/newsfirstlive-kannada/media/post_attachments/wp-content/uploads/2024/10/TEAM-INDIA-1.jpg)
ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಸಿರಾಜ್. ಕಳೆದ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಬೌಲ್ ಮಾಡಿರೋ ಇವರು ಈ ಬಾರಿ ಬೆಂಚ್ ಕಾಯಬಹುದು. ಇವರು ಉತ್ತಮ ಬೌಲರ್ ಆಗಿದ್ರೂ ತಂಡಕ್ಕೆ ಬ್ಯಾಟ್ನಿಂದ ಕಾಣಿಕೆ ನೀಡಬಲ್ಲ ಸಾಮರ್ಥ್ಯ ಕಡಿಮೆ. ಹಾಗಾಗಿ ಇಬ್ಬರು ಆಲ್ರೌಂಡರ್ಗಳಿಗೆ ಅವಕಾಶ ನೀಡುವ ನಿರ್ಧಾರಕ್ಕೆ ಟೀಮ್ ಇಂಡಿಯಾ ಬಂದಿದೆ.
ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ಗೆ ಮೊಹಮ್ಮದ್ ಸಿರಾಜ್ ಅವರನ್ನು ಕೈ ಬಿಡಲಾಗುತ್ತಿದೆ. ಇವರ ಬದಲಿಗೆ ಆಕಾಶ್ ದೀಪ್ಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಇವರು ಬ್ರಿಸ್ಬೇನ್ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದು, ಇವರ ಮೇಲೆ ಮ್ಯಾನೇಜ್ಮೆಂಟ್ ನಂಬಿಕೆ ಇಟ್ಟಿದೆ.
4ನೇ ಟೆಸ್ಟ್ಗೆ ಮೇಜರ್ ಸರ್ಜರಿ
ಟೀಮ್ ಇಂಡಿಯಾ, ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಸರಣಿ ನಡೆಯುತ್ತಿದೆ. ಹೇಗಾದ್ರೂ ಮಾಡಿ 4ನೇ ಟೆಸ್ಟ್ ಗೆಲ್ಲಲೇಬೇಕು ಎಂದು ಟೀಮ್ ಇಂಡಿಯಾ ಮುಂದಾಗಿದೆ. ಇದು ಬಾಕ್ಸಿಂಗ್ ಡೇ ಟೆಸ್ಟ್ ಆಗಿದ್ದು, ಉಭಯ ತಂಡಗಳು ಭರ್ಜರಿ ತಯಾರಿ ನಡೆಸಿವೆ. 3ನೇ ಟೆಸ್ಟ್ ಡ್ರಾ ಆಗಿದ್ದು, ಎರಡು ತಂಡಗಳು ತಲಾ 1 ಪಂದ್ಯ ಗೆದ್ದು ಸಮಬಲ ಸಾಧಿಸಿವೆ. ಹೀಗಾಗಿ 4ನೇ ಟೆಸ್ಟ್ ಪಂದ್ಯ ಗೆಲ್ಲೋದು ಅನಿವಾರ್ಯ ಆಗಿದ್ದು, ಟೀಮ್ ಇಂಡಿಯಾದಲ್ಲಿ ಮೇಜರ್ ಸರ್ಜರಿ ಆಗಲಿದೆ.
ಮೆಲ್ಬರ್ನ್ನಲ್ಲಿ ನಡೆಯಲಿರೋ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡಲು ಪ್ಲಾನ್ ಮಾಡಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾದಲ್ಲಿ ಮೇಜರ್ ಸರ್ಜರಿ ಆಗಲಿದೆ. ಅದರಲ್ಲೂ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಕ್ಯಾಪ್ಟನ್ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಗುರಿ.
ಇಬ್ಬರು ಸ್ಪಿನ್ನರ್ಸ್ಗೆ ಅವಕಾಶ
ಟೀಂ ಇಂಡಿಯಾ ಕಳೆದ ಪ್ರವಾಸದಲ್ಲೂ ಈ ಸ್ಟೇಡಿಯಮ್ನಲ್ಲಿ ಇಬ್ಬರು ಸ್ಪಿನ್ ಬೌಲರ್ಗಳೊಂದಿಗೆ ಕಣಕ್ಕೆ ಇಳಿದಿತ್ತು. ಈ ಬಾರಿ ಕೂಡ ಟೀಮ್ ಇಂಡಿಯಾ ಅದೇ ಫಾರ್ಮುಲಾದ ಮೊರೆ ಹೋಗಿದೆ. ಹೀಗಾಗಿ ಬಾಕ್ಸಿಂಗ್ ಡೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಸ್ಟಾರ್ ಆಲ್ರೌಂಡರ್ ಆಗಿರೋ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ:ಸಿರಾಜ್ಗೆ ಮಾಸ್ಟರ್ ಸ್ಟ್ರೋಕ್ ಕೊಟ್ಟ ಕ್ಯಾಪ್ಟನ್ ರೋಹಿತ್; ಟೀಮ್ ಇಂಡಿಯಾದಿಂದಲೇ ಔಟ್
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ