ಕುಮಾರ್ ಬಂಗಾರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ
ಮುತ್ತಿಗೆ ಹಾಕಿದವರ ವಿರುದ್ಧ ಕುಮಾರ್ ಬಂಗಾರಪ್ಪ ದೂರು
50 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು
ಶಿವಮೊಗ್ಗದಲ್ಲಿ ಗೀತಾ ಶಿವರಾಜ್ಕುಮಾರ್ ಸೋಲು ಕುರಿತು ವಿವಾದಾತ್ಮಕ ಪೋಸ್ಟ್ ಹಾಕಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಶಿವಣ್ಣ ಅಭಿಮಾನಿಗಳು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರ ಬಂಗಾರಪ್ಪ ಕೂಡಲೇ ಕ್ಷಮೆ ಕೇಳಬೇಕು ಅಂತ ಆಗ್ರಹಿಸಿದ್ದಾರೆ. ಅಭಿಮಾನಿಗಳ ಆಕ್ರೋಶ ಹೆಚ್ಚಾಗ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಗೀತಾ ಶಿವರಾಜ್ಕುಮಾರ್ ವಿರುದ್ಧ ನಾಲಿಗೆ ಹರಿಬಿಟ್ಟ ಕುಮಾರ್ ಬಂಗಾರಪ್ಪ.. ಏನಂದ್ರು?
ಇದನ್ನೂ ಓದಿ: 6 ತಿಂಗಳ ಹಿಂದೆಯೇ ಡಿವೋರ್ಸ್ಗೆ ನಿರ್ಧಾರ, ರಾಜಿ ಪಂಚಾಯ್ತಿ ಮಾಡಿದ್ರು; ವಕೀಲೆ ಅನಿತಾ ಏನಂದ್ರು ಗೊತ್ತಾ?
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ ವಿರುದ್ಧ ಸೋಲು ಕಂಡಿರುವ ಸಹೋದರಿ ಗೀತಾ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಮಾಡಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು, ನಮ್ಮ ಊರಿನ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಶಿವಣ್ಣ ಅರ್ಜಿ ಹಾಕಿಕೊಳ್ಳಬಹುದು ಅಂತ ಅಣಕಿಸಿ ಪೋಸ್ಟ್ ಮಾಡಿದ್ದರು. ಈ ಬೆನ್ನಲ್ಲೇ ರೊಚ್ಚಿಗೆದ್ದಿರುವ ನಟ ಶಿವಣ್ಣ ಅಭಿಮಾನಿಗಳು ಸದಾಶಿವನಗರದ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಮಾಜಿ ಸಚಿವರ ಮನೆ ಎದುರು ಪ್ರತಿಭಟನೆ ನಡೆಸಿದ ಅಭಿಮಾನಿಗಳು ಕುಮಾರ್ ಬಂಗಾರಪ್ಪ ಕ್ಷಮೆ ಕೇಳಬೇಕು ಅಂತ ಧಿಕ್ಕಾರ ಕೂಗಿದ್ದಾರೆ.
ಇದನ್ನೂ ಓದಿ: ಚಂದನ್ ಶೆಟ್ಟಿಗೆ ಆ ವಿಡಿಯೋ ಕಳುಹಿಸ್ತೀನಿ -ಇಬ್ಬರೂ ಒಂದಾಗುವ ಬಗ್ಗೆ ಮಾತಾಡಿದ ಪ್ರಥಮ್..!
ಇನ್ನು, ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಪ್ರಯತ್ನ ಪಟ್ರು. ಆದ್ರೂ ಪ್ರತಿಭಟನೆ ಜೋರಾಗ್ತಿದ್ದಂತೆ ಎಚ್ಚೆತ್ತ ಪೊಲೀಸರು ಶಿವಣ್ಣ ಅಭಿಮಾನಿಗಳನ್ನು ವಶಕ್ಕೆ ಪಡೆದ್ರು. ಈ ಬಗ್ಗೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ದೂರು ಆಧರಿಸಿ ಮುತ್ತಿಗೆ ಹಾಕಿದ್ದ 50 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ, ಆದ್ರೆ ಸೋಲನ್ನೇ ಗುರಿಯಾಗಿಸಿ ಈ ರೀತಿ ಅಣಕಿಸಿದ್ದು ಸರಿಯಲ್ಲ, ಕುಮಾರ್ ಬಂಗಾರಪ್ಪ ಹೇಳಿಕೆ ಶಿವಣ್ಣ ಅಭಿಮಾನಿಗಳನ್ನು ಕೆರಳಿಸಿದೆ. ಮಾಜಿ ಸಚಿವ ತಮ್ಮ ಹೇಳಿಕೆಗೆ ಕ್ಷಮೆ ಕೇಳ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕುಮಾರ್ ಬಂಗಾರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ
ಮುತ್ತಿಗೆ ಹಾಕಿದವರ ವಿರುದ್ಧ ಕುಮಾರ್ ಬಂಗಾರಪ್ಪ ದೂರು
50 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರು
ಶಿವಮೊಗ್ಗದಲ್ಲಿ ಗೀತಾ ಶಿವರಾಜ್ಕುಮಾರ್ ಸೋಲು ಕುರಿತು ವಿವಾದಾತ್ಮಕ ಪೋಸ್ಟ್ ಹಾಕಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಶಿವಣ್ಣ ಅಭಿಮಾನಿಗಳು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರ ಬಂಗಾರಪ್ಪ ಕೂಡಲೇ ಕ್ಷಮೆ ಕೇಳಬೇಕು ಅಂತ ಆಗ್ರಹಿಸಿದ್ದಾರೆ. ಅಭಿಮಾನಿಗಳ ಆಕ್ರೋಶ ಹೆಚ್ಚಾಗ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಗೀತಾ ಶಿವರಾಜ್ಕುಮಾರ್ ವಿರುದ್ಧ ನಾಲಿಗೆ ಹರಿಬಿಟ್ಟ ಕುಮಾರ್ ಬಂಗಾರಪ್ಪ.. ಏನಂದ್ರು?
ಇದನ್ನೂ ಓದಿ: 6 ತಿಂಗಳ ಹಿಂದೆಯೇ ಡಿವೋರ್ಸ್ಗೆ ನಿರ್ಧಾರ, ರಾಜಿ ಪಂಚಾಯ್ತಿ ಮಾಡಿದ್ರು; ವಕೀಲೆ ಅನಿತಾ ಏನಂದ್ರು ಗೊತ್ತಾ?
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ ವಿರುದ್ಧ ಸೋಲು ಕಂಡಿರುವ ಸಹೋದರಿ ಗೀತಾ ಶಿವರಾಜ್ ಕುಮಾರ್ ಬಗ್ಗೆ ವ್ಯಂಗ್ಯ ಮಾಡಿದ್ದ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು, ನಮ್ಮ ಊರಿನ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಶಿವಣ್ಣ ಅರ್ಜಿ ಹಾಕಿಕೊಳ್ಳಬಹುದು ಅಂತ ಅಣಕಿಸಿ ಪೋಸ್ಟ್ ಮಾಡಿದ್ದರು. ಈ ಬೆನ್ನಲ್ಲೇ ರೊಚ್ಚಿಗೆದ್ದಿರುವ ನಟ ಶಿವಣ್ಣ ಅಭಿಮಾನಿಗಳು ಸದಾಶಿವನಗರದ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಮಾಜಿ ಸಚಿವರ ಮನೆ ಎದುರು ಪ್ರತಿಭಟನೆ ನಡೆಸಿದ ಅಭಿಮಾನಿಗಳು ಕುಮಾರ್ ಬಂಗಾರಪ್ಪ ಕ್ಷಮೆ ಕೇಳಬೇಕು ಅಂತ ಧಿಕ್ಕಾರ ಕೂಗಿದ್ದಾರೆ.
ಇದನ್ನೂ ಓದಿ: ಚಂದನ್ ಶೆಟ್ಟಿಗೆ ಆ ವಿಡಿಯೋ ಕಳುಹಿಸ್ತೀನಿ -ಇಬ್ಬರೂ ಒಂದಾಗುವ ಬಗ್ಗೆ ಮಾತಾಡಿದ ಪ್ರಥಮ್..!
ಇನ್ನು, ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಪ್ರಯತ್ನ ಪಟ್ರು. ಆದ್ರೂ ಪ್ರತಿಭಟನೆ ಜೋರಾಗ್ತಿದ್ದಂತೆ ಎಚ್ಚೆತ್ತ ಪೊಲೀಸರು ಶಿವಣ್ಣ ಅಭಿಮಾನಿಗಳನ್ನು ವಶಕ್ಕೆ ಪಡೆದ್ರು. ಈ ಬಗ್ಗೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ದೂರು ಆಧರಿಸಿ ಮುತ್ತಿಗೆ ಹಾಕಿದ್ದ 50 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ, ಆದ್ರೆ ಸೋಲನ್ನೇ ಗುರಿಯಾಗಿಸಿ ಈ ರೀತಿ ಅಣಕಿಸಿದ್ದು ಸರಿಯಲ್ಲ, ಕುಮಾರ್ ಬಂಗಾರಪ್ಪ ಹೇಳಿಕೆ ಶಿವಣ್ಣ ಅಭಿಮಾನಿಗಳನ್ನು ಕೆರಳಿಸಿದೆ. ಮಾಜಿ ಸಚಿವ ತಮ್ಮ ಹೇಳಿಕೆಗೆ ಕ್ಷಮೆ ಕೇಳ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ