3ನೇ 2ರಷ್ಟು JDS ಶಾಸಕರ ಸೆಳೆಯಲು ‘ಆಪರೇಷನ್ ಹಸ್ತ’
ಐದಾರು ಶಾಸಕರ ಒಟ್ಟುಗೂಡಿಸಿ ವಿಲೀನಕ್ಕೆ ಡಿಕೆಎಸ್ ಪ್ಲಾನ್
ಜೆಡಿಎಸ್ನ 13 ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ಗೆ ಸೇರ್ಪಡೆ..?
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಉಪಮುಖ್ಯಮಂತ್ರಿ ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದಾರಂತೆ. ಹೀಗೊಂದು ಮಾತು ರಾಜಕೀಯ ಪಡಶಾಲೆಯಲ್ಲಿ ಜೋರಾಗಿ ಕೇಳಿಬರುತ್ತಿದ್ದು, ಮೈಸೂರು ಭಾಗದ ಜೆಡಿಎಸ್ ನಾಯಕರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುವ ಮೂಲಕ ರಾಜಕೀಯವಾಗಿ ಟಾಂಗ್ ಕೊಡಲು ಮುಂದಾಗಿದ್ದಾರೆ ಎಂಬ ಮಾಹಿತಿ ನ್ಯೂಸ್ಫಸ್ಟ್ಗೆ ಲಭ್ಯವಾಗಿದೆ.
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಅಸ್ತಿತ್ವವನ್ನು ಕುಗ್ಗಿಸಲು ಡಿ.ಕೆ.ಶಿವಕುಮಾರ್ ಪ್ಲಾನ್ ಮಾಡಿದ್ದು, ಮೂರನೇ ಎರಡರಷ್ಟು ಜೆಡಿಎಸ್ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿದ್ಯಂತೆ. ಆಪರೇಷನ್ ಹಸ್ತದ ಮೂಲಕ ಜೆಡಿಎಸ್ ನಾಯಕರನ್ನು ಸೆಳೆಯಲು ಮುಂದಾಗಿದೆ. ವರದಿಗಳ ಪ್ರಕಾರ 13 ಶಾಸಕರನ್ನು ಕಾಂಗ್ರೆಸ್ಗೆ ಬರ ಮಾಡಿಕೊಳ್ಳಲು ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ದಳಕ್ಕೆ ಡಿಕೆ ಗಾಳ
ಕುಮಾರಸ್ವಾಮಿಯೇ ಟಾರ್ಗೆಟ್
ಈ ಮೂಲಕ ಕುಮಾರಸ್ವಾಮಿ ಅಬ್ಬರಕ್ಕೆ ಬ್ರೇಕ್ ಹಾಕಲು ಶಿವಕುಮಾರ್ ತಂತ್ರ ರೂಪಿಸುತ್ತಿದ್ದಾರೆ. ಯಾಕಂದರೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ಗೂ ಹೆಚ್ಡಿಕೆ ರಾಜಕೀಯವಾಗಿ ಸಮಾನ ಶತ್ರುವಾಗಿದ್ದಾರೆ. ಚುನಾವಣೆ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಕಾಂಗ್ರೆಸ್ ಗದ್ದುಗೆ ಏರುತ್ತಿದ್ದಂತೆಯೇ ಕುಮಾರಸ್ವಾಮಿ ಒಂದಲ್ಲ ಒಂದು ವಿಚಾರಗಳ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಹೀಗಾಗಿ ಜೆಡಿಎಸ್ ಅಸ್ತಿತ್ವ ಕಳೆದಷ್ಟೂ ಕಾಂಗ್ರೆಸ್ಗೆ ಲಾಭ ಎಂಬ ಲೆಕ್ಕಾಚಾರದಲ್ಲಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
3ನೇ 2ರಷ್ಟು JDS ಶಾಸಕರ ಸೆಳೆಯಲು ‘ಆಪರೇಷನ್ ಹಸ್ತ’
ಐದಾರು ಶಾಸಕರ ಒಟ್ಟುಗೂಡಿಸಿ ವಿಲೀನಕ್ಕೆ ಡಿಕೆಎಸ್ ಪ್ಲಾನ್
ಜೆಡಿಎಸ್ನ 13 ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್ಗೆ ಸೇರ್ಪಡೆ..?
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಉಪಮುಖ್ಯಮಂತ್ರಿ ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದಾರಂತೆ. ಹೀಗೊಂದು ಮಾತು ರಾಜಕೀಯ ಪಡಶಾಲೆಯಲ್ಲಿ ಜೋರಾಗಿ ಕೇಳಿಬರುತ್ತಿದ್ದು, ಮೈಸೂರು ಭಾಗದ ಜೆಡಿಎಸ್ ನಾಯಕರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳುವ ಮೂಲಕ ರಾಜಕೀಯವಾಗಿ ಟಾಂಗ್ ಕೊಡಲು ಮುಂದಾಗಿದ್ದಾರೆ ಎಂಬ ಮಾಹಿತಿ ನ್ಯೂಸ್ಫಸ್ಟ್ಗೆ ಲಭ್ಯವಾಗಿದೆ.
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಅಸ್ತಿತ್ವವನ್ನು ಕುಗ್ಗಿಸಲು ಡಿ.ಕೆ.ಶಿವಕುಮಾರ್ ಪ್ಲಾನ್ ಮಾಡಿದ್ದು, ಮೂರನೇ ಎರಡರಷ್ಟು ಜೆಡಿಎಸ್ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕಿದ್ಯಂತೆ. ಆಪರೇಷನ್ ಹಸ್ತದ ಮೂಲಕ ಜೆಡಿಎಸ್ ನಾಯಕರನ್ನು ಸೆಳೆಯಲು ಮುಂದಾಗಿದೆ. ವರದಿಗಳ ಪ್ರಕಾರ 13 ಶಾಸಕರನ್ನು ಕಾಂಗ್ರೆಸ್ಗೆ ಬರ ಮಾಡಿಕೊಳ್ಳಲು ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ದಳಕ್ಕೆ ಡಿಕೆ ಗಾಳ
ಕುಮಾರಸ್ವಾಮಿಯೇ ಟಾರ್ಗೆಟ್
ಈ ಮೂಲಕ ಕುಮಾರಸ್ವಾಮಿ ಅಬ್ಬರಕ್ಕೆ ಬ್ರೇಕ್ ಹಾಕಲು ಶಿವಕುಮಾರ್ ತಂತ್ರ ರೂಪಿಸುತ್ತಿದ್ದಾರೆ. ಯಾಕಂದರೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ಗೂ ಹೆಚ್ಡಿಕೆ ರಾಜಕೀಯವಾಗಿ ಸಮಾನ ಶತ್ರುವಾಗಿದ್ದಾರೆ. ಚುನಾವಣೆ ಬೆನ್ನಲ್ಲೇ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಕಾಂಗ್ರೆಸ್ ಗದ್ದುಗೆ ಏರುತ್ತಿದ್ದಂತೆಯೇ ಕುಮಾರಸ್ವಾಮಿ ಒಂದಲ್ಲ ಒಂದು ವಿಚಾರಗಳ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಹೀಗಾಗಿ ಜೆಡಿಎಸ್ ಅಸ್ತಿತ್ವ ಕಳೆದಷ್ಟೂ ಕಾಂಗ್ರೆಸ್ಗೆ ಲಾಭ ಎಂಬ ಲೆಕ್ಕಾಚಾರದಲ್ಲಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂದು ಹೇಳಲಾಗುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ