ಪ್ರಾಂಶುಪಾಲರಿಂದಲೇ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ
ಪೊಲೀಸ್ ಠಾಣೆ ಮೆಟ್ಟಿಲೇರಿದ ಉತ್ತರ ಪ್ರದೇಶ ವಿದ್ಯಾರ್ಥಿನಿಯರು
ಉತ್ತರ ಪ್ರದೇಶ ಸಿಎಂ ಯೋಗಿಗೆ ರಕ್ತದಲ್ಲಿ ಪತ್ರ ಬರೆದು ಕ್ರಮಕ್ಕೆ ಆಗ್ರಹ
ಗಾಜಿಯಾಬಾದ್: ತಮ್ಮ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಅಪ್ರಾಪ್ತ ಬಾಲಕಿಯರು ಪತ್ರ ಬರೆದಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ಗೆ ರಕ್ತದಲ್ಲಿ ಪತ್ರ ಬರೆದು ಕೂಡಲೇ ಅತ್ಯಾಚಾರ ಆರೋಪ ಹೊತ್ತ ಪ್ರಾಂಶುಪಾಲರನ್ನು ಬಂಧಿಸಿ ಎಂದು ಆಗ್ರಹಿಸಿದ್ದಾರೆ.
ಸಿಎಂ ಯೋಗಿಗೆ ಪತ್ರದಲ್ಲೇನಿದೆ..?
ಪ್ರಾಂಶುಪಾಲರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಾವು ನಿಮ್ಮೊಂದಿಗೆ ಈ ವಿಷಯದ ಕುರಿತು ಚರ್ಚಿಸಬೇಕಿದೆ. ನಿಮ್ಮನ್ನು ಭೇಟಿಯಾಗಲು ನಮ್ಮ ಪೋಷಕರಿಗೆ ಅವಕಾಶ ಮಾಡಿ. ನಮ್ಮನ್ನು ನಿಮ್ಮ ಮಕ್ಕಳು ಎಂದು ಭಾವಿಸಿ ನ್ಯಾಯ ದೊರಕಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಶಾಲೆಯೊಂದರ ಪ್ರಾಂಶುಪಾಲರನ್ನು ಅತ್ಯಾಚಾರ ಕೇಸ್ನಲ್ಲಿ ಅರೆಸ್ಟ್ ಮಾಡಲಾಗಿದೆ. ಪೊಲೀಸರಿಂದ ಅರೆಸ್ಟ್ ಆದ ಆರೋಪಿ ಡಾ. ರಾಜೀವ್ ಪಾಂಡೆ. ಈತ ತನ್ನ ಶಾಲೆಯಲ್ಲಿ ಓದುತ್ತಿರೋ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಏನಿದು ಘಟನೆ..?
ಅಪ್ರಾಪ್ತ ಬಾಲಕಿಯರನ್ನು ತನ್ನ ಕೊಠಡಿಗೆ ಕರೆಸಿಕೊಂಡ ಆರೋಪಿ ಪ್ರಾಂಶುಪಾಲ ಅನುಚಿತ ವರ್ತನೆ ತೋರಿದ್ದಾರೆ. 12-15 ವರ್ಷದ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕೂಡಲೇ ಈತನನ್ನು ಪೋಷಕರು ಪ್ರಶ್ನಿಸಲು ಹೋದಾಗ ಎಸ್ಕೇಪ್ ಆಗಿದ್ದಾನೆ. ಬಳಿಕ ತನ್ನ ವಿರುದ್ಧ ಕೇಸ್ ಮಾಡಿದ್ದ ಸಂತ್ರಸ್ತ ಬಾಲಕಿಯರ ಪೋಷಕರ ಮೇಲೆಯೇ ಪೊಲೀಸ್ ಕೇಸ್ ಮಾಡಿದ್ದಾರೆ. ಈ ಮುನ್ನ ಪೋಷಕರು ಆರೋಪಿ ಪ್ರಾಂಶುಪಾಲರ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದರು. ಹಾಗೆಯೇ ಪ್ರಾಂಶುಪಾಲರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮಾಜಿ ಸದಸ್ಯ ಎಂದು ದೂರಿದ್ದರು. ಸದ್ಯ ಪೊಲೀಸರು ಕೇಸ್ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪ್ರಾಂಶುಪಾಲರಿಂದಲೇ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ
ಪೊಲೀಸ್ ಠಾಣೆ ಮೆಟ್ಟಿಲೇರಿದ ಉತ್ತರ ಪ್ರದೇಶ ವಿದ್ಯಾರ್ಥಿನಿಯರು
ಉತ್ತರ ಪ್ರದೇಶ ಸಿಎಂ ಯೋಗಿಗೆ ರಕ್ತದಲ್ಲಿ ಪತ್ರ ಬರೆದು ಕ್ರಮಕ್ಕೆ ಆಗ್ರಹ
ಗಾಜಿಯಾಬಾದ್: ತಮ್ಮ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಅಪ್ರಾಪ್ತ ಬಾಲಕಿಯರು ಪತ್ರ ಬರೆದಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ಗೆ ರಕ್ತದಲ್ಲಿ ಪತ್ರ ಬರೆದು ಕೂಡಲೇ ಅತ್ಯಾಚಾರ ಆರೋಪ ಹೊತ್ತ ಪ್ರಾಂಶುಪಾಲರನ್ನು ಬಂಧಿಸಿ ಎಂದು ಆಗ್ರಹಿಸಿದ್ದಾರೆ.
ಸಿಎಂ ಯೋಗಿಗೆ ಪತ್ರದಲ್ಲೇನಿದೆ..?
ಪ್ರಾಂಶುಪಾಲರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಾವು ನಿಮ್ಮೊಂದಿಗೆ ಈ ವಿಷಯದ ಕುರಿತು ಚರ್ಚಿಸಬೇಕಿದೆ. ನಿಮ್ಮನ್ನು ಭೇಟಿಯಾಗಲು ನಮ್ಮ ಪೋಷಕರಿಗೆ ಅವಕಾಶ ಮಾಡಿ. ನಮ್ಮನ್ನು ನಿಮ್ಮ ಮಕ್ಕಳು ಎಂದು ಭಾವಿಸಿ ನ್ಯಾಯ ದೊರಕಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಶಾಲೆಯೊಂದರ ಪ್ರಾಂಶುಪಾಲರನ್ನು ಅತ್ಯಾಚಾರ ಕೇಸ್ನಲ್ಲಿ ಅರೆಸ್ಟ್ ಮಾಡಲಾಗಿದೆ. ಪೊಲೀಸರಿಂದ ಅರೆಸ್ಟ್ ಆದ ಆರೋಪಿ ಡಾ. ರಾಜೀವ್ ಪಾಂಡೆ. ಈತ ತನ್ನ ಶಾಲೆಯಲ್ಲಿ ಓದುತ್ತಿರೋ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಏನಿದು ಘಟನೆ..?
ಅಪ್ರಾಪ್ತ ಬಾಲಕಿಯರನ್ನು ತನ್ನ ಕೊಠಡಿಗೆ ಕರೆಸಿಕೊಂಡ ಆರೋಪಿ ಪ್ರಾಂಶುಪಾಲ ಅನುಚಿತ ವರ್ತನೆ ತೋರಿದ್ದಾರೆ. 12-15 ವರ್ಷದ ವಯಸ್ಸಿನ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕೂಡಲೇ ಈತನನ್ನು ಪೋಷಕರು ಪ್ರಶ್ನಿಸಲು ಹೋದಾಗ ಎಸ್ಕೇಪ್ ಆಗಿದ್ದಾನೆ. ಬಳಿಕ ತನ್ನ ವಿರುದ್ಧ ಕೇಸ್ ಮಾಡಿದ್ದ ಸಂತ್ರಸ್ತ ಬಾಲಕಿಯರ ಪೋಷಕರ ಮೇಲೆಯೇ ಪೊಲೀಸ್ ಕೇಸ್ ಮಾಡಿದ್ದಾರೆ. ಈ ಮುನ್ನ ಪೋಷಕರು ಆರೋಪಿ ಪ್ರಾಂಶುಪಾಲರ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದರು. ಹಾಗೆಯೇ ಪ್ರಾಂಶುಪಾಲರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮಾಜಿ ಸದಸ್ಯ ಎಂದು ದೂರಿದ್ದರು. ಸದ್ಯ ಪೊಲೀಸರು ಕೇಸ್ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ