Advertisment

KRSನಿಂದ ಭಾರೀ ಮಟ್ಟದ ನೀರು ಬಿಡುಗಡೆ, ಕಾವೇರಿಯಿಂದ ಅಪಾಯ.. ವಿವೇಕಾನಂದ ಆಶ್ರಮ ಜಲಾವೃತ

author-image
Bheemappa
Updated On
ಮತ್ತೆ ಬಾರದ ಮಳೆರಾಯ.. KRS ಡ್ಯಾಮ್​​ನಲ್ಲಿ ನೀರಿನ ಹರಿವಿನಲ್ಲಿ ಏರಿಳಿತ..! ಇಂದು ಎಷ್ಟಿದೆ..?
Advertisment
  • ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿರುವ ಕಾವೇರಿ ನದಿಯ ನೀರು
  • ಆಶ್ರಮದ ಮುಂದಿನ ರಸ್ತೆಯಲ್ಲಿ ನೀರು, ಸಂಚಾರಕ್ಕೆ ಬ್ರೇಕ್
  • ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿ

ಮಂಡ್ಯ: ಕೆಆರ್​​ಎಸ್​ (ಕೃಷ್ಣಾ ರಾಜ ಸಾಗರ) ಜಲಾಶಯದಿಂದ 1 ಲಕ್ಷದ 30 ಸಾವಿರ ಕ್ಯೂಸೆಕ್​ ನೀರನ್ನು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿ ತುಂಬಿ ಹರಿಯುತ್ತಿರುವುದರಿಂದ ರಾಮಕೃಷ್ಣ ವಿವೇಕಾನಂದ ಆಶ್ರಮ ಜಲಾವೃತವಾಗಿದೆ.

Advertisment

ಇದನ್ನೂ ಓದಿ:‘ಕ್ಯಾಪ್ಟನ್ ಅಲ್ಲ, ಲೀಡರ್​​ನಂತೆ ಕಾಣಿಸಿದ್ದಾರೆ’.. ರೋಹಿತ್ ಶರ್ಮಾ ಬಗ್ಗೆ ಸೂರ್ಯಕುಮಾರ್ ಅಚ್ಚರಿ ಹೇಳಿಕೆ!

ಕೆಆರ್​​ಎಸ್​ ಜಲಾಶಯದಿಂದ 1 ಲಕ್ಷದ 30 ಸಾವಿರ ಕ್ಯೂಸೆಕ್​ ನೀರನ್ನು ಕಾವೇರಿ ನದಿಗೆ ಹರಿಬಿಡಲಾಗಿದೆ. ಹೀಗಾಗಿ ಶ್ರೀರಂಗಪಟ್ಟಣದ ನದಿ ಪಾತ್ರದಲ್ಲಿರುವ ರಾಮಕೃಷ್ಣ ವಿವೇಕಾನಂದರ ಆಶ್ರಮ ಸಂಪೂರ್ಣ ಜಲಾವೃತವಾಗಿದೆ. ಮುಂಜಾಗ್ರತ ಕ್ರಮವಾಗಿ ಆಶ್ರಮದ ಸ್ವಾಮೀಜಿಯನ್ನ ಸ್ಥಳಾಂತರ ಮಾಡಲಾಗಿತ್ತು. ಹೀಗಾಗಿ ಯಾವುದೇ ಹಾನಿ ಸಂಭವಿಸಿಲ್ಲ. ಆಶ್ರಮದ ಮುಂಭಾಗದ ರಸ್ತೆಯಲ್ಲೂ ನೀರು ಹರಿಯುತ್ತಿರುವುದರಿಂದ ಸಂಚಾರವನ್ನ ಸ್ಥಗಿತ ಮಾಡಲಾಗಿದೆ. ಸದ್ಯ ಜಲಾಶಯದಿಂದ ಭಾರೀ ಪ್ರಮಾಣದ ನೀರು ಹೊರಬಿಟ್ಟಿದ್ದರಿಂದ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment