newsfirstkannada.com

ಕೊಡಗು ಅಪರ ಜಿಲ್ಲಾಧಿಕಾರಿ ನಿವಾಸದಲ್ಲಿ ಕಂತೆ, ಕಂತೆ ನೋಟುಗಳ ಲಕ್ಷ ಲಕ್ಷ ಹಣ ಪತ್ತೆ..!

Share :

Published August 17, 2023 at 9:25am

Update August 17, 2023 at 10:46am

    ಅಧಿಕಾರಿ ನಂಜುಂಡೇಗೌಡ ನಿವಾಸದಲ್ಲಿ ಸಿಕ್ಕ ಹಣವೆಷ್ಟು..?

    ಲಕ್ಷ ಲಕ್ಷ ಹಣ ಮಾತ್ರವಲ್ಲ ಚಿನ್ನಾಭರಣವೂ ಸಿಕ್ಕಿದೆ

    ಬೆಳ್ಳಂಬೆಳಗ್ಗೆ ಕಳಂಕಿತ ಅಧಿಕಾರಿಗಳ ಚಳಿ ಬಿಡಿಸಿರುವ ‘ಲೋಕಾ’

ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ದಾಳಿ ವೇಳೆ ನಂಜುಂಡೇಗೌಡ ಮನೆಯಲ್ಲಿ 11.5 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

ಮಾತ್ರವಲ್ಲ ಮನೆಯಲ್ಲಿ ಸಾಕಷ್ಟು ಚಿನ್ನಾಭರಣವೂ ಪತ್ತೆಯಾಗಿದೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ಚಿನ್ನದ ತೂಕ ಪರಿಶೀಲನೆಗೆ ಅಕ್ಕಸಾಲಿಗರನ್ನು ಕರೆಸುತ್ತಿದ್ದಾರೆ. ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ದಾಳಿ ನಡೆಸಿದ್ದಾರೆ.
ಇನ್ನು, ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜನೀಯರ್ ಕೆ.ಮಹೇಶ್ ನಿವಾಸದಲ್ಲಿ 15 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಕೆ.ಮಹೇಶ್ ಹಾಗೂ ಅವರ ಪತ್ನಿ ಕೆ. ಭಾರತಿ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯಲ್ಲಿ 15 ಲಕ್ಷ ರೂಪಾಯಿ ನಗದು ಹಾಗೂ ಅರ್ಧ ಕೆಜಿ ಚಿನ್ನಾಭರಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆಯಾಗಿ ಕೆ.‌ಭಾರತಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳು ತಮ್ಮ ದಾಳಿಯನ್ನು ಮುಂದುವರಿಸಿದ್ದು, ವಿವಿಧ ದಾಖಲೆಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ. ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾವ್ ನೇತೃತ್ವದಲ್ಲಿ ದಾಳಿ ನಡೆದಿದೆ. ಕೊಡಗು, ಧಾರವಾಡ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ರಾಜ್ಯದ 18 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಶೋಧಕಾರ್ಯ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೊಡಗು ಅಪರ ಜಿಲ್ಲಾಧಿಕಾರಿ ನಿವಾಸದಲ್ಲಿ ಕಂತೆ, ಕಂತೆ ನೋಟುಗಳ ಲಕ್ಷ ಲಕ್ಷ ಹಣ ಪತ್ತೆ..!

https://newsfirstlive.com/wp-content/uploads/2023/08/MDK_LOKAYUKTA.jpg

    ಅಧಿಕಾರಿ ನಂಜುಂಡೇಗೌಡ ನಿವಾಸದಲ್ಲಿ ಸಿಕ್ಕ ಹಣವೆಷ್ಟು..?

    ಲಕ್ಷ ಲಕ್ಷ ಹಣ ಮಾತ್ರವಲ್ಲ ಚಿನ್ನಾಭರಣವೂ ಸಿಕ್ಕಿದೆ

    ಬೆಳ್ಳಂಬೆಳಗ್ಗೆ ಕಳಂಕಿತ ಅಧಿಕಾರಿಗಳ ಚಳಿ ಬಿಡಿಸಿರುವ ‘ಲೋಕಾ’

ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ದಾಳಿ ವೇಳೆ ನಂಜುಂಡೇಗೌಡ ಮನೆಯಲ್ಲಿ 11.5 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

ಮಾತ್ರವಲ್ಲ ಮನೆಯಲ್ಲಿ ಸಾಕಷ್ಟು ಚಿನ್ನಾಭರಣವೂ ಪತ್ತೆಯಾಗಿದೆ. ಸದ್ಯ ಲೋಕಾಯುಕ್ತ ಅಧಿಕಾರಿಗಳು ಚಿನ್ನದ ತೂಕ ಪರಿಶೀಲನೆಗೆ ಅಕ್ಕಸಾಲಿಗರನ್ನು ಕರೆಸುತ್ತಿದ್ದಾರೆ. ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯಾದ್ಯಂತ ದಾಳಿ ನಡೆಸಿದ್ದಾರೆ.
ಇನ್ನು, ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜನೀಯರ್ ಕೆ.ಮಹೇಶ್ ನಿವಾಸದಲ್ಲಿ 15 ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಕೆ.ಮಹೇಶ್ ಹಾಗೂ ಅವರ ಪತ್ನಿ ಕೆ. ಭಾರತಿ ನಿವಾಸ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯಲ್ಲಿ 15 ಲಕ್ಷ ರೂಪಾಯಿ ನಗದು ಹಾಗೂ ಅರ್ಧ ಕೆಜಿ ಚಿನ್ನಾಭರಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆಯಾಗಿ ಕೆ.‌ಭಾರತಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳು ತಮ್ಮ ದಾಳಿಯನ್ನು ಮುಂದುವರಿಸಿದ್ದು, ವಿವಿಧ ದಾಖಲೆಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ. ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾವ್ ನೇತೃತ್ವದಲ್ಲಿ ದಾಳಿ ನಡೆದಿದೆ. ಕೊಡಗು, ಧಾರವಾಡ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ರಾಜ್ಯದ 18 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಶೋಧಕಾರ್ಯ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More