/newsfirstlive-kannada/media/post_attachments/wp-content/uploads/2024/07/Pandya_KL-Rahul.jpg)
ಜಿಂಬಾಬ್ವೆ ವಿರುದ್ಧದ 5 ಪಂದ್ಯಗಳ ಟಿ20 ಸರಣಿ ಬೆನ್ನಲ್ಲೇ ಟೀಮ್ ಇಂಡಿಯಾ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ 3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಈ ಸರಣಿಗೆ ರೋಹಿತ್ ಶರ್ಮಾ ಅಲಭ್ಯರಾಗಿದ್ದು, ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಕೆ.ಎಲ್ ರಾಹುಲ್ ಕ್ಯಾಪ್ಟನ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು, ಜುಲೈ 27ನೇ ತಾರೀಕಿನಿಂದ ಶುರುವಾಗಲಿರೋ ಪ್ರವಾಸಕ್ಕೆ ಇನ್ನಷ್ಟೇ ತಂಡವನ್ನು ಪ್ರಕಟಿಸಬೇಕಿದೆ. ಜತೆಗೆ ಟೀಮ್ ಇಂಡಿಯಾಗೆ ಹೊಸ ಕೋಚ್ ಕೂಡ ಆಯ್ಕೆಯಾಗಬೇಕಿದೆ. ಇದರ ಮಧ್ಯೆ ಪ್ರಮುಖ ಸುದ್ದಿ ಒಂದು ಹೊರಬಿದ್ದಿದ್ದು, ಶ್ರೀಲಂಕಾ ಪ್ರವಾಸಕ್ಕೆ ಟೀಮ್ ಇಂಡಿಯಾದ ಮೂವರು ಅನುಭವಿ ಆಟಗಾರರು ಲಭ್ಯರಿರುವುದಿಲ್ಲ ಎಂದು ತಿಳಿದು ಬಂದಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾಗೆ ಸೀರೀಸ್ನಿಂದ ರೆಸ್ಟ್ ನೀಡಲಾಗುತ್ತಿದೆ.
ಸದ್ಯಕ್ಕೆ ಸಿಕ್ಕಿರೋ ಮಾಹಿತಿ ಪ್ರಕಾರ ಕೊಹ್ಲಿ, ರೋಹಿತ್ ಮತ್ತು ಬುಮ್ರಾ ಅವರಿಗೆ ರೆಸ್ಟ್ ನೀಡಲಾಗಿದೆ. ಟೀಮ್ ಇಂಡಿಯಾಗೆ ಕಮ್ಬ್ಯಾಕ್ ಮಾಡೋ ಮುನ್ನ ಈ ಮೂವರು ತಮ್ಮ ವಿರಾಮದ ಅವಧಿ ವಿಸ್ತರಣೆಗೆ ಮನವಿ ಮಾಡಿದ್ದಾರೆ. ಹೀಗಾಗಿ ಶ್ರೀಲಂಕಾ ಪ್ರವಾಸಕ್ಕೆ ಇವರು ಅಲಭ್ಯರಾಗಿದ್ದು, ರೋಹಿತ್ ಅನುಪಸ್ಥಿತಿಯಲ್ಲಿ ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಏಕದಿನ ಫಾರ್ಮೆಟ್ನಲ್ಲಿ ಟೀಮ್ ಇಂಡಿಯಾದ ಕ್ಯಾಪ್ಟನ್ ಕೆ.ಎಲ್ ರಾಹುಲ್ ಆಗಲಿದ್ದಾರೆ. ಹಾರ್ದಿಕ್, ರಾಹುಲ್ ಇಬ್ಬರು ಬಿಸಿಸಿಐ ಮೊದಲ ಆಯ್ಕೆಯಾಗಿದ್ದಾರೆ.
ಹಾರ್ದಿಕ್ ಇದ್ರೂ ರಾಹುಲ್ಗೆ ಕ್ಯಾಪ್ಟನ್ಸಿ ಯಾಕೆ?
ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್ಗೆ ಬೆಸ್ಟ್ ಕ್ಯಾಪ್ಟನ್. ಏಕದಿನ ಮಾದರಿ ಕ್ಯಾಪ್ಟನ್ಸಿಗೆ ರಾಹುಲ್ ಬೆಸ್ಟ್ ಚಾಯ್ಸ್. ಇದಕ್ಕೆ ಹಲವಾರು ಕಾರಣಗಳು. ಗೌತಮ್ ಗಂಭೀರ್ ಟೀಮ್ ಇಂಡಿಯಾದ ಮುಖ್ಯ ಕೋಚ್ ಆದಮೇಲೆ ಎಲ್ಲಾ ಮಾದರಿಗೂ ಪ್ರತ್ಯೇಕ ತಂಡಗಳು ಮಾಡೋ ಪ್ಲಾನ್ ಇದೆ. ಹಾಗಾಗಿ ಭವಿಷ್ಯದಲ್ಲಿ ಒಂದೊಂದು ಫಾರ್ಮೇಟ್ ಒಬ್ಬೊಬ್ಬರು ಕ್ಯಾಪ್ಟನ್ ಆಗೋ ಸಾಧ್ಯತೆ ಇದೆ. ಆದ್ದರಿಂದ ರಾಹುಲ್ ಅವರಿಗೆ ಏಕದಿನ ಫಾರ್ಮೇಟ್ ಕ್ಯಾಪ್ಟನ್ ಮಾಡಲು ಬಿಸಿಸಿಐ ಸಜ್ಜಾಗಿದೆ. ಈ ಹಿಂದೆ ಕೆ.ಎಲ್ ರಾಹುಲ್ ಅವರು ಸೌತ್ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಅಷ್ಟೇ ಅಲ್ಲ ಹಾರ್ದಿಕ್ ಪಾಂಡ್ಯ ಕೂಡ ಟಿ20 ಕ್ರಿಕೆಟ್ನಲ್ಲಿ ಭಾರತ ತಂಡವನ್ನು ಲೀಡ್ ಮಾಡಿದ್ದಾರೆ.
ಇದನ್ನೂ ಓದಿ:ಅಂದು ಅವಮಾನ ಇಂದು ಸನ್ಮಾನ! ಕ್ಯಾಪ್ಟನ್ ಆಗುವಂತೆ KL ರಾಹುಲ್ ಕಾಲು ಹಿಡಿದ BCCI
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ