Advertisment

ಜಚನಿ‌ ಶ್ರೀಗಳು ಅಂತರಂಗ ಶುದ್ಧಿಗೆ, ಸಾಮಾಜಿಕ ಶುದ್ಧಿಗೆ ಮಹತ್ವ ನೀಡಿದರು: ಕೆ.ವಿ.ಪ್ರಭಾಕರ್

author-image
Ganesh Kerekuli
KV Prabhakar
Advertisment

ಬೆಂಗಳೂರು: ಮೇಲಿನವರ ಪಾಂಡಿತ್ಯ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದ ಅಧ್ಯಾತ್ಮವನ್ನು ಅಂತ್ಯಜರ ಪ್ರಸಾದವನ್ನಾಗಿಸಿದ್ದು ಜಚನಿ ಶ್ರೀಗಳ ಹೆಗ್ಗಳಿಕೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. 

Advertisment

ಶ್ರೀ ಜಚನಿ‌ ಅಧ್ಯಯನ‌ ಪೀಠ ಮತ್ತು ಸಂಶೋಧನಾ ಸಂಸ್ಥೆಯ ಪ್ರಾರಂಭೋತ್ಸವದಲ್ಲಿ "ಶಿವ ಸಾಹಿತ್ಯ ಸೂರ್ಯ ಶ್ರೀ ಜಚನಿ" ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು. 

ಇದನ್ನೂ ಓದಿ: ODI ಸರಣಿ ಸೋಲಿಗೆ ಕಾರಣ ಗಿಲ್​.. ಅಸಲಿ ಸತ್ಯ ಇಲ್ಲಿದೆ..!

KV Prabhakar (4)

ಮನುಷ್ಯರನ್ನು ಮುಟ್ಟಿಸಿಕೊಳ್ಳದ ಚರ್ಮಶುದ್ಧಿಯ ಅಧ್ಯಾತ್ಮದ ಗೊಡ್ಡುತನವನ್ನು ಧಿಕ್ಕರಿಸಿ 1948ರಲ್ಲೇ ದಲಿತ ಸಮುದಾಯಕ್ಕೆ ತಮ್ಮ ಮಠವನ್ನು ಮುಕ್ತಗೊಳಿಸಿದ ಜಚನಿ ಶ್ರೀಗಳು ಸಾಮಾಜಿಕ ಮತ್ತು ಅಂತರಂಗದ ಶುದ್ಧಿಯನ್ನೇ ತಮ್ಮ ಅಧ್ಯಾತ್ಮದ ಉದ್ದೇಶವನ್ನಾಗಿಸಿಕೊಂಡಿದ್ದರು ಎಂದು ವಿವರಿಸಿದರು. 

ಆಡು ಮುಟ್ಟದ ಸೊಪ್ಪಿಲ್ಲ, ಜಚನಿ ಶ್ರೀಗಳು ಸಾಹಿತ್ಯ ಕೃಷಿ ಮಾಡದ ವಿಷಯಗಳೇ ಇಲ್ಲ ಎಂದು ಹೇಳಬಹುದು.  ಧಾರ್ಮಿಕ, ಅಧ್ಯಾತ್ಮಿಕದಿಂದ ದೇಶದ ತುರ್ತು ಪರಿಸ್ಥಿತಿ, ಸರ್ವಾಧಿಕಾರದವರೆಗೂ ಬರೆದಿದ್ದಾರೆ. ತಮ್ಮ ಬದುಕನ್ನು ಸಾಹಿತ್ಯ ಕೃಷಿ ಮತ್ತು ಅಧ್ಯಾತ್ಮದ ಪ್ರಸಾರಕ್ಕೆ ಮಾತ್ರ ಜಚನಿ ಶ್ರೀಗಳು  ಸೀಮಿತಗೊಳಿಸಿಕೊಳ್ಳಲಿಲ್ಲ. 

Advertisment

ಇದನ್ನೂ ಓದಿ:CM ಸಿದ್ದರಾಮಯ್ಯ ಕೇವಲ ವ್ಯಕ್ತಿ ಅಲ್ಲ, ಸಿದ್ಧಾಂತ, ಇದಕ್ಕೆ ಪರಂಪರೆಯೇ ಇದೆ: ಕೆವಿ ಪ್ರಭಾಕರ್

KV Prabhakar (2)


ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಇಡೀ ರಾಜ್ಯ ಸುತ್ತಿದ ಸಾಮಾಜಿಕ ಮತ್ತು ರಾಜಕೀಯ ಹೋರಾಟಗಾರರೂ ಆಗಿದ್ದಾರೆ ಎನ್ನುವುದು ಹೊರ ಜಗತ್ತಿಗೆ ಹೆಚ್ಚಾಗಿ ಗೊತ್ತಿಲ್ಲ ಎಂದರು. 

ಭೌತವಿಜ್ಞಾನದಿಂದ ಸಮುದ್ರ ವಿಜ್ಞಾನದವರೆಗೂ, ರೈತರ ಸಮಸ್ಯೆಗಳಿಂದ ಕುಡುಕರ ಸಮಸ್ಯೆಗಳವರೆಗೂ ಸಾಹಿತ್ಯ ಕೃಷಿ ಮಾಡಿದ್ದಾರೆ. ಹತ್ತಾರು ಮಂದಿ ಹಲವಾರು ಜೀವಮಾನದಲ್ಲಿ ಮಾಡಬಹುದಾದ ಸಾಧನೆಯನ್ನು ಜಚನಿ ಶ್ರೀಗಳು ಒಂದೇ ಜೀವಮಾನದಲ್ಲಿ ಮಾಡಿ ಮುಗಿಸಿದ್ದಾರೆ ಎಂದರು. 

Advertisment

ಇಂಥಾ ಜನಮುಖಿ ಅಧ್ಯಾತ್ಮಿಕ ಶಿಖರ ಸೂರ್ಯರ ಕೃತಿಯನ್ನು ಬಿಡುಗಡೆ  ಮಾಡಲು ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಿಡುಮಾಮಿಡಿ ಶ್ರೀಗಳಿಗೆ ಧನ್ಯತೆಯನ್ನು ಅರ್ಪಿಸುತ್ತೇನೆ. 12ನೇ ಶತಮಾನದ ವಚನಕ್ರಾಂತಿಯ ರಾಯಭಾರಿಯಾಗಿ 20ನೇ ಶತಮಾನದಲ್ಲಿ ಜಚನಿ ಶ್ರೀಗಳು ಬೆಳಗಿದ್ದಾರೆ. 6000 ಕ್ಕೂ ಹೆಚ್ಚು ಆಧುನಿಕ  ವಚನಗಳು, 400ಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚಿಸಿರುವುದು ನನ್ನ ಕಲ್ಪನಾ ಶಕ್ತಿಗೂ ನಿಲುಕದ ಆಧ್ಯಾತ್ಮಿಕ‌ ಸಾಧನೆಯಾಗಿದೆ. 

ಇದನ್ನೂ ಓದಿ: ಗಿಲ್ಲಿ ನಗುವಿನ ಟಾನಿಕ್.. ಅಶ್ವಿನಿ ಮೇಲೆ ಕಾವ್ಯ ಬೆಂಕಿ ಕಿಡಿ.. ಬಿಗ್​ಬಾಸ್​ನಲ್ಲಿ ಇವತ್ತು ಏನೇನು..?

KV Prabhakar (1)

ಇಂಥಾ ಮಾನವೀಯ ಸಾಧಕ ಗುರುಗಳ ಬಗ್ಗೆ ನಿಡುಮಾಮಿಡಿ ಶ್ರೀಗಳು ಸಂಪಾದಿಸಿರುವ ಈ ಪುಸ್ತಕ ಕೂಡ ಅತ್ಯಂತ ಮೌಲಿಕವಾದದ್ದು. ಈ ಪುಸ್ತಕ ಜಚನಿ ಶ್ರೀಗಳ ಒಟ್ಟಾರೆ ಸಾಧನೆಯನ್ನು ತಿಳಿಯಲು ಮತ್ತು ಅವರ ಮಾರ್ಗದಲ್ಲಿ ಹೋಗಲು ಬಯಸುವವರಿಗೆ ಹೆದ್ದಾರಿಯಾಗಿದೆ ಎಂದು ಹೇಳಲು ಬಯಸುತ್ತೇನೆ. 

Advertisment

ಬೈಲಹೊಂಗಲದ ಅಂಬಡಗಟ್ಟಿ ಗ್ರಾಮದಲ್ಲಿ ಜನಿಸಿ, ನನ್ನ ಕೋಲಾರ ಜಿಲ್ಲೆಯ ಗೂಳೂರಿನ ನಿಡುಮಾಮಿಡಿ ಮಠದ ಪೀಠಾಧಿಪತಿಯಾಗಿ ಕೋಲಾರದ ಮಣ್ಣಿನಲ್ಲಿ ವನಚ ಕ್ರಾಂತಿಯ ಬೆಳಕಿನ ದೀವಿಗೆ ಹಚ್ಚಿರುವುದು ನನಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು. 

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

KV Prabhakar
Advertisment
Advertisment
Advertisment