newsfirstkannada.com

ಪ್ರಾಂಶುಪಾಲರಿಂದಲೇ ಅತ್ಯಾಚಾರ; ಸಿಎಂ ಯೋಗಿಗೆ ರಕ್ತದಲ್ಲಿ ಪತ್ರ ಬರೆದ ವಿದ್ಯಾರ್ಥಿನಿಯರು!

Share :

29-08-2023

    ಪ್ರಾಂಶುಪಾಲರಿಂದಲೇ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ

    ಪೊಲೀಸ್​​ ಠಾಣೆ ಮೆಟ್ಟಿಲೇರಿದ ಉತ್ತರ ಪ್ರದೇಶ ವಿದ್ಯಾರ್ಥಿನಿಯರು

    ಉತ್ತರ ಪ್ರದೇಶ ಸಿಎಂ ಯೋಗಿಗೆ ರಕ್ತದಲ್ಲಿ ಪತ್ರ ಬರೆದು ಕ್ರಮಕ್ಕೆ ಆಗ್ರಹ

ಗಾಜಿಯಾಬಾದ್: ತಮ್ಮ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ಗೆ ಅಪ್ರಾಪ್ತ ಬಾಲಕಿಯರು ಪತ್ರ ಬರೆದಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್​ಗೆ ರಕ್ತದಲ್ಲಿ ಪತ್ರ ಬರೆದು ಕೂಡಲೇ ಅತ್ಯಾಚಾರ ಆರೋಪ ಹೊತ್ತ ಪ್ರಾಂಶುಪಾಲರನ್ನು ಬಂಧಿಸಿ ಎಂದು ಆಗ್ರಹಿಸಿದ್ದಾರೆ.

ಸಿಎಂ ಯೋಗಿಗೆ ಪತ್ರದಲ್ಲೇನಿದೆ..?

ಪ್ರಾಂಶುಪಾಲರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಾವು ನಿಮ್ಮೊಂದಿಗೆ ಈ ವಿಷಯದ ಕುರಿತು ಚರ್ಚಿಸಬೇಕಿದೆ. ನಿಮ್ಮನ್ನು ಭೇಟಿಯಾಗಲು ನಮ್ಮ ಪೋಷಕರಿಗೆ ಅವಕಾಶ ಮಾಡಿ. ನಮ್ಮನ್ನು ನಿಮ್ಮ ಮಕ್ಕಳು ಎಂದು ಭಾವಿಸಿ ನ್ಯಾಯ ದೊರಕಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್ ಶಾಲೆಯೊಂದರ ಪ್ರಾಂಶುಪಾಲರನ್ನು ಅತ್ಯಾಚಾರ ಕೇಸ್​​ನಲ್ಲಿ ಅರೆಸ್ಟ್​ ಮಾಡಲಾಗಿದೆ. ಪೊಲೀಸರಿಂದ ಅರೆಸ್ಟ್​ ಆದ ಆರೋಪಿ ಡಾ. ರಾಜೀವ್​ ಪಾಂಡೆ. ಈತ ತನ್ನ ಶಾಲೆಯಲ್ಲಿ ಓದುತ್ತಿರೋ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಏನಿದು ಘಟನೆ..?

ಅಪ್ರಾಪ್ತ ಬಾಲಕಿಯರನ್ನು ತನ್ನ ಕೊಠಡಿಗೆ ಕರೆಸಿಕೊಂಡ ಆರೋಪಿ ಪ್ರಾಂಶುಪಾಲ ಅನುಚಿತ ವರ್ತನೆ ತೋರಿದ್ದಾರೆ. 12-15 ವರ್ಷದ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕೂಡಲೇ ಈತನನ್ನು ಪೋಷಕರು ಪ್ರಶ್ನಿಸಲು ಹೋದಾಗ ಎಸ್ಕೇಪ್​ ಆಗಿದ್ದಾನೆ. ಬಳಿಕ ತನ್ನ ವಿರುದ್ಧ ಕೇಸ್​ ಮಾಡಿದ್ದ ಸಂತ್ರಸ್ತ ಬಾಲಕಿಯರ ಪೋಷಕರ ಮೇಲೆಯೇ ಪೊಲೀಸ್​​ ಕೇಸ್​ ಮಾಡಿದ್ದಾರೆ. ಈ ಮುನ್ನ ಪೋಷಕರು ಆರೋಪಿ ಪ್ರಾಂಶುಪಾಲರ ವಿರುದ್ಧ ಪೋಕ್ಸೋ ಕೇಸ್​ ದಾಖಲಿಸಿದ್ದರು. ಹಾಗೆಯೇ ಪ್ರಾಂಶುಪಾಲರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮಾಜಿ ಸದಸ್ಯ ಎಂದು ದೂರಿದ್ದರು. ಸದ್ಯ ಪೊಲೀಸರು ಕೇಸ್​ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪ್ರಾಂಶುಪಾಲರಿಂದಲೇ ಅತ್ಯಾಚಾರ; ಸಿಎಂ ಯೋಗಿಗೆ ರಕ್ತದಲ್ಲಿ ಪತ್ರ ಬರೆದ ವಿದ್ಯಾರ್ಥಿನಿಯರು!

https://newsfirstlive.com/wp-content/uploads/2023/08/Pocso.jpg

    ಪ್ರಾಂಶುಪಾಲರಿಂದಲೇ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ

    ಪೊಲೀಸ್​​ ಠಾಣೆ ಮೆಟ್ಟಿಲೇರಿದ ಉತ್ತರ ಪ್ರದೇಶ ವಿದ್ಯಾರ್ಥಿನಿಯರು

    ಉತ್ತರ ಪ್ರದೇಶ ಸಿಎಂ ಯೋಗಿಗೆ ರಕ್ತದಲ್ಲಿ ಪತ್ರ ಬರೆದು ಕ್ರಮಕ್ಕೆ ಆಗ್ರಹ

ಗಾಜಿಯಾಬಾದ್: ತಮ್ಮ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ಗೆ ಅಪ್ರಾಪ್ತ ಬಾಲಕಿಯರು ಪತ್ರ ಬರೆದಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್​ಗೆ ರಕ್ತದಲ್ಲಿ ಪತ್ರ ಬರೆದು ಕೂಡಲೇ ಅತ್ಯಾಚಾರ ಆರೋಪ ಹೊತ್ತ ಪ್ರಾಂಶುಪಾಲರನ್ನು ಬಂಧಿಸಿ ಎಂದು ಆಗ್ರಹಿಸಿದ್ದಾರೆ.

ಸಿಎಂ ಯೋಗಿಗೆ ಪತ್ರದಲ್ಲೇನಿದೆ..?

ಪ್ರಾಂಶುಪಾಲರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಾವು ನಿಮ್ಮೊಂದಿಗೆ ಈ ವಿಷಯದ ಕುರಿತು ಚರ್ಚಿಸಬೇಕಿದೆ. ನಿಮ್ಮನ್ನು ಭೇಟಿಯಾಗಲು ನಮ್ಮ ಪೋಷಕರಿಗೆ ಅವಕಾಶ ಮಾಡಿ. ನಮ್ಮನ್ನು ನಿಮ್ಮ ಮಕ್ಕಳು ಎಂದು ಭಾವಿಸಿ ನ್ಯಾಯ ದೊರಕಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಉತ್ತರ ಪ್ರದೇಶದ ಗಾಜಿಯಾಬಾದ್ ಶಾಲೆಯೊಂದರ ಪ್ರಾಂಶುಪಾಲರನ್ನು ಅತ್ಯಾಚಾರ ಕೇಸ್​​ನಲ್ಲಿ ಅರೆಸ್ಟ್​ ಮಾಡಲಾಗಿದೆ. ಪೊಲೀಸರಿಂದ ಅರೆಸ್ಟ್​ ಆದ ಆರೋಪಿ ಡಾ. ರಾಜೀವ್​ ಪಾಂಡೆ. ಈತ ತನ್ನ ಶಾಲೆಯಲ್ಲಿ ಓದುತ್ತಿರೋ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಏನಿದು ಘಟನೆ..?

ಅಪ್ರಾಪ್ತ ಬಾಲಕಿಯರನ್ನು ತನ್ನ ಕೊಠಡಿಗೆ ಕರೆಸಿಕೊಂಡ ಆರೋಪಿ ಪ್ರಾಂಶುಪಾಲ ಅನುಚಿತ ವರ್ತನೆ ತೋರಿದ್ದಾರೆ. 12-15 ವರ್ಷದ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕೂಡಲೇ ಈತನನ್ನು ಪೋಷಕರು ಪ್ರಶ್ನಿಸಲು ಹೋದಾಗ ಎಸ್ಕೇಪ್​ ಆಗಿದ್ದಾನೆ. ಬಳಿಕ ತನ್ನ ವಿರುದ್ಧ ಕೇಸ್​ ಮಾಡಿದ್ದ ಸಂತ್ರಸ್ತ ಬಾಲಕಿಯರ ಪೋಷಕರ ಮೇಲೆಯೇ ಪೊಲೀಸ್​​ ಕೇಸ್​ ಮಾಡಿದ್ದಾರೆ. ಈ ಮುನ್ನ ಪೋಷಕರು ಆರೋಪಿ ಪ್ರಾಂಶುಪಾಲರ ವಿರುದ್ಧ ಪೋಕ್ಸೋ ಕೇಸ್​ ದಾಖಲಿಸಿದ್ದರು. ಹಾಗೆಯೇ ಪ್ರಾಂಶುಪಾಲರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮಾಜಿ ಸದಸ್ಯ ಎಂದು ದೂರಿದ್ದರು. ಸದ್ಯ ಪೊಲೀಸರು ಕೇಸ್​ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More