/newsfirstlive-kannada/media/post_attachments/wp-content/uploads/2025/01/MYS_KUMBHA.jpg)
ಮೈಸೂರು: ಮಹಾ ಕುಂಭಮೇಳ ಮುಗಿಸಿ ಕಾಶಿಯಾತ್ರೆಗೆ ತೆರಳುವಾಗ ಭೀಕರ ಅಪಘಾತ ಸಂಭವಿಸಿ ಕರ್ನಾಟಕದ ಮೈಸೂರಿನ ಇಬ್ಬರು ವ್ಯಕ್ತಿಗಳು ಹಸುನೀಗಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ಬಳಿ ಈ ಘಟನೆ ನಡೆದಿದೆ.
ಪುರೋಹಿತರಾದ ರಾಮಕೃಷ್ಣ ಶರ್ಮಾ (31), ಅರುಣ್ ಶಾಸ್ತ್ರಿ (38) ಹಸುನೀಗಿದ ವ್ಯಕ್ತಿಗಳು. ಈ ಇಬ್ಬರು ತಮ್ಮ ಕಾರಿನಲ್ಲಿ ಪ್ರಯಾಗರಾಜ್ ಕುಂಭಮೇಳಕ್ಕೆ ತೆರಳಿದ್ದರು. ಕುಂಭಮೇಳದಲ್ಲಿ ಪವಿತ್ರಾ ಸ್ನಾನ ಮುಗಿಸಿದ ನಂತರ ಕಾಶಿಯಾತ್ರೆಗೆ ತೆರಳುತ್ತಿದ್ದರು. ಈ ವೇಳೆ ಮಿರ್ಜಾಪುರದ ಬಳಿ ಕಾರು ಹಾಗೂ ಲಾರಿ ನಡುವೆ ಭಯಾನಕ ಡಿಕ್ಕಿ ಸಂಭವಿಸಿದೆ. ಇದರಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ಇದನ್ನೂ ಓದಿ:ಧನರಾಜ್ಗೆ BIGG BOSS ಟ್ರೋಫಿ ಕೊಟ್ಟ ಹನುಮಂತ.. ದೋಸ್ತನ ಹಾಡಿ ಹೊಗಳಿದ ಪ್ರಾಣ ಸ್ನೇಹಿತ
ಇಬ್ಬರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಬೆಳಗ್ಗೆ 8.32ರ ಸಮಯಕ್ಕೆ ರಾಮಕೃಷ್ಣ, ಇಂದು ಬೆಳಗ್ಗೆ 3 ಗಂಟೆಗೆ ಅರುಣ್ ಕೊನೆಯುಸಿರೆಳೆದಿದ್ದಾರೆ. ರಾಮಕೃಷ್ಣ, ಕೆ.ಆರ್.ಎಸ್ ಹಿನ್ನೀರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿದ್ದರು. ಅರುಣ್ ಶಾಸ್ತ್ರಿ ಪುರೋಹಿತರಾಗಿ ಕೆಲಸ ಮಾಡುತ್ತಿದ್ದರು. ಈ ಇಬ್ಬರಿಗೂ ಮದುವೆ ಆಗಿರಲಿಲ್ಲ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ