Advertisment

ಲಾಯರ್ ಜಗದೀಶ್, ಮಗ, ಗನ್​ಮ್ಯಾನ್​ ಅರೆಸ್ಟ್​.. ಕೋರ್ಟ್​ಗೆ ಹಾಜರು ಪಡಿಸಲಿರೋ ಪೊಲೀಸರು

author-image
Bheemappa
Updated On
BBK11; ರಣರಂಗವಾದ ಮನೆ.. ಲಾಯರ್ ಜಗದೀಶ್​- ತ್ರಿವಿಕ್ರಮ್, ಮಂಜು, ಮಾನಸ ನಡುವೆ ಗಲಾಟೆ
Advertisment
  • ಅಣ್ಣಮ್ಮ ದೇವಿ ಉತ್ಸವದ ವಿಚಾರವಾಗಿ ಸ್ಥಳೀಯರ ಜೊತೆ ಗಲಾಟೆ
  • ಪ್ರಶ್ನಿಸಿದ್ದಕ್ಕೆ ವಕೀಲ ಜಗದೀಶ್ ಮೇಲೆ ಹಲ್ಲೆ ಮಾಡಿರುವ ಸ್ಥಳೀಯರು
  • ಠಾಣೆಯಲ್ಲಿ ದೂರು- ಪ್ರತಿದೂರು ದಾಖಲು, ಪೊಲೀಸರಿಂದ ತನಿಖೆ

ಬೆಂಗಳೂರು: ಕೊಡಿಗೇಹಳ್ಳಿಯ ಸ್ಥಳೀಯರು ಹಾಗೂ ಲಾಯರ್ ಜಗದೀಶ್ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿಯೇ ಪೊಲೀಸರು ಲಾಯರ್ ಜಗದೀಶ್, ಪುತ್ರ ಹಾಗೂ ಇಬ್ಬರು ಗನ್​ಮ್ಯಾನ್​ಗಳನ್ನ ಅರೆಸ್ಟ್ ಮಾಡಿದ್ದಾರೆ.

Advertisment

ಗಲಾಟೆಯಲ್ಲಿ ಲಾಯರ್ ಜಗದೀಶ್ ಅವರು ಗಾಯಗೊಂಡಿದ್ದರು. ಅವರ ಮೂಗಿನಿಂದ ರಕ್ತ ಬರುತ್ತಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಮಾತನಾಡಿದ್ದರು. ನಿನ್ನೆ ನಡೆದ ಘಟನೆಯಲ್ಲಿ ಜಗದೀಶ್ ಗಾಯಗೊಂಡಿದ್ದಕ್ಕೆ ಪೊಲೀಸರೇ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಮೆಡಿಕಲ್ ಚೆಕಪ್ ಮಾಡಿಸಿ ಪೊಲೀಸರು ಜಗದೀಶ್, ಅವರ ಮಗ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್​ಗಳನ್ನು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: BIGG BOSS ಗ್ರ್ಯಾಂಡ್ ಫಿನಾಲೆ ಸ್ಟೇಜ್ ಮೇಲೆ ಕಿಚ್ಚ ಸುದೀಪ್ ಸಖತ್ ಸ್ಟೆಪ್ಸ್.. ಫುಲ್​ ಕ್ಲಾಸ್​ ಈ ‘ಮ್ಯಾಕ್ಸ್’

publive-image

ಇಂದು 11 ಗಂಟೆಯ ಬಳಿಕ ಜಗದೀಶ್​ರನ್ನು ನ್ಯಾಯಾಲಯದ ಮುಂದೆ ಪೊಲೀಸರು ಹಾಜರು ಪಡಿಸಲಿದ್ದಾರೆ. ಜಗದೀಶ್ ವಿರುದ್ಧ ಸ್ಥಳೀಯರು ದೂರು ನೀಡಿದ್ದಾರೆ. ಇದಕ್ಕೆ ಜಗದೀಶ್ ಕೂಡ ಪ್ರತಿ ದೂರು ದಾಖಲು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Advertisment

ಏನಿದು ಗಲಾಟೆ?

ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಅಣ್ಣಮ್ಮ ದೇವಿಯ ಉತ್ಸವದ ವಿಚಾರವಾಗಿ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಹಾಗೂ ಸ್ಥಳೀಯರ ಮಧ್ಯೆ ಮಾರಾಮಾರಿಯಾಗಿದೆ. ಯಾವುದೇ ಅನುಮತಿ ಪಡೆಯದೇ ರಸ್ತೆಗೆ ಅಡ್ಡವಾಗಿ ಪೆಂಡಾಲ್ ಹಾಕಲಾಗಿದೆ ಎಂದು ವಕೀಲ ಜಗದೀಶ್ ಬಿಬಿಎಂಪಿ ಹಾಗೂ ಪೊಲೀಸರಿಗೆ ಎರಡು ದಿನದ ಹಿಂದೆ ದೂರು ನೀಡಿದ್ದರು. ಇದಕ್ಕೆ ಕೋಪಗೊಂಡಿದ್ದ ಸ್ಥಳೀಯರು ವಕೀಲ ಜಗದೀಶ್ ಮನೆ ಬಳಿ ತೆರಳಿ ಗಲಾಟೆ ಮಾಡಿದ್ದರು. ಈ ಬಗ್ಗೆ ಜನವರಿ 23 ರಂದು ಕೊಡಿಗೆಹಳ್ಳಿ ಠಾಣೆಯಲ್ಲಿ ನಾಗರಾಜ್ ಎನ್ನುವವರ ವಿರುದ್ಧ ಜಗದೀಶ್ ದೂರು ನೀಡಿದ್ರೆ, ಜಗದೀಶ್ ವಿರುದ್ಧವೂ ಪ್ರತಿದೂರು ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment