ಬೆಳ್ಳಂಬೆಳಗ್ಗೆ KSRTC ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ
ಕಾಲೇಜಿಗೆ ಹೋಗುವ ಮಾರ್ಗ ಮಧ್ಯೆ ಪ್ರಾಣ ಬಿಟ್ಟ ವಿದ್ಯಾರ್ಥಿ
ಅಪಘಾತದ ಸ್ಥಳದಲ್ಲೇ ಕಾಲೇಜು ವಿದ್ಯಾರ್ಥಿ ಭಾರ್ಗವ್ ರೆಡ್ಡಿ ಸಾವು
ಕೋಲಾರ: ಬೆಳ್ಳಂಬೆಳಗ್ಗೆ KSRTC ಹಾಗೂ ದ್ವಿಚಕ್ರ ವಾಹನದ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ, ಕಾಲೇಜು ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ರಾತ್ರಿ ಮಟನ್ ಊಟ ಮಾಡಿ ಮಲಗಿದ್ದವರು ಏಳಲೇ ಇಲ್ಲ.. ಒಂದೇ ಮನೆಯಲ್ಲಿ ನಾಲ್ವರು ಸಾವು; ಆಗಿದ್ದೇನು?
ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದ ಬಳಿ ಈ ಅಪಘಾತ ನಡೆದಿದೆ. ತಮಟಂಪಲ್ಲಿ ಗ್ರಾಮದ ಭಾರ್ಗವ್ ರೆಡ್ಡಿ (18) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಕಾಲೇಜು ವಿದ್ಯಾರ್ಥಿ ಭಾರ್ಗವ್ ರೆಡ್ಡಿ, ಚಿಂತಾಮಣಿ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಇಂದು ಬೆಳಗ್ಗೆ ಕಾಲೇಜಿಗೆ ಹೋಗುವ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಸಾವಿನಲ್ಲಿ ಒಂದಾದ ಅಣ್ಣ, ತಂಗಿ.. ರೈಲಿಗೆ ತಲೆ ಕೊಟ್ಟು ದುರಂತ ಅಂತ್ಯ; ಕಾರಣವೇನು?
ಘಟನಾ ಸ್ಥಳಕ್ಕೆ ಬಂದ ಭಾರ್ಗವ್ ರೆಡ್ಡಿ ಅವರ ಕುಟುಂಬಸ್ಥರು ಮೃತದೇಹ ಕಂಡು ಗೋಳಾಡುತ್ತಿದ್ದ ದೃಶ್ಯ ಕಂಡು ಬಂದಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬೆಳ್ಳಂಬೆಳಗ್ಗೆ KSRTC ಹಾಗೂ ದ್ವಿಚಕ್ರ ವಾಹನದ ಮಧ್ಯೆ ಅಪಘಾತ
ಕಾಲೇಜಿಗೆ ಹೋಗುವ ಮಾರ್ಗ ಮಧ್ಯೆ ಪ್ರಾಣ ಬಿಟ್ಟ ವಿದ್ಯಾರ್ಥಿ
ಅಪಘಾತದ ಸ್ಥಳದಲ್ಲೇ ಕಾಲೇಜು ವಿದ್ಯಾರ್ಥಿ ಭಾರ್ಗವ್ ರೆಡ್ಡಿ ಸಾವು
ಕೋಲಾರ: ಬೆಳ್ಳಂಬೆಳಗ್ಗೆ KSRTC ಹಾಗೂ ದ್ವಿಚಕ್ರ ವಾಹನದ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ, ಕಾಲೇಜು ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ರಾತ್ರಿ ಮಟನ್ ಊಟ ಮಾಡಿ ಮಲಗಿದ್ದವರು ಏಳಲೇ ಇಲ್ಲ.. ಒಂದೇ ಮನೆಯಲ್ಲಿ ನಾಲ್ವರು ಸಾವು; ಆಗಿದ್ದೇನು?
ಶ್ರೀನಿವಾಸಪುರ ತಾಲ್ಲೂಕಿನ ಅಡ್ಡಗಲ್ ಗ್ರಾಮದ ಬಳಿ ಈ ಅಪಘಾತ ನಡೆದಿದೆ. ತಮಟಂಪಲ್ಲಿ ಗ್ರಾಮದ ಭಾರ್ಗವ್ ರೆಡ್ಡಿ (18) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಕಾಲೇಜು ವಿದ್ಯಾರ್ಥಿ ಭಾರ್ಗವ್ ರೆಡ್ಡಿ, ಚಿಂತಾಮಣಿ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಇಂದು ಬೆಳಗ್ಗೆ ಕಾಲೇಜಿಗೆ ಹೋಗುವ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಸಾವಿನಲ್ಲಿ ಒಂದಾದ ಅಣ್ಣ, ತಂಗಿ.. ರೈಲಿಗೆ ತಲೆ ಕೊಟ್ಟು ದುರಂತ ಅಂತ್ಯ; ಕಾರಣವೇನು?
ಘಟನಾ ಸ್ಥಳಕ್ಕೆ ಬಂದ ಭಾರ್ಗವ್ ರೆಡ್ಡಿ ಅವರ ಕುಟುಂಬಸ್ಥರು ಮೃತದೇಹ ಕಂಡು ಗೋಳಾಡುತ್ತಿದ್ದ ದೃಶ್ಯ ಕಂಡು ಬಂದಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ