RCB ಆಟಗಾರರಿಗೆ ವಿಧಾನಸೌಧದ ಗ್ರ್ಯಾಂಡ್​ ಸ್ಟೆಪ್ಸ್ ಮೇಲೆ ಸರ್ಕಾರದಿಂದ ಸನ್ಮಾನ.. ಅನುಮತಿ ಸಿಗುತ್ತಾ?

author-image
Bheemappa
Updated On
RCB ಆಟಗಾರರಿಗೆ ವಿಧಾನಸೌಧದ ಗ್ರ್ಯಾಂಡ್​ ಸ್ಟೆಪ್ಸ್ ಮೇಲೆ ಸರ್ಕಾರದಿಂದ ಸನ್ಮಾನ.. ಅನುಮತಿ ಸಿಗುತ್ತಾ?
Advertisment
  • 6 ರನ್​ಗಳಿಂದ ಪಂಜಾಬ್ ಕಿಂಗ್ಸ್​ ಅನ್ನು ಮಣಿಸಿದ ಆರ್​ಸಿಬಿ
  • ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಪತ್ರ
  • ಕಪ್​ ಗೆದ್ದ ಹಿನ್ನೆಲೆ ಆರ್​ಸಿಬಿ ತಂಡಕ್ಕೆ ಸರ್ಕಾರದಿಂದ ಸನ್ಮಾನ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಗೂ ಪ್ರಶಸ್ತಿ ಬರವನ್ನು ನೀಗಿಸಿಕೊಂಡಿದೆ. ಮೋದಿ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರ್‌ಸಿಬಿ ಕೇವಲ 6 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕಪ್​ ಗೆದ್ದ ಹಿನ್ನೆಲೆಯಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಆರ್​ಸಿಬಿ ತಂಡದ ಆಟಗಾರರನ್ನು ಸನ್ಮಾನಿಸಲು ಅನುಮತಿ ಕೋರಿ ಪತ್ರ ಬರೆಯಲಾಗಿದೆ.

ಪಂಜಾಬ್ ಕಿಂಗ್ಸ್​ ವಿರುದ್ಧದ ಫೈನಲ್​ ಪಂದ್ಯದಲ್ಲಿ ಆರ್​ಸಿಬಿ ಅಮೋಘ ಗೆಲುವು ಪಡೆದಿದೆ. ಈ ಹಿನ್ನೆಲೆಯಲ್ಲಿ ಆರ್​ಸಿಬಿ ತಂಡದ ಆಟಗಾರರಿಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನ ಮಾಡಲು ರಾಜ್ಯ ಸರ್ಕಾರ ಯೋಜಿಸಿದೆ. ಇದಕ್ಕಾಗಿ ಸನ್ಮಾನ ಕಾರ್ಯಕ್ರಮಕ್ಕೆ ಅನುಮತಿ ಕೋರಿ ಆರ್​ಸಿಬಿ ಫ್ರಾಂಚೈಸಿಗೆ ಹಾಗೂ ಆಟಗಾರರಿಗೆ ಸರ್ಕಾರದ ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಅವರು ಪತ್ರ ಬರೆದಿದ್ದಾರೆ.

ಇದನ್ನೂ ಓದಿ: 18ಕ್ಕೆ ಟ್ರೋಫಿಗೆ ಮುತ್ತಿಟ್ಟ RCB.. ಫೈನಲ್ ಗೆಲುವಿಗೆ ಕಾರಣ ಹೇಳಿದ ಕ್ಯಾಪ್ಟನ್​ ರಜತ್ ಪಾಟಿದಾರ್

publive-image

ಆರ್​ಸಿಬಿ ಫ್ರಾಂಚೈಸಿ ಹಾಗೂ ಆಟಗಾರರಿಂದ ಪತ್ರಕ್ಕೆ ಅನುಮತಿ ಸಿಕ್ಕರೇ ಫೈನಲ್​ನಲ್ಲಿ ಗೆದ್ದ ಎಲ್ಲ ಆಟಗಾರರಿಗೂ ಸರ್ಕಾರದಿಂದ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನ ಮಾಡಲಾಗುತ್ತದೆ. ಈ ವೇಳೆ ಕಾರ್ಯಕ್ರಮದಲ್ಲಿ ರಾಜಕೀಯದ, ಕ್ರಿಕೆಟ್​ನ ಗಣ್ಯರು ಭಾಗಿಯಾಗಲಿದ್ದಾರೆ. ಆರ್​ಸಿಬಿ ಫೈನಲ್​ ಗೆಲ್ಲಲಿ ಎಂದು ಸಿಎಂ ಸಿದ್ದರಅಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲರೂ ಶುಭ ಹಾರೈಸಿದ್ದರು. ಅದರಂತೆ ಆರ್​ಸಿಬಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್​​ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಸ್ವೀಕರಿಸಿದ್ದ ಎದುರಾಳಿ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 184 ರನ್‌ಗಳನ್ನು ಮಾತ್ರ ಗಳಿಸಿ 6 ರನ್​​​ಗಳಿಂದ ಸೋಲೋಪ್ಪಿಕೊಂಡಿತು.

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment