ಲೋಕ ಸಮರಕ್ಕೆ ಸಿದ್ದವಾಗಿರೋ ‘ಕೈ’ಗೆ ಟಿಕೆಟ್ ಹಂಚಿಕೆ ಕಗ್ಗಂಟು
ಡಿಸಿಎಂ ಡಿ.ಕೆ ಶಿವಕುಮಾರ್ನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ
‘ಮುನಿಯಪ್ಪ ಅಳಿಯನಿಗೆ ಟಿಕೆಟ್ ನೀಡಿದರೆ ಕೆಲಸವೇ ಮಾಡಲ್ಲ’
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯದ ಆ 4 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿಲ್ಲ. ಅದರಲ್ಲೂ ಕೋಲಾರ ಟಿಕೆಟ್ ಆಯ್ಕೆ ಕಾಂಗ್ರೆಸ್ ಹೈಕಮಾಂಡ್ಗೆ ಕಗ್ಗಂಟಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಾಮರಾಜನಗರ ಪೆಂಡಿಂಗ್
ಲೋಕಸಭೆ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆಯಾಗಿದ್ದು, ಇನ್ನು ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಬಾಕಿ ಇದೆ. ಕಳೆದ ರಾತ್ರಿ ಬಿಡುಗಡೆಯಾದ ಕಾಂಗ್ರೆಸ್ನ 4ನೇ ಪಟ್ಟಿಯಲ್ಲೂ, ರಾಜ್ಯದ ಆ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಪ್ರಕಟಿಸಿಲಿಲ್ಲ.. ಅದರಲ್ಲೂ ಕೋಲಾರ ಟಿಕೆಟ್ ಆಯ್ಕೆ ಕಾಂಗ್ರೆಸ್ ಹೈಕಮಾಂಡ್ಗೆ ಕಗ್ಗಂಟಾಗಿದೆ.
ಬಗೆಹರಿಯದ ಕೋಲಾರ ಲೋಕಸಭಾ ಟಿಕೆಟ್ ಗೊಂದಲ
ರಾಜ್ಯ ಕಾಂಗ್ರೆಸ್ನಲ್ಲಿ ಕೋಲಾರ ಟಿಕೆಟ್ ಹಂಚಿಕೆ ಗೊಂದಲ ಮುಂದುರಿದಿದೆ. ಕೋಲಾರಕ್ಕಾಗಿ ಸಚಿವ ಮುನಿಯಪ್ಪ-ರಮೇಶ್ ಬಣ ಬಿಗಿಪಟ್ಟು ಹಿಡಿದೆ. ಸಿಎಂ, ಡಿಸಿಎಂ ಸಮ್ಮುಖದಲ್ಲಿ ನಡೆದ ಸಂಧಾನ ಸಭೆಯಲ್ಲೂ ಒಮ್ಮತ ನಿರ್ಧಾರಕ್ಕೆ ಬರಲಾಗಿಲ್ಲ ಹೀಗಾಗಿ, ಅಂತಿಮವಾಗಿ ಕೋಲಾರ ಕಗ್ಗಂಟು ಹೈಕಮಾಂಡ್ಗೆ ಅಂಗಳಕ್ಕೆ ಹೋಗಿದೆ.
ಕೋಲಾರ ಕಗ್ಗಂಟು
ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಎದುರು ನಿಲ್ಲೋದು ಯಾರು..? ಕುಮಾರಸ್ವಾಮಿ ಸ್ಪರ್ಧೆ ಪಕ್ಕಾನಾ..?
ಇದನ್ನೂ ಓದಿ: ಅಪ್ಪು ನೆಚ್ಚಿನ ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್.. ‘ಯುವ’ ರಾಜ್ಕುಮಾರ್ ಭಾವುಕ, ಫ್ಯಾನ್ಸ್ಗೆ ಹೇಳಿದ್ದೇನು?
ಬಿಜೆಪಿ-ಜೆಡಿಎಸ್ ಮೈತ್ರಿಗೂ ಕೋಲಾರ ಟಿಕೆಟ್ ಕಗ್ಗಂಟು
ಕಾಂಗ್ರೆಸ್ನಲ್ಲಿ ಮಾತ್ರವಲ್ಲ.. ಬಿಜೆಪಿ-ಜೆಡಿಎಸ್ ಮೈತ್ರಿಗೂ ಕೋಲಾರ ಟಿಕೆಟ್ ಕಗ್ಗಂಟಾಗಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ಗೆ ಮಂಡ್ಯ, ಹಾಸನದ ಜೊತೆಗೆ ಕೋಲಾರವನ್ನು ಕೊಡಲು ನಿರ್ಧರಿಸಿದೆ. ಆದ್ರೆ, ಹಾಲಿ ಸಂಸದ ಮುನಿಸ್ವಾಮಿ ಕೋಲಾರದ ಟಿಕೆಟ್ ಬಿಜೆಪಿಗೆ ಪಡೆದುಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಮೊನ್ನೆಯಷ್ಟೇ ಜೆ.ಪಿ,ನಡ್ಡಾರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ರು. ನಿನ್ನೆ ದೆಹಲಿಯಲ್ಲಿ ದೇವೇಗೌಡರನ್ನು ಮುನಿಸ್ವಾಮಿ ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಗೂ ಕೋಲಾರ ಟಿಕೆಟ್ ಹಂಚಿಕೆ ಬಗೆಹರಿಯದ ಸಮಸ್ಯೆಯಾಗಿದೆ. ಎರಡೂ ಪಕ್ಷಗಳು ಕೋಲಾರದ ಕಗ್ಗಂಟನ್ನು ಯಾವ ರೀತಿ ಬಗೆಹರಿಸಿಕೊಳ್ತಾವೆ ಅನ್ನೊದು ಕುತೂಹಲ ಮೂಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಲೋಕ ಸಮರಕ್ಕೆ ಸಿದ್ದವಾಗಿರೋ ‘ಕೈ’ಗೆ ಟಿಕೆಟ್ ಹಂಚಿಕೆ ಕಗ್ಗಂಟು
ಡಿಸಿಎಂ ಡಿ.ಕೆ ಶಿವಕುಮಾರ್ನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ
‘ಮುನಿಯಪ್ಪ ಅಳಿಯನಿಗೆ ಟಿಕೆಟ್ ನೀಡಿದರೆ ಕೆಲಸವೇ ಮಾಡಲ್ಲ’
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯದ ಆ 4 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿಲ್ಲ. ಅದರಲ್ಲೂ ಕೋಲಾರ ಟಿಕೆಟ್ ಆಯ್ಕೆ ಕಾಂಗ್ರೆಸ್ ಹೈಕಮಾಂಡ್ಗೆ ಕಗ್ಗಂಟಾಗಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಾಮರಾಜನಗರ ಪೆಂಡಿಂಗ್
ಲೋಕಸಭೆ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆಯಾಗಿದ್ದು, ಇನ್ನು ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದು ಬಾಕಿ ಇದೆ. ಕಳೆದ ರಾತ್ರಿ ಬಿಡುಗಡೆಯಾದ ಕಾಂಗ್ರೆಸ್ನ 4ನೇ ಪಟ್ಟಿಯಲ್ಲೂ, ರಾಜ್ಯದ ಆ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಪ್ರಕಟಿಸಿಲಿಲ್ಲ.. ಅದರಲ್ಲೂ ಕೋಲಾರ ಟಿಕೆಟ್ ಆಯ್ಕೆ ಕಾಂಗ್ರೆಸ್ ಹೈಕಮಾಂಡ್ಗೆ ಕಗ್ಗಂಟಾಗಿದೆ.
ಬಗೆಹರಿಯದ ಕೋಲಾರ ಲೋಕಸಭಾ ಟಿಕೆಟ್ ಗೊಂದಲ
ರಾಜ್ಯ ಕಾಂಗ್ರೆಸ್ನಲ್ಲಿ ಕೋಲಾರ ಟಿಕೆಟ್ ಹಂಚಿಕೆ ಗೊಂದಲ ಮುಂದುರಿದಿದೆ. ಕೋಲಾರಕ್ಕಾಗಿ ಸಚಿವ ಮುನಿಯಪ್ಪ-ರಮೇಶ್ ಬಣ ಬಿಗಿಪಟ್ಟು ಹಿಡಿದೆ. ಸಿಎಂ, ಡಿಸಿಎಂ ಸಮ್ಮುಖದಲ್ಲಿ ನಡೆದ ಸಂಧಾನ ಸಭೆಯಲ್ಲೂ ಒಮ್ಮತ ನಿರ್ಧಾರಕ್ಕೆ ಬರಲಾಗಿಲ್ಲ ಹೀಗಾಗಿ, ಅಂತಿಮವಾಗಿ ಕೋಲಾರ ಕಗ್ಗಂಟು ಹೈಕಮಾಂಡ್ಗೆ ಅಂಗಳಕ್ಕೆ ಹೋಗಿದೆ.
ಕೋಲಾರ ಕಗ್ಗಂಟು
ಇದನ್ನೂ ಓದಿ: ಮಂಡ್ಯದಲ್ಲಿ ಸುಮಲತಾ ಎದುರು ನಿಲ್ಲೋದು ಯಾರು..? ಕುಮಾರಸ್ವಾಮಿ ಸ್ಪರ್ಧೆ ಪಕ್ಕಾನಾ..?
ಇದನ್ನೂ ಓದಿ: ಅಪ್ಪು ನೆಚ್ಚಿನ ಹೊಸಪೇಟೆಯಲ್ಲಿ ಪ್ರೀ ರಿಲೀಸ್ ಇವೆಂಟ್.. ‘ಯುವ’ ರಾಜ್ಕುಮಾರ್ ಭಾವುಕ, ಫ್ಯಾನ್ಸ್ಗೆ ಹೇಳಿದ್ದೇನು?
ಬಿಜೆಪಿ-ಜೆಡಿಎಸ್ ಮೈತ್ರಿಗೂ ಕೋಲಾರ ಟಿಕೆಟ್ ಕಗ್ಗಂಟು
ಕಾಂಗ್ರೆಸ್ನಲ್ಲಿ ಮಾತ್ರವಲ್ಲ.. ಬಿಜೆಪಿ-ಜೆಡಿಎಸ್ ಮೈತ್ರಿಗೂ ಕೋಲಾರ ಟಿಕೆಟ್ ಕಗ್ಗಂಟಾಗಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ಗೆ ಮಂಡ್ಯ, ಹಾಸನದ ಜೊತೆಗೆ ಕೋಲಾರವನ್ನು ಕೊಡಲು ನಿರ್ಧರಿಸಿದೆ. ಆದ್ರೆ, ಹಾಲಿ ಸಂಸದ ಮುನಿಸ್ವಾಮಿ ಕೋಲಾರದ ಟಿಕೆಟ್ ಬಿಜೆಪಿಗೆ ಪಡೆದುಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಮೊನ್ನೆಯಷ್ಟೇ ಜೆ.ಪಿ,ನಡ್ಡಾರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ರು. ನಿನ್ನೆ ದೆಹಲಿಯಲ್ಲಿ ದೇವೇಗೌಡರನ್ನು ಮುನಿಸ್ವಾಮಿ ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಗೂ ಕೋಲಾರ ಟಿಕೆಟ್ ಹಂಚಿಕೆ ಬಗೆಹರಿಯದ ಸಮಸ್ಯೆಯಾಗಿದೆ. ಎರಡೂ ಪಕ್ಷಗಳು ಕೋಲಾರದ ಕಗ್ಗಂಟನ್ನು ಯಾವ ರೀತಿ ಬಗೆಹರಿಸಿಕೊಳ್ತಾವೆ ಅನ್ನೊದು ಕುತೂಹಲ ಮೂಡಿಸಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ