫ್ಯಾನ್ಸ್

ಟೀಂ ಇಂಡಿಯಾ ಸ್ಟಾರ್, ಕನ್ನಡಿಗ ಕೆ.ಎಲ್.ರಾಹುಲ್ ಟ್ವಿಟರ್​ನಲ್ಲಿ ಫೋಟೋ ಒಂದನ್ನು ಶೇರ್ ಮಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಐಪಿಎಲ್ ಟೂರ್ನಿ ಮುಕ್ತಾಯಗೊಂಡಿದೆ. ಕೆ.ಎಲ್. ರಾಹುಲ್ ಅವರು ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದರು. ಇವರ ನೇತೃತ್ವದಲ್ಲಿ ಎಲ್​ಎಸ್​ಜಿ 14 ಪಂದ್ಯಗಳನ್ನು ಆಡಿ 7 ರಲ್ಲಿ ಸೋತು 7 ರಲ್ಲಿ ಗೆದ್ದಿತು. ಆದರೆ ಪ್ಲೇ-ಆಫ್ ಪ್ರವೇಶಿಸಲು ವಿಫಲವಾಗಿತ್ತು. ಈ ನಡುವೆ ಸತತ ಸೋಲುಗಳಿಂದ ಅಸಮಾಧಾನ ವ್ಯಕ್ತಪಡಿಸಿದ್ದ ಎಲ್​ಎಸ್​ಜಿ ಮಾಲೀಕ, ರಾಹುಲ್ ಅವರನ್ನು ಸರ್ವಜನಿಕವಾಗಿ ನಿಂದಿಸಿದ್ದರು.

ಇದನ್ನೂ ಓದಿ:ಈ 5 ಆಟಗಾರರ ಮೇಲೆ ಭಾರೀ ನಿರೀಕ್ಷೆ.. ಪುಟಿದೆದ್ರೆ ಭಾರತಕ್ಕೆ ವಿಶ್ವಕಪ್ ಗ್ಯಾರಂಟಿ..!

ಇದೀಗ ವಿಶ್ವಕಪ್ ಟೂರ್ನಿ ಆರಂಭಕ್ಕೆ ಕೌಂಟ್​ಡೌನ್ ಶುರುವಾಗಿದೆ. ಆದರೆ ಕೆಎಲ್​ಗೆ ಟೀಂ ಇಂಡಿಯಾದಲ್ಲಿ ಸ್ಥಾನವನ್ನು ನೀಡಿಲ್ಲ. ವಿಶ್ವಕಪ್​ಗೆ ರಾಹುಲ್ ಆಯ್ಕೆ ಆಗುತ್ತಾರೆ ಎನ್ನಲಾಗಿತ್ತು. ಬಿಸಿಸಿಐ ಆಯ್ಕೆ ಸಮಿತಿ ರಾಹುಲ್​​ರನ್ನು ತಂಡದಿಂದ ಕೈಬಿಟ್ಟಿದೆ. ಎರಡೆರಡು ಆಘಾತಗಳ ನಡುವೆ ರಾಹುಲ್ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

🏝️ pic.twitter.com/EMt1Rprba5

— K L Rahul (@klrahul) May 29, 2024

ಇದೀಗ ಬೇಸರದಲ್ಲಿರುವ ಫೋಟೋವನ್ನು ರಾಹುಲ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಪಾರ್ಕ್​ ಒಂದರಲ್ಲಿ ವಾಕ್ ಮಾಡುತ್ತಿರುವ ಫೋಟೋ ಅದಾಗಿದೆ. ಅದರಲ್ಲಿ ಕೆ.ಎಲ್.ರಾಹುಲ್ ಅವರ ಮುಖ ನೋಡಿದ್ರೆ ಬೇಸರದಲ್ಲಿರೋದು ಗೊತ್ತಾಗುತ್ತಿದೆ. ಇದನ್ನು ನೋಡಿದ ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ಊಹೆ ಮಾಡಿಕೊಳ್ತಿದ್ದಾರೆ. ಅದರಲ್ಲೂ ಆರ್​ಸಿಬಿ ಅಭಿಮಾನಿಗಳು ಬೆಂಗಳೂರು ತಂಡಕ್ಕೆ ಸೇರಿಕೊಳ್ಳಿ. ನಾವು ಅವಮಾನವನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಡಿವೋರ್ಸ್ ಸುದ್ದಿ ಬೆನ್ನಲ್ಲೇ ಮತ್ತೊಂದು ರಹಸ್ಯ ಫೋಟೋ ಶೇರ್ ಮಾಡಿದ ಪಾಂಡ್ಯ ಪತ್ನಿ.. ಟಾಂಟ್ ಕೊಟ್ರಾ..?

We miss you in world cup #KL

— KUDALINGAM MUTHU (@KUDALINGAM49671) May 29, 2024

ಇನ್ನು ಕೆಲವರು ಟಿ20 ವಿಶ್ವಕಪ್​ ಉಲ್ಲೇಖಿಸಿ ಕಮೆಂಟ್ ಮಾಡಿದ್ದಾರೆ. ಖಂಡಿತವಾಗಿಯೂ ನಾವು, ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ನೀವು ತಂಡದಲ್ಲಿ ಇರಬೇಕಿತ್ತು ಎಂದಿದ್ದಾರೆ. ಇನ್ನೂ ಕೆಲವರು ಗಾರ್ಡನ್​​ನಲ್ಲಿ ನಿಮ್ಮ ಬಟ್ಟೆಗಳು ಒದ್ದೆಯಾಗಿವೆ. ಮುಂದೆ ಭಾರತ ತಂಡಕ್ಕೆ ಆಯ್ಕೆ ಆಗ್ತೀರಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ:ಅಂತೆ-ಕಂತೆ ವದಂತಿಗಳ ಮಧ್ಯೆ ಟ್ವೀಟ್ ಮಾಡಿ ನಾಲ್ಕು ಫೋಟೋ ಶೇರ್ ಮಾಡಿದ ಹಾರ್ದಿಕ್ ಪಾಂಡ್ಯ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
FOLLOW NEWSFIRST FOR
LATEST UPDATES
YouTubeFacebookTwitterInstagram
Subscribe to our Newsletter! Be the first to get exclusive offers and the latest news
logo

Related Articles
Read the Next Article
Latest Stories
Subscribe to our Newsletter! Be the first to get exclusive offers and the latest news



Quick Links

  • IC
  • GRIEVANCE
  • FEED
  • CONTACT US

Olecom Media Pvt Ltd. © 2025

Powered by