ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯ ರಕ್ಷಣೆ
ಲವ್ ಮ್ಯಾರೇಜ್ ಹಿನ್ನೆಲೆಯಲ್ಲಿ ಪೋಷಕರಿಂದ ದೂರ
ಪ್ರೀತಿಸಿ ಎರಡು ಮಕ್ಕಳ ಮಾಡಿ ರಾಕ್ಷಸನಾದ ಪ್ರಿಯತಮ
ಬೆಂಗಳೂರು: ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯ ಪ್ರಾಣವನ್ನು ಪೊಲೀಸರು ಉಳಿಸಿ ಕರ್ತವ್ಯ ಮರೆದಿದ್ದಾರೆ. ನಿಖಿತಾ (28) ರಕ್ಷಣೆಗೆ ಒಳಗಾದ ಮಹಿಳೆ.
ಕೌಟುಂಬಿಕ ಕಲಹ ಹಿನ್ನೆಲೆ ಗಂಡ ದಿವಾಕರ್ನಿಂದ ಚಾಕು ಇರಿತಕ್ಕೆ ಒಳಗಾಗಿದ್ದಳು. ಕಳೆದ ಎರಡು ದಿನಗಳ ಹಿಂದೆ ಪತಿ ಜತೆ ಬೈಕ್ನಲ್ಲಿ ತೆರಳುತ್ತಿದ್ದಳು. ಈ ವೇಳೆ ಬೈಕ್ ನಿಲ್ಲಿಸಿ ನಡು ರಸ್ತೆಯಲ್ಲಿ ಪತ್ನಿಗೆ ಐದು ಬಾರಿ ಇರಿದು ದಿವಾಕರ್ ಎಸ್ಕೇಪ್ ಆಗಿದ್ದ. ರಕ್ತದ ಮಡುವಿನಲ್ಲಿದ್ದ ನಿಖಿತಾರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೇರೆದಿದ್ದಾರೆ. ಆಕೆಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ನಾಲ್ಕು ಬಾಟಲ್ ರಕ್ತದ ವ್ಯವಸ್ಥೆ ಮಾಡಿದರು.
ಅಂದ್ಹಾಗೆ ನಿಖಿತಾ ದಿವಾಕರ್ನನ್ನು ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಸಿ ಮದುವೆಯಾದ ಕಾರಣ ಪೋಷಕರಿಂದ ನಿಖಿತಾ ದೂರವಾಗಿದ್ದಳು. ಆಸ್ಪತ್ರೆಯಲ್ಲಿ ನಿಖಿತಾರ ಬಾಣಸವಾಡಿ ಪೊಲೀಸರು ಆರೈಕೆ ಮಾಡುತ್ತಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಆರೋಪಿ ದೀವಾಕರ್ನನ್ನು ಪೊಲೀಸರು ಬಂಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯ ರಕ್ಷಣೆ
ಲವ್ ಮ್ಯಾರೇಜ್ ಹಿನ್ನೆಲೆಯಲ್ಲಿ ಪೋಷಕರಿಂದ ದೂರ
ಪ್ರೀತಿಸಿ ಎರಡು ಮಕ್ಕಳ ಮಾಡಿ ರಾಕ್ಷಸನಾದ ಪ್ರಿಯತಮ
ಬೆಂಗಳೂರು: ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯ ಪ್ರಾಣವನ್ನು ಪೊಲೀಸರು ಉಳಿಸಿ ಕರ್ತವ್ಯ ಮರೆದಿದ್ದಾರೆ. ನಿಖಿತಾ (28) ರಕ್ಷಣೆಗೆ ಒಳಗಾದ ಮಹಿಳೆ.
ಕೌಟುಂಬಿಕ ಕಲಹ ಹಿನ್ನೆಲೆ ಗಂಡ ದಿವಾಕರ್ನಿಂದ ಚಾಕು ಇರಿತಕ್ಕೆ ಒಳಗಾಗಿದ್ದಳು. ಕಳೆದ ಎರಡು ದಿನಗಳ ಹಿಂದೆ ಪತಿ ಜತೆ ಬೈಕ್ನಲ್ಲಿ ತೆರಳುತ್ತಿದ್ದಳು. ಈ ವೇಳೆ ಬೈಕ್ ನಿಲ್ಲಿಸಿ ನಡು ರಸ್ತೆಯಲ್ಲಿ ಪತ್ನಿಗೆ ಐದು ಬಾರಿ ಇರಿದು ದಿವಾಕರ್ ಎಸ್ಕೇಪ್ ಆಗಿದ್ದ. ರಕ್ತದ ಮಡುವಿನಲ್ಲಿದ್ದ ನಿಖಿತಾರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೇರೆದಿದ್ದಾರೆ. ಆಕೆಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ನಾಲ್ಕು ಬಾಟಲ್ ರಕ್ತದ ವ್ಯವಸ್ಥೆ ಮಾಡಿದರು.
ಅಂದ್ಹಾಗೆ ನಿಖಿತಾ ದಿವಾಕರ್ನನ್ನು ಪ್ರೀತಿಸಿ ಮದುವೆಯಾಗಿದ್ದರು. ಪ್ರೀತಿಸಿ ಮದುವೆಯಾದ ಕಾರಣ ಪೋಷಕರಿಂದ ನಿಖಿತಾ ದೂರವಾಗಿದ್ದಳು. ಆಸ್ಪತ್ರೆಯಲ್ಲಿ ನಿಖಿತಾರ ಬಾಣಸವಾಡಿ ಪೊಲೀಸರು ಆರೈಕೆ ಮಾಡುತ್ತಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಆರೋಪಿ ದೀವಾಕರ್ನನ್ನು ಪೊಲೀಸರು ಬಂಧಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ