Advertisment

KRS ಡ್ಯಾಂ ಭರ್ತಿ, ನದಿ ಪಾತ್ರದಲ್ಲಿ ಪ್ರವಾಹ ಭೀತಿ! ತುಂಬಿ ಹರಿಯುತ್ತಿದ್ದಾಳೆ ಕನ್ನಡಿಗರ ಜೀವನಾಡಿ

author-image
AS Harshith
Updated On
ರೈತರಿಗೆ ಗುಡ್​ನ್ಯೂಸ್​​.. ಕೆಆರ್​ಎಸ್ ಡ್ಯಾಮ್​​​ ನೀರಿನ ಮಟ್ಟ ಎಷ್ಟಿದೆ ಗೊತ್ತಾ?
Advertisment
  • ಸಂಪೂರ್ಣ ಭರ್ತಿಯಾದ ಕನ್ನಡಿಗರ ಜೀವನದಿ ಕಾವೇರಿ
  • ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ
  • ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಕಾರ ಮಳೆ ಹಿನ್ನೆಲೆ ನದಿ ಪಾತ್ರದಲ್ಲಿ ಮತ್ತೆ ಆತಂಕ ಹೆಚ್ಚಾಗಿದೆ. ಕ್ಷಣ ಕ್ಷಣಕ್ಕೂ KRS ಡ್ಯಾಂ ಒಳಹರಿವು ಹೆಚ್ಚಳವಾಗುತ್ತಿದೆ.

Advertisment

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ KRS ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ 50 ರಿಂದ 80 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲು ಸಿದ್ಧತೆ ಮಾಡಲಾಗಿದೆ. ಸದ್ಯ 40 ಸಾವಿರ ಕ್ಯೂಸೆಕ್ ನೀರನ್ನ ನದಿಗೆ ಬಿಡಲಾಗಿದೆ.

ಇದನ್ನೂ ಓದಿ: VIDEO: ಶಿರೂರು ಗುಡ್ಡ ಕುಸಿತದಲ್ಲಿ ಅವಂತಿಕಾ, ಅರ್ಜುನ್ ಸಾವು.. ಇಬ್ಬರು ನೃತ್ಯ ಮಾಡುವ ದೃಶ್ಯ ವೈರಲ್​

ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

Advertisment

ಇದನ್ನೂ ಓದಿ: ಭೂ ಕುಸಿತ, ವಿದ್ಯುತ್​ ಸ್ಪರ್ಶಿಸಿ 4 ಸಾವು.. ರಕ್ಷಣೆಗಾಗಿ ಅಲರ್ಟ್​ ಇರುವಂತೆ ಭಾರತೀಯ ಸೇನೆಗೆ ಸೂಚನೆ

ಇಂದಿನ ಕೆಆರ್‌ಎಸ್ ನೀರಿನ ಮಟ್ಟ

ಗರಿಷ್ಠ ಮಟ್ಟ - 124.80 ಅಡಿ.
ಇಂದಿನ ಮಟ್ಟ - 124.80 ಅಡಿ.
ಗರಿಷ್ಠ ಸಾಮರ್ಥ್ಯ - 49.452 ಟಿಎಂಸಿ.
ಇಂದಿನ ಸಾಮರ್ಥ್ಯ - 49.452 ಟಿಎಂಸಿ
ಒಳ ಹರಿವು - 42,045 ಕ್ಯೂಸೆಕ್
ಹೊರ ಹರಿವು - 40,914 ಕ್ಯೂಸೆಕ್

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment