newsfirstkannada.com

KSRTC ಬಸ್ ಓವರ್​ ಟೇಕ್ ಮಾಡಲು ಹೋಗಿ ಆ್ಯಕ್ಸಿಡೆಂಟ್ ಮಾಡಿದ ಟ್ರಕ್ ಡ್ರೈವರ್

Share :

20-11-2023

    ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನಲ್ಲಿ ಅನಾಹುತ

    KSRTC ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು

    ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

ಬಾಗಲಕೋಟೆ: ರಸ್ತೆ ಬದಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದ ಕೆಎಸ್​ಆರ್​ಟಿಸಿ ಬಸ್ ಓವರ್ ಟೇಕ್ ಮಾಡಲು ಮುಂದಾದ ಟ್ರಕ್​ವೊಂದು ಡಿಕ್ಕಿಯಾಗಿದೆ. ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಚಿಂಚಖಂಡಿ ಗ್ರಾಮದ ಬಳಿ ನಡೆದಿದೆ.

ಬಾಗಲಕೋಟೆಯಿಂದ ಜಮಖಂಡಿ ಕಡೆಗೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ ಚಿಂಚಖಂಡಿ ಗ್ರಾಮದಲ್ಲಿ ಪ್ರಯಾಣಿಕರಿಗಾಗಿ ನಿಂತಿತ್ತು. ಈ ವೇಳೆ ಮುಧೋಳ ಕಡೆಗೆ ಹೊರಟಿದ್ದ ಟ್ರಕ್ ನಿಂತಿದ್ದ ಬಸ್ ಓವರ್ ಟೇಕ್ ಮಾಡುವಾಗ ಈ ಅವಘಡ ಸಂಭವಿಸಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ಚಾಲಕ ಹಾಗೂ ಬಸ್​ನ ಬಲಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಬಸ್​ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KSRTC ಬಸ್ ಓವರ್​ ಟೇಕ್ ಮಾಡಲು ಹೋಗಿ ಆ್ಯಕ್ಸಿಡೆಂಟ್ ಮಾಡಿದ ಟ್ರಕ್ ಡ್ರೈವರ್

https://newsfirstlive.com/wp-content/uploads/2023/11/ACCIDENT-5-1.jpg

    ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನಲ್ಲಿ ಅನಾಹುತ

    KSRTC ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು

    ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

ಬಾಗಲಕೋಟೆ: ರಸ್ತೆ ಬದಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದ ಕೆಎಸ್​ಆರ್​ಟಿಸಿ ಬಸ್ ಓವರ್ ಟೇಕ್ ಮಾಡಲು ಮುಂದಾದ ಟ್ರಕ್​ವೊಂದು ಡಿಕ್ಕಿಯಾಗಿದೆ. ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಚಿಂಚಖಂಡಿ ಗ್ರಾಮದ ಬಳಿ ನಡೆದಿದೆ.

ಬಾಗಲಕೋಟೆಯಿಂದ ಜಮಖಂಡಿ ಕಡೆಗೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ ಚಿಂಚಖಂಡಿ ಗ್ರಾಮದಲ್ಲಿ ಪ್ರಯಾಣಿಕರಿಗಾಗಿ ನಿಂತಿತ್ತು. ಈ ವೇಳೆ ಮುಧೋಳ ಕಡೆಗೆ ಹೊರಟಿದ್ದ ಟ್ರಕ್ ನಿಂತಿದ್ದ ಬಸ್ ಓವರ್ ಟೇಕ್ ಮಾಡುವಾಗ ಈ ಅವಘಡ ಸಂಭವಿಸಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ ಚಾಲಕ ಹಾಗೂ ಬಸ್​ನ ಬಲಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಬಸ್​ನಲ್ಲಿ ಸುಮಾರು 40 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More