newsfirstkannada.com

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​​ ವೇನಲ್ಲಿ 800ಕ್ಕೂ ಹೆಚ್ಚು ಅಪಘಾತ; 150 ಮಂದಿ ದಾರುಣ ಸಾವು

Share :

28-06-2023

    ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಬೊಲೆರೋ, KSRTC ಬಸ್‌ ನಡುವೆ ಅಪಘಾತ

    ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಬೊಲೆರೋಗೆ ಕೆಎಸ್​​ಆರ್​​ಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ, ಕಂಡಕ್ಟರ್‌ ಸಾವು

    ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್​ನಲ್ಲಿ 9 ತಿಂಗಳಲ್ಲಿ 800ಕ್ಕೂ ಹೆಚ್ಚು ಆಕ್ಸಿಡೆಂಟ್ ಕೇಸ್​ ದಾಖಲು

ರಾಮನಗರ: ಇತ್ತೀಚಿನ ದಿನಗಳಲ್ಲಿ ಅಪಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಅದರಲ್ಲೂ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿ ಸಾಕಷ್ಟು ಸಾವು-ನೋವುಗಳಿಗೆ ಕಾರಣವಾಗುತ್ತದೆ. ಇದೀಗ ಪ್ಲೈವುಡ್ ತುಂಬಿದ್ದ ಬೊಲೆರೋ ವಾಹನಕ್ಕೆ ಕೆಎಸ್​​ಆರ್​​ಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬಸ್ ಕಂಡಕ್ಟರ್‌ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಾಲಕ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಈ ಭೀಕರ ಅಪಘಾತವು ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಸಂಭವಿಸಿದೆ. ಸದ್ಯ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಎಸ್​​ಆರ್​​ಟಿಸಿ ಬಸ್​​ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ  ಫ್ಲೈವುಡ್ ತುಂಬಿಕೊಂಡು ಬರುತ್ತಿದ್ದ ಬೊಲೆರೋ ವಾಹನಕ್ಕೆ ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಸದ್ಯ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು, ಈಗಾಗಲೇ ನಿರ್ಮಾಣವಾಗಿರುವ ದಶಪಥ ರಸ್ತೆಯಲ್ಲಿ 9 ತಿಂಗಳಲ್ಲಿ 800 ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ ಎಂದು ವರದಿ ಮೂಲಕ ತಿಳಿದು ಬಂದಿದೆ. ಅದರಲ್ಲೂ 150ಕ್ಕೂ ಹೆಚ್ಚು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಹೀಗಾಗಿ ಬೆಂಗಳೂರು-ಮೈಸೂರು ದಶಪಥ ರಸ್ತೆಯನ್ನು ಮರು ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​​ ವೇನಲ್ಲಿ 800ಕ್ಕೂ ಹೆಚ್ಚು ಅಪಘಾತ; 150 ಮಂದಿ ದಾರುಣ ಸಾವು

https://newsfirstlive.com/wp-content/uploads/2023/06/accident-44.jpg

    ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಬೊಲೆರೋ, KSRTC ಬಸ್‌ ನಡುವೆ ಅಪಘಾತ

    ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಬೊಲೆರೋಗೆ ಕೆಎಸ್​​ಆರ್​​ಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ, ಕಂಡಕ್ಟರ್‌ ಸಾವು

    ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್​ನಲ್ಲಿ 9 ತಿಂಗಳಲ್ಲಿ 800ಕ್ಕೂ ಹೆಚ್ಚು ಆಕ್ಸಿಡೆಂಟ್ ಕೇಸ್​ ದಾಖಲು

ರಾಮನಗರ: ಇತ್ತೀಚಿನ ದಿನಗಳಲ್ಲಿ ಅಪಘಾತದ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿದೆ. ಅದರಲ್ಲೂ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿ ಸಾಕಷ್ಟು ಸಾವು-ನೋವುಗಳಿಗೆ ಕಾರಣವಾಗುತ್ತದೆ. ಇದೀಗ ಪ್ಲೈವುಡ್ ತುಂಬಿದ್ದ ಬೊಲೆರೋ ವಾಹನಕ್ಕೆ ಕೆಎಸ್​​ಆರ್​​ಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬಸ್ ಕಂಡಕ್ಟರ್‌ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಚಾಲಕ ಸೇರಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಈ ಭೀಕರ ಅಪಘಾತವು ರಾಮನಗರ ತಾಲೂಕಿನ ವಿಜಯಪುರ ಗ್ರಾಮದ ಬಳಿ ಸಂಭವಿಸಿದೆ. ಸದ್ಯ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಎಸ್​​ಆರ್​​ಟಿಸಿ ಬಸ್​​ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ  ಫ್ಲೈವುಡ್ ತುಂಬಿಕೊಂಡು ಬರುತ್ತಿದ್ದ ಬೊಲೆರೋ ವಾಹನಕ್ಕೆ ಓವರ್ ಟೇಕ್ ಮಾಡಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಸದ್ಯ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು, ಈಗಾಗಲೇ ನಿರ್ಮಾಣವಾಗಿರುವ ದಶಪಥ ರಸ್ತೆಯಲ್ಲಿ 9 ತಿಂಗಳಲ್ಲಿ 800 ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ ಎಂದು ವರದಿ ಮೂಲಕ ತಿಳಿದು ಬಂದಿದೆ. ಅದರಲ್ಲೂ 150ಕ್ಕೂ ಹೆಚ್ಚು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಹೀಗಾಗಿ ಬೆಂಗಳೂರು-ಮೈಸೂರು ದಶಪಥ ರಸ್ತೆಯನ್ನು ಮರು ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More