ಎಷ್ಟು ವರ್ಷಗಳಿಂದ 4 ನಿಗಮಗಳ ಟಿಕೆಟ್ ದರ ಹೆಚ್ಚಿಸಿಲ್ಲ?
ಸರ್ಕಾರ ಪರಿಗಣಿಸಿದ್ರೆ ಜನರ ಜೇಬಿಗೆ ಮತ್ತೆ ಕತ್ತರಿ ಪಕ್ಕಾ!
1 ವರ್ಷಕ್ಕೆ ಎಷ್ಟು ಕೋಟಿ ರೂಪಾಯಿ ಹೊರೆ ಆಗುತ್ತದೆ?
ಹಾಲು, ಬಿಯರ್, ತರಕಾರಿ ರೇಟ್ಗಳ ದರ ಏರಿಕೆಯ ಬರೆಯಿಂದ ಜನ ಇನ್ನೂ ಹೊರಬಂದಿಲ್ಲ. ಆಗ್ಲೇ ಮತ್ತೊಂದು ಬರೆ ಹಾಕೋದಕ್ಕೆ ಸರ್ಕಾರ ಮುಂದಾಗಿದ್ಯಾ ಅನ್ನೋ ಪ್ರಶ್ನೆ ಮೂಡಿದೆ. ಆ 4 ನಿಗಮಗಳ ಬೇಡಿಕೆಯನ್ನ ಸರ್ಕಾರ ಪರಿಗಣಿಸಿದ್ರೆ ಜನರ ಜೇಬಿಗೆ ಮತ್ತೆ ಕತ್ತರಿ ಪಕ್ಕಾ.
ಇದನ್ನೂ ಓದಿ: ಕೇರಳ ಭೂಕುಸಿತ, 300 ಜನ ಸಾವನ್ನಪ್ಪಿದ್ದಾರಾ..? ಬೆಚ್ಚಿ ಬೀಳಿಸೋ ಸತ್ಯ ಬಿಚ್ಚಿಟ್ಟ ಸ್ಥಳೀಯ ನಿವಾಸಿ
ದಯವಿಟ್ಟು ಟಿಕೆಟ್ ದರ ಏರಿಸಿ ಅಂತ KSRTC, BMTC ಸೇರಿದಂತೆ 4 ಸಾರಿಗೆ ನಿಗಮ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಿ ಬರೋಬ್ಬರಿ 10 ವರ್ಷಗಳು ಆಗ್ತಾ ಬರ್ತಿದೆ. ಕೆಎಸ್ಆರ್ಟಿಸಿ, ಕೆಕೆಆರ್ಟಿಸಿ, ಎನ್ಡಬ್ಲ್ಯುಕೆಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿ 4 ವರ್ಷಗಳಾಗಿವೆ. ಹೀಗಾಗಿ ಸಾಕಷ್ಟು ವರ್ಷಗಳಿಂದ ಕಾದಿರೋ ಸಾರಿಗೆ ನಿಗಮ ಟಿಕೆಟ್ ದರ ಏರಿಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಇದನ್ನೂ ಓದಿ: ಫಾಲ್ಸ್ನಲ್ಲಿ ಮುಗ್ಗರಿಸಿ ಬಿದ್ದಿದ್ದ ದೀಪಿಕಾ ದಾಸ್.. ಇನ್ಸ್ಟಾ ವಿಡಿಯೋ ಕುರಿತು ಬ್ಯೂಟಿ ಹೇಳಿದ್ದೇನು?
ಪೆಟ್ರೋಲ್, ಡಿಸೇಲ್ ದರ ಗಗನಕ್ಕೇರ್ತಿದೆ. ಬಸ್ಗಳ ಸ್ಪೇರ್ ಪಾರ್ಟ್ಸ್ ಕೂಡ ಅದೇ ರೇಸ್ನಲ್ಲಿದೆ. 4 ನಿಗಮಗಳೂ ನಷ್ಟದಲ್ಲಿ ತೇಲಾಡ್ತಿವೆ. ಈಗಾಗ್ಲೇ ರಾಜ್ಯ ಸರ್ಕಾರ ಡಿಸೇಲ್ ಮೇಲೆ ಚಿಲ್ಲರೆ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿದೆ. ಇದರಿಂದ ಹೆಚ್ಚುವರಿಯಾಗಿ ವರ್ಷಕ್ಕೆ 190 ರಿಂದ 200 ಕೋಟಿ ರೂಪಾಯಿ ಹೊರೆಯಾಗಲಿದೆ. ಹಾಗಿದ್ರೆ ನಾಲ್ಕು ನಿಗಮ ಎಷ್ಟೆಷ್ಟು ದರ ಏರಿಕೆ ಪ್ರಸ್ತಾವನೆ ಸಲ್ಲಿಕೆ ಮಾಡಿವೆ ಅನ್ನೋದನ್ನ ನೋಡೋದಾದ್ರೆ.
ಬಸ್ ಟಿಕೆಟ್ ದರ ಏರಿಸಿ
ಇನ್ನು ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನ ಪ್ರಶ್ನೆ ಮಾಡಿದಾಗ ಸದ್ಯಕ್ಕೆ ಟಿಕೆಟ್ ದರ ಏರಿಕೆ ಮಾಡೋ ಪ್ರಶ್ನೆ ಇಲ್ಲ ಅಂತ ಸ್ಪಷ್ಟಪಡಿಸಿದ್ರು. ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ ಅಂತ ಸಾರಿಗೆ ಸಚಿವರೇನೋ ಹೇಳಿದ್ದಾರೆ. ಆದರೆ ಸರ್ಕಾರ ಈ ಪ್ರಸ್ತಾವನೆಯನ್ನ ಯಾವ ರೀತಿಯಲ್ಲಿ ಪರಿಗಣಿಸುತ್ತೆ ಕಾದು ನೋಡಬೇಕು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಎಷ್ಟು ವರ್ಷಗಳಿಂದ 4 ನಿಗಮಗಳ ಟಿಕೆಟ್ ದರ ಹೆಚ್ಚಿಸಿಲ್ಲ?
ಸರ್ಕಾರ ಪರಿಗಣಿಸಿದ್ರೆ ಜನರ ಜೇಬಿಗೆ ಮತ್ತೆ ಕತ್ತರಿ ಪಕ್ಕಾ!
1 ವರ್ಷಕ್ಕೆ ಎಷ್ಟು ಕೋಟಿ ರೂಪಾಯಿ ಹೊರೆ ಆಗುತ್ತದೆ?
ಹಾಲು, ಬಿಯರ್, ತರಕಾರಿ ರೇಟ್ಗಳ ದರ ಏರಿಕೆಯ ಬರೆಯಿಂದ ಜನ ಇನ್ನೂ ಹೊರಬಂದಿಲ್ಲ. ಆಗ್ಲೇ ಮತ್ತೊಂದು ಬರೆ ಹಾಕೋದಕ್ಕೆ ಸರ್ಕಾರ ಮುಂದಾಗಿದ್ಯಾ ಅನ್ನೋ ಪ್ರಶ್ನೆ ಮೂಡಿದೆ. ಆ 4 ನಿಗಮಗಳ ಬೇಡಿಕೆಯನ್ನ ಸರ್ಕಾರ ಪರಿಗಣಿಸಿದ್ರೆ ಜನರ ಜೇಬಿಗೆ ಮತ್ತೆ ಕತ್ತರಿ ಪಕ್ಕಾ.
ಇದನ್ನೂ ಓದಿ: ಕೇರಳ ಭೂಕುಸಿತ, 300 ಜನ ಸಾವನ್ನಪ್ಪಿದ್ದಾರಾ..? ಬೆಚ್ಚಿ ಬೀಳಿಸೋ ಸತ್ಯ ಬಿಚ್ಚಿಟ್ಟ ಸ್ಥಳೀಯ ನಿವಾಸಿ
ದಯವಿಟ್ಟು ಟಿಕೆಟ್ ದರ ಏರಿಸಿ ಅಂತ KSRTC, BMTC ಸೇರಿದಂತೆ 4 ಸಾರಿಗೆ ನಿಗಮ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಿ ಬರೋಬ್ಬರಿ 10 ವರ್ಷಗಳು ಆಗ್ತಾ ಬರ್ತಿದೆ. ಕೆಎಸ್ಆರ್ಟಿಸಿ, ಕೆಕೆಆರ್ಟಿಸಿ, ಎನ್ಡಬ್ಲ್ಯುಕೆಆರ್ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿ 4 ವರ್ಷಗಳಾಗಿವೆ. ಹೀಗಾಗಿ ಸಾಕಷ್ಟು ವರ್ಷಗಳಿಂದ ಕಾದಿರೋ ಸಾರಿಗೆ ನಿಗಮ ಟಿಕೆಟ್ ದರ ಏರಿಕೆ ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಇದನ್ನೂ ಓದಿ: ಫಾಲ್ಸ್ನಲ್ಲಿ ಮುಗ್ಗರಿಸಿ ಬಿದ್ದಿದ್ದ ದೀಪಿಕಾ ದಾಸ್.. ಇನ್ಸ್ಟಾ ವಿಡಿಯೋ ಕುರಿತು ಬ್ಯೂಟಿ ಹೇಳಿದ್ದೇನು?
ಪೆಟ್ರೋಲ್, ಡಿಸೇಲ್ ದರ ಗಗನಕ್ಕೇರ್ತಿದೆ. ಬಸ್ಗಳ ಸ್ಪೇರ್ ಪಾರ್ಟ್ಸ್ ಕೂಡ ಅದೇ ರೇಸ್ನಲ್ಲಿದೆ. 4 ನಿಗಮಗಳೂ ನಷ್ಟದಲ್ಲಿ ತೇಲಾಡ್ತಿವೆ. ಈಗಾಗ್ಲೇ ರಾಜ್ಯ ಸರ್ಕಾರ ಡಿಸೇಲ್ ಮೇಲೆ ಚಿಲ್ಲರೆ ಮಾರಾಟ ತೆರಿಗೆಯನ್ನು ಹೆಚ್ಚಳ ಮಾಡಿದೆ. ಇದರಿಂದ ಹೆಚ್ಚುವರಿಯಾಗಿ ವರ್ಷಕ್ಕೆ 190 ರಿಂದ 200 ಕೋಟಿ ರೂಪಾಯಿ ಹೊರೆಯಾಗಲಿದೆ. ಹಾಗಿದ್ರೆ ನಾಲ್ಕು ನಿಗಮ ಎಷ್ಟೆಷ್ಟು ದರ ಏರಿಕೆ ಪ್ರಸ್ತಾವನೆ ಸಲ್ಲಿಕೆ ಮಾಡಿವೆ ಅನ್ನೋದನ್ನ ನೋಡೋದಾದ್ರೆ.
ಬಸ್ ಟಿಕೆಟ್ ದರ ಏರಿಸಿ
ಇನ್ನು ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನ ಪ್ರಶ್ನೆ ಮಾಡಿದಾಗ ಸದ್ಯಕ್ಕೆ ಟಿಕೆಟ್ ದರ ಏರಿಕೆ ಮಾಡೋ ಪ್ರಶ್ನೆ ಇಲ್ಲ ಅಂತ ಸ್ಪಷ್ಟಪಡಿಸಿದ್ರು. ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ ಅಂತ ಸಾರಿಗೆ ಸಚಿವರೇನೋ ಹೇಳಿದ್ದಾರೆ. ಆದರೆ ಸರ್ಕಾರ ಈ ಪ್ರಸ್ತಾವನೆಯನ್ನ ಯಾವ ರೀತಿಯಲ್ಲಿ ಪರಿಗಣಿಸುತ್ತೆ ಕಾದು ನೋಡಬೇಕು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ