newsfirstkannada.com

ಕಂಗನಾ ಕೆನ್ನೆಗೆ ಹೊಡೆದ CISF ಅಧಿಕಾರಿ ಯಾರು..? ಕುಲ್ವಿಂದರ್ ಕೌರ್ ಕುರಿತ 7 ವಿಚಾರಗಳು ಇಲ್ಲಿದೆ..!

Share :

Published June 7, 2024 at 12:37pm

    ಕಂಗನಾ ಕಪಾಳಕ್ಕೆ ಬಾರಿಸಿದ ಸಿಬ್ಬಂದಿಗೆ ಸಸ್ಪೆಂಡ್‌ ಶಿಕ್ಷೆ..!

    ಚಂಡೀಗಢ ಏರ್​ಪೋರ್ಟ್​ಗೆ ಕಂಗನಾ ಆಗಮಿಸಿದಾಗ ಘಟನೆ

    ಕುಲ್ವಿಂದರ್ ಕೌರ್ ಕೋಪಕ್ಕೆ ಕಾರಣ ಏನು ಗೊತ್ತಾ..?

ಬಿಜೆಪಿ ಸಂಸದರಾಗಿ ಆಯ್ಕೆಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್​​​​ ಮೇಲೆ ಸಿಐಎಸ್​ಎಫ್​ ಸಿಬ್ಬಂದಿ ಕಪಾಳ ಮೋಕ್ಷ ಮಾಡಿದ್ದಾರೆ. ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿ ಮಾಡಿರುವ ಪ್ರಕರಣ ಇದಾಗಿದೆ. ಪ್ರಕರಣ ಬೆನ್ನಲ್ಲೇ ಕಪಾಳಮೋಕ್ಷ ಮಾಡಿದ ಅಧಿಕಾರಿ ಯಾರು ಅನ್ನೋದ್ರ ಬಗ್ಗೆ ಚರ್ಚೆ ಶುರುವಾಗಿದೆ.

ಇದನ್ನೂ ಓದಿ:ಕಂಗನಾ ಕಪಾಳಕ್ಕೆ ಬಾರಿಸಿದ ಸಿಬ್ಬಂದಿಗೆ ಸಸ್ಪೆಂಡ್‌ ಶಿಕ್ಷೆ.. ಯಾರು ಈ ಕುಲ್ವಿಂದರ್ ಕೌರ್? ಕೋಪಕ್ಕೆ ಕಾರಣವೇನು?

ಕುಲ್ವಿಂದರ್ ಸಿಂಗ್​​ ಯಾರು..?

  • 35 ವರ್ಷದ ಕುಲ್ವಿಂದರ್ ಕೌರ್ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (CISF)ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
    ಕುಲ್ವಿಂದರ್ ಕೌರ್​ CISF ಗೆ 2009ರಲ್ಲಿ ಸೇರಿಕೊಂಡರು.
  • 2021ರಿಂದ ಚಂಡಿಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ.
  • ಕುಲ್ವಿಂದರ್ ಕೌರ್ ಅವರು ಪಂಜಾಬ್‌ನ ಸುಲ್ತಾನ್‌ಪುರ್‌ ಲೊಧಿ ಮೂಲದವರು. ಕಳೆದ ಎರಡು ವರ್ಷದ ಹಿಂದಷ್ಟೇ ಚಂಡಿಗಢ ಏರ್‌ಪೋರ್ಟ್‌ ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದಾರೆ.
  • ಕುಲ್ವಿಂದರ್ ಕೌರ್ ಅವರಿಗೆ ಇಬ್ಬರು ಮಕ್ಕಳಿದ್ದು, ಅವರ ಪತಿ ಕೂಡ CISF ಸಿಬ್ಬಂದಿಯಾಗಿದ್ದಾರೆ. ಇವರ ಪತಿ ಕೂಡ ಇದೇ ಏರ್​ಪೋರ್ಟ್​ನಲ್ಲಿ ಕೆಲಸ ಮಾಡ್ತಿದ್ದಾರೆ.
  • ಕುಲ್ವಿಂದರ್ ಕೌರ್ ಅವರ ಸಹೋದರ ಶೇರ್ ಸಿಂಗ್ ರೈತ ಪರ ಹೋರಾಟಗಾರರು. ಕಿಸಾನ್ ಮಂಜ್ದೂರ್ ಸಂಘರ್ಷ ಕಮಿಟಿಯ ಕಾರ್ಯದರ್ಶಿಯಾಗಿದ್ದರು.
  • ಹಲ್ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಇವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಇದನ್ನೂ ಓದಿ:Super Over ಪಂದ್ಯದಲ್ಲಿ ಪಾಕ್ ಸೋಲಿಸಿದ ಅಮೆರಿಕ.. US ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಭಾರತೀಯ..!

ಕಂಗನಾ ಜೊತೆ ಗಲಾಟೆ ಏನು..?
ಹಿಮಾಚಲದ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿರುವ ಕಂಗನಾ ರಣಾವತ್​​​​ ಚಂಡೀಗಢದಿಂದ ದೆಹಲಿಗೆ ತೆರಳಲು ಹೊರಟಿದ್ದ ವೇಳೆ ಚಂಡೀಗಢದ ಏರ್​​​ಪೋರ್ಟ್​ನಲ್ಲಿದ್ದ ​ಸಿಐಎಸ್‌ಎಫ್​​ನ ಮಹಿಳಾ ಸಿಬ್ಬಂದಿ ಸೇವೆ ಸಲ್ಲಿಸುತ್ತಿರುವಾಗಲೇ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕುಲ್ವಿಂದರ್ ಸಿಂಗ್​ಗೆ ಯಾಕೆ ಕೋಪ..?
2020ರಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿದ್ದ ಮೂರು ಕೃಷಿ ಕಾಯಿದೆಗಳ ವಿರುದ್ಧ ಪಂಜಾಬ್​​​ ಮತ್ತು ಹರಿಯಾಣ ಭಾಗದ ರೈತರು ದೆಹಲಿಯಲ್ಲಿ ಉಗ್ರ ಹೋರಾಟ ನಡೆಸಿದ್ದರು. ರೈತರಿಗೆ ಮಂಡಿ ಕ್ಷೇತ್ರದಿಂದ ನೂತನ ಸಂಸದರಾಗಿ ಆಯ್ಕೆಯಾಗಿರುವ ಕಂಗನಾ ರಣಾವತ್​​, ಪ್ರತಿಭಟನೆ ಮಾಡುತ್ತಿದ್ದ ರೈತರನ್ನು ಖಲಿಸ್ತಾನಿ ಉಗ್ರರು ಎಂದು ಕರೆದಿದ್ದರು. ಈ ಹೇಳಿಕೆಯಿಂದ ಸಿಟ್ಟಿಗೆದ್ದ CISF ಅಧಿಕಾರಿ ಕುಲ್ವಿಂದರ್​ ಕೌರ್, ಕಂಗನಾ ಅವರು ಚಂಡೀಗಢ ಏರ್​ಪೋರ್ಟ್​ಗೆ ಆಗಮಿಸುತ್ತಿದಂತೆ ರೈತರಿಗೆ ಅವಮಾನ ಮಾಡಿದ್ದರೆಂದು ಕಪಾಳ ಮೋಕ್ಷ ಮಾಡಿದ್ದಾರೆ.

ಇದನ್ನೂ ಓದಿ:ಆ 4 ಖಾತೆ ಕೇಳಂಗಿಲ್ಲ ಎಂದ ಬಿಜೆಪಿ.. ಚೌಕಾಸಿ ಮಾಡಿ ಹೊಸ ಫಾರ್ಮೂಲ ಮುಂದಿಟ್ಟ ನಾಯ್ಡು..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕಂಗನಾ ಕೆನ್ನೆಗೆ ಹೊಡೆದ CISF ಅಧಿಕಾರಿ ಯಾರು..? ಕುಲ್ವಿಂದರ್ ಕೌರ್ ಕುರಿತ 7 ವಿಚಾರಗಳು ಇಲ್ಲಿದೆ..!

https://newsfirstlive.com/wp-content/uploads/2024/06/kangana.jpg

    ಕಂಗನಾ ಕಪಾಳಕ್ಕೆ ಬಾರಿಸಿದ ಸಿಬ್ಬಂದಿಗೆ ಸಸ್ಪೆಂಡ್‌ ಶಿಕ್ಷೆ..!

    ಚಂಡೀಗಢ ಏರ್​ಪೋರ್ಟ್​ಗೆ ಕಂಗನಾ ಆಗಮಿಸಿದಾಗ ಘಟನೆ

    ಕುಲ್ವಿಂದರ್ ಕೌರ್ ಕೋಪಕ್ಕೆ ಕಾರಣ ಏನು ಗೊತ್ತಾ..?

ಬಿಜೆಪಿ ಸಂಸದರಾಗಿ ಆಯ್ಕೆಯಾಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್​​​​ ಮೇಲೆ ಸಿಐಎಸ್​ಎಫ್​ ಸಿಬ್ಬಂದಿ ಕಪಾಳ ಮೋಕ್ಷ ಮಾಡಿದ್ದಾರೆ. ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿ ಮಾಡಿರುವ ಪ್ರಕರಣ ಇದಾಗಿದೆ. ಪ್ರಕರಣ ಬೆನ್ನಲ್ಲೇ ಕಪಾಳಮೋಕ್ಷ ಮಾಡಿದ ಅಧಿಕಾರಿ ಯಾರು ಅನ್ನೋದ್ರ ಬಗ್ಗೆ ಚರ್ಚೆ ಶುರುವಾಗಿದೆ.

ಇದನ್ನೂ ಓದಿ:ಕಂಗನಾ ಕಪಾಳಕ್ಕೆ ಬಾರಿಸಿದ ಸಿಬ್ಬಂದಿಗೆ ಸಸ್ಪೆಂಡ್‌ ಶಿಕ್ಷೆ.. ಯಾರು ಈ ಕುಲ್ವಿಂದರ್ ಕೌರ್? ಕೋಪಕ್ಕೆ ಕಾರಣವೇನು?

ಕುಲ್ವಿಂದರ್ ಸಿಂಗ್​​ ಯಾರು..?

  • 35 ವರ್ಷದ ಕುಲ್ವಿಂದರ್ ಕೌರ್ ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (CISF)ಕಾನ್‌ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
    ಕುಲ್ವಿಂದರ್ ಕೌರ್​ CISF ಗೆ 2009ರಲ್ಲಿ ಸೇರಿಕೊಂಡರು.
  • 2021ರಿಂದ ಚಂಡಿಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ.
  • ಕುಲ್ವಿಂದರ್ ಕೌರ್ ಅವರು ಪಂಜಾಬ್‌ನ ಸುಲ್ತಾನ್‌ಪುರ್‌ ಲೊಧಿ ಮೂಲದವರು. ಕಳೆದ ಎರಡು ವರ್ಷದ ಹಿಂದಷ್ಟೇ ಚಂಡಿಗಢ ಏರ್‌ಪೋರ್ಟ್‌ ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದಾರೆ.
  • ಕುಲ್ವಿಂದರ್ ಕೌರ್ ಅವರಿಗೆ ಇಬ್ಬರು ಮಕ್ಕಳಿದ್ದು, ಅವರ ಪತಿ ಕೂಡ CISF ಸಿಬ್ಬಂದಿಯಾಗಿದ್ದಾರೆ. ಇವರ ಪತಿ ಕೂಡ ಇದೇ ಏರ್​ಪೋರ್ಟ್​ನಲ್ಲಿ ಕೆಲಸ ಮಾಡ್ತಿದ್ದಾರೆ.
  • ಕುಲ್ವಿಂದರ್ ಕೌರ್ ಅವರ ಸಹೋದರ ಶೇರ್ ಸಿಂಗ್ ರೈತ ಪರ ಹೋರಾಟಗಾರರು. ಕಿಸಾನ್ ಮಂಜ್ದೂರ್ ಸಂಘರ್ಷ ಕಮಿಟಿಯ ಕಾರ್ಯದರ್ಶಿಯಾಗಿದ್ದರು.
  • ಹಲ್ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಇವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಇದನ್ನೂ ಓದಿ:Super Over ಪಂದ್ಯದಲ್ಲಿ ಪಾಕ್ ಸೋಲಿಸಿದ ಅಮೆರಿಕ.. US ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಭಾರತೀಯ..!

ಕಂಗನಾ ಜೊತೆ ಗಲಾಟೆ ಏನು..?
ಹಿಮಾಚಲದ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿರುವ ಕಂಗನಾ ರಣಾವತ್​​​​ ಚಂಡೀಗಢದಿಂದ ದೆಹಲಿಗೆ ತೆರಳಲು ಹೊರಟಿದ್ದ ವೇಳೆ ಚಂಡೀಗಢದ ಏರ್​​​ಪೋರ್ಟ್​ನಲ್ಲಿದ್ದ ​ಸಿಐಎಸ್‌ಎಫ್​​ನ ಮಹಿಳಾ ಸಿಬ್ಬಂದಿ ಸೇವೆ ಸಲ್ಲಿಸುತ್ತಿರುವಾಗಲೇ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕುಲ್ವಿಂದರ್ ಸಿಂಗ್​ಗೆ ಯಾಕೆ ಕೋಪ..?
2020ರಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿದ್ದ ಮೂರು ಕೃಷಿ ಕಾಯಿದೆಗಳ ವಿರುದ್ಧ ಪಂಜಾಬ್​​​ ಮತ್ತು ಹರಿಯಾಣ ಭಾಗದ ರೈತರು ದೆಹಲಿಯಲ್ಲಿ ಉಗ್ರ ಹೋರಾಟ ನಡೆಸಿದ್ದರು. ರೈತರಿಗೆ ಮಂಡಿ ಕ್ಷೇತ್ರದಿಂದ ನೂತನ ಸಂಸದರಾಗಿ ಆಯ್ಕೆಯಾಗಿರುವ ಕಂಗನಾ ರಣಾವತ್​​, ಪ್ರತಿಭಟನೆ ಮಾಡುತ್ತಿದ್ದ ರೈತರನ್ನು ಖಲಿಸ್ತಾನಿ ಉಗ್ರರು ಎಂದು ಕರೆದಿದ್ದರು. ಈ ಹೇಳಿಕೆಯಿಂದ ಸಿಟ್ಟಿಗೆದ್ದ CISF ಅಧಿಕಾರಿ ಕುಲ್ವಿಂದರ್​ ಕೌರ್, ಕಂಗನಾ ಅವರು ಚಂಡೀಗಢ ಏರ್​ಪೋರ್ಟ್​ಗೆ ಆಗಮಿಸುತ್ತಿದಂತೆ ರೈತರಿಗೆ ಅವಮಾನ ಮಾಡಿದ್ದರೆಂದು ಕಪಾಳ ಮೋಕ್ಷ ಮಾಡಿದ್ದಾರೆ.

ಇದನ್ನೂ ಓದಿ:ಆ 4 ಖಾತೆ ಕೇಳಂಗಿಲ್ಲ ಎಂದ ಬಿಜೆಪಿ.. ಚೌಕಾಸಿ ಮಾಡಿ ಹೊಸ ಫಾರ್ಮೂಲ ಮುಂದಿಟ್ಟ ನಾಯ್ಡು..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More