ಜೈಲು ಕೈದಿಗಳ ಊಟಕ್ಕೆ ದಿನಕ್ಕೆ 75 ರೂ. ನೀಡುತ್ತಿರೋ ಸರ್ಕಾರ..!
ಹಾಸ್ಟೆಲ್ ವಿದ್ಯಾರ್ಥಿಗಳ ಊಟಕ್ಕೆ ಮಾತ್ರ ಕೇವಲ 56 ರೂ. ನೀಡುತ್ತಿದೆ
ಇದ್ಯಾವ ನ್ಯಾಯ; ಹಾಸ್ಟೆಲ್ ವಿದ್ಯಾರ್ಥಿಗಳ ವೇತನ ಹೆಚ್ಚಿಸಿ ಎಂದು ಪತ್ರ
ಬೆಂಗಳೂರು: ರಾಜ್ಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ಬರುವ ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ನಿರ್ವಹಣಾ ಹಣವನ್ನು 5 ಸಾವಿರಕ್ಕೆ ಹೆಚ್ಚಳ ಮಾಡಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಮನೋಜ್ ಆಜಾದ್ ಆಗ್ರಹಿಸಿದ್ದಾರೆ.
ಇನ್ನು, ಈ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ ಮಹದೇವಪ್ಪ ಹಾಗೂ ಹಿಂದುಳಿದ ವರ್ಗ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿಗೆ ಪತ್ರ ಬರೆದಿರುವ ಮನೋಜ್ ಆಜಾದ್ ಅವರು ಈ ಬೇಡಿಕೆ ಮುಂದಿಟ್ಟಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ಬರುವ ಪರಿಶಿಷ್ಟ ಜಾತಿ/ಪಂಗಡ ಹಾಗೂ ಬಿಸಿಎಂ ಹಾಸ್ಟೆಲ್ಗಳ ವಿದ್ಯಾರ್ಥಿಗಳಿಗೆ ಮಾಸಿಕ ನಿರ್ವಹಣಾ ಹಣ ಕೇವಲ 1,750 ರೂ. ಬರುತ್ತಿದೆ. ಅಂದರೆ ದಿನಕ್ಕೆ ಕೇವಲ 56 ರೂ. ನೀಡಲಾಗುತ್ತಿದೆ. ಜೈಲಲ್ಲಿ ಕೈದಿಗಳಿಗೆ ಮಾತ್ರ ದಿನಕ್ಕೆ 75 ರೂ. ಎಂದರೆ ತಿಂಗಳಿಗೆ 2300 ರೂ. ಕೊಡಲಾಗುತ್ತಿದೆ. ವಿದ್ಯಾರ್ಥಿಗಳಿಗಿಂತಲೂ ಕೈದಿಗಳಿಗೆ ಹೆಚ್ಚು ಹಣ ನೀಡುತ್ತಿದ್ದೀರಿ. ಕೂಡಲೇ ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಹಣವನ್ನು 5 ಸಾವಿರಕ್ಕೇರಿಸಿ ಎಂದು ಒತ್ತಾಯಿಸಿದ್ದಾರೆ.
ಪೌಷ್ಟಿಕ ಆಹಾರ ನೀಡುವಲ್ಲಿ ಅಧಿಕಾರಿಗಳ ವೈಫಲ್ಯ
ಸದ್ಯ ಸರ್ಕಾರ ನೀಡುತ್ತಿರುವ 1,750 ರೂ. ಹಣದಿಂದ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡಲು ಆಗುತ್ತಿಲ್ಲ. ಕೊರೋನಾ ನಂತರದಲ್ಲಿ ದಿನಸಿ ಮತ್ತು ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ತರಕಾರಿ ಬೆಲೆ ಬಗ್ಗೆ ಅಂತೂ ಕೇಳುವಹಾಗಿಲ್ಲ. ಈ ಎಲ್ಲಾ ಸಮಸ್ಯೆಗಳ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡಲು ಅಧಿಕಾರಿಗಳು ವಿಫಲರಾಗಿದ್ದಾರೆ. ಕಳಪೆ ಆಹಾರ ಪೂರೈಕೆಯಿಂದ ವಿದ್ಯಾರ್ಥಿಗಳು ಮತ್ತು ಮೇಲ್ವಿಚಾರಕರ ನಡುವೆ ಜಗಳ ಶುರುವಾಗುತ್ತಿದೆ. ಹಾಗಾಗಿ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಇತ್ಯರ್ಥ ಮಾಡಬೇಕು ಎಂದಿದ್ದಾರೆ ಮನೋಜ್.
ವಿದ್ಯಾರ್ಥಿಗಳಿಗೆ ತಿಂಗಳಿಗೆ ಕನಿಷ್ಠ 5 ಸಾವಿರ ನೀಡಬೇಕು. ದಿನಕ್ಕೆ ಕನಿಷ್ಠ 166 ರೂ. ಇದ್ದರೆ ಮಾತ್ರ ಪೌಷ್ಟಿಕ ಆಹಾರ ಪೂರೈಕೆ ಮಾಡಲು ಸಾಧ್ಯ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಮತ್ತು ಪೌಷ್ಟಿಕ ಆಹಾರ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ. ಜತೆಗೆ ವಿದ್ಯಾರ್ಥಿಗಳ ಪ್ರವೇಶಾತಿ ಹೆಚ್ಚುತ್ತಿರುವ ಕಾರಣ ಹಾಸ್ಟೆಲ್ಗಳ ಸಂಖ್ಯೆ ಕೂಡ ಹೆಚ್ಚಳ ಆಗಬೇಕು. ಖಾಸಗಿ ಕಟ್ಟಡಗಳಲ್ಲಿ ಅಲ್ಲದೆ ಹಾಸ್ಟೆಲ್ಗೆ ಸ್ವಂತ ಜಾಗ ಇರಬೇಕು ಎಂದಿದ್ದಾರೆ.
ಮೆಟ್ರಿಕ್ ನಂತರದ ಹಾಸ್ಟೆಲ್ಗಳಲ್ಲಿ ವೈಫೈ ಸೌಲಭ್ಯ ಇರಬೇಕು. ಎಲ್ಲಾ ಹಾಸ್ಟೆಲ್ಗಳಲ್ಲೂ ಕಂಪ್ಯೂಟರ್ ಲ್ಯಾಬ್, ವಾರಕ್ಕೆ 2 ಬಾರಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ, ಆರೋಗ್ಯ ಕಾಪಾಡಿಕೊಳ್ಳಲು ಜಿಮ್ನಾಸ್ಟಿಕ್ ವ್ಯವಸ್ಥೆ, ವಿದ್ಯಾರ್ಥಿಗಳ ಆತ್ಮ ರಕ್ಷಣೆಗಾಗಿ ಕರಾಟೆ, ಮಾರ್ಷಲ್ ಆರ್ಟ್ಸ್ ರೀತಿಯ ಟ್ರೈನಿಂಗ್ಗೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ ಮಾಡಿದ GT ಮಾಲ್ ಸಿಬ್ಬಂದಿ.. ಭಾರೀ ಆಕ್ರೋಶ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಜೈಲು ಕೈದಿಗಳ ಊಟಕ್ಕೆ ದಿನಕ್ಕೆ 75 ರೂ. ನೀಡುತ್ತಿರೋ ಸರ್ಕಾರ..!
ಹಾಸ್ಟೆಲ್ ವಿದ್ಯಾರ್ಥಿಗಳ ಊಟಕ್ಕೆ ಮಾತ್ರ ಕೇವಲ 56 ರೂ. ನೀಡುತ್ತಿದೆ
ಇದ್ಯಾವ ನ್ಯಾಯ; ಹಾಸ್ಟೆಲ್ ವಿದ್ಯಾರ್ಥಿಗಳ ವೇತನ ಹೆಚ್ಚಿಸಿ ಎಂದು ಪತ್ರ
ಬೆಂಗಳೂರು: ರಾಜ್ಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ಬರುವ ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ನಿರ್ವಹಣಾ ಹಣವನ್ನು 5 ಸಾವಿರಕ್ಕೆ ಹೆಚ್ಚಳ ಮಾಡಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಮನೋಜ್ ಆಜಾದ್ ಆಗ್ರಹಿಸಿದ್ದಾರೆ.
ಇನ್ನು, ಈ ಕುರಿತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ ಮಹದೇವಪ್ಪ ಹಾಗೂ ಹಿಂದುಳಿದ ವರ್ಗ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿಗೆ ಪತ್ರ ಬರೆದಿರುವ ಮನೋಜ್ ಆಜಾದ್ ಅವರು ಈ ಬೇಡಿಕೆ ಮುಂದಿಟ್ಟಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ಬರುವ ಪರಿಶಿಷ್ಟ ಜಾತಿ/ಪಂಗಡ ಹಾಗೂ ಬಿಸಿಎಂ ಹಾಸ್ಟೆಲ್ಗಳ ವಿದ್ಯಾರ್ಥಿಗಳಿಗೆ ಮಾಸಿಕ ನಿರ್ವಹಣಾ ಹಣ ಕೇವಲ 1,750 ರೂ. ಬರುತ್ತಿದೆ. ಅಂದರೆ ದಿನಕ್ಕೆ ಕೇವಲ 56 ರೂ. ನೀಡಲಾಗುತ್ತಿದೆ. ಜೈಲಲ್ಲಿ ಕೈದಿಗಳಿಗೆ ಮಾತ್ರ ದಿನಕ್ಕೆ 75 ರೂ. ಎಂದರೆ ತಿಂಗಳಿಗೆ 2300 ರೂ. ಕೊಡಲಾಗುತ್ತಿದೆ. ವಿದ್ಯಾರ್ಥಿಗಳಿಗಿಂತಲೂ ಕೈದಿಗಳಿಗೆ ಹೆಚ್ಚು ಹಣ ನೀಡುತ್ತಿದ್ದೀರಿ. ಕೂಡಲೇ ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಹಣವನ್ನು 5 ಸಾವಿರಕ್ಕೇರಿಸಿ ಎಂದು ಒತ್ತಾಯಿಸಿದ್ದಾರೆ.
ಪೌಷ್ಟಿಕ ಆಹಾರ ನೀಡುವಲ್ಲಿ ಅಧಿಕಾರಿಗಳ ವೈಫಲ್ಯ
ಸದ್ಯ ಸರ್ಕಾರ ನೀಡುತ್ತಿರುವ 1,750 ರೂ. ಹಣದಿಂದ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡಲು ಆಗುತ್ತಿಲ್ಲ. ಕೊರೋನಾ ನಂತರದಲ್ಲಿ ದಿನಸಿ ಮತ್ತು ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ತರಕಾರಿ ಬೆಲೆ ಬಗ್ಗೆ ಅಂತೂ ಕೇಳುವಹಾಗಿಲ್ಲ. ಈ ಎಲ್ಲಾ ಸಮಸ್ಯೆಗಳ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡಲು ಅಧಿಕಾರಿಗಳು ವಿಫಲರಾಗಿದ್ದಾರೆ. ಕಳಪೆ ಆಹಾರ ಪೂರೈಕೆಯಿಂದ ವಿದ್ಯಾರ್ಥಿಗಳು ಮತ್ತು ಮೇಲ್ವಿಚಾರಕರ ನಡುವೆ ಜಗಳ ಶುರುವಾಗುತ್ತಿದೆ. ಹಾಗಾಗಿ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಇತ್ಯರ್ಥ ಮಾಡಬೇಕು ಎಂದಿದ್ದಾರೆ ಮನೋಜ್.
ವಿದ್ಯಾರ್ಥಿಗಳಿಗೆ ತಿಂಗಳಿಗೆ ಕನಿಷ್ಠ 5 ಸಾವಿರ ನೀಡಬೇಕು. ದಿನಕ್ಕೆ ಕನಿಷ್ಠ 166 ರೂ. ಇದ್ದರೆ ಮಾತ್ರ ಪೌಷ್ಟಿಕ ಆಹಾರ ಪೂರೈಕೆ ಮಾಡಲು ಸಾಧ್ಯ. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯ ಮತ್ತು ಪೌಷ್ಟಿಕ ಆಹಾರ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ. ಜತೆಗೆ ವಿದ್ಯಾರ್ಥಿಗಳ ಪ್ರವೇಶಾತಿ ಹೆಚ್ಚುತ್ತಿರುವ ಕಾರಣ ಹಾಸ್ಟೆಲ್ಗಳ ಸಂಖ್ಯೆ ಕೂಡ ಹೆಚ್ಚಳ ಆಗಬೇಕು. ಖಾಸಗಿ ಕಟ್ಟಡಗಳಲ್ಲಿ ಅಲ್ಲದೆ ಹಾಸ್ಟೆಲ್ಗೆ ಸ್ವಂತ ಜಾಗ ಇರಬೇಕು ಎಂದಿದ್ದಾರೆ.
ಮೆಟ್ರಿಕ್ ನಂತರದ ಹಾಸ್ಟೆಲ್ಗಳಲ್ಲಿ ವೈಫೈ ಸೌಲಭ್ಯ ಇರಬೇಕು. ಎಲ್ಲಾ ಹಾಸ್ಟೆಲ್ಗಳಲ್ಲೂ ಕಂಪ್ಯೂಟರ್ ಲ್ಯಾಬ್, ವಾರಕ್ಕೆ 2 ಬಾರಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ, ಆರೋಗ್ಯ ಕಾಪಾಡಿಕೊಳ್ಳಲು ಜಿಮ್ನಾಸ್ಟಿಕ್ ವ್ಯವಸ್ಥೆ, ವಿದ್ಯಾರ್ಥಿಗಳ ಆತ್ಮ ರಕ್ಷಣೆಗಾಗಿ ಕರಾಟೆ, ಮಾರ್ಷಲ್ ಆರ್ಟ್ಸ್ ರೀತಿಯ ಟ್ರೈನಿಂಗ್ಗೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ ಮಾಡಿದ GT ಮಾಲ್ ಸಿಬ್ಬಂದಿ.. ಭಾರೀ ಆಕ್ರೋಶ!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ