ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ದುರ್ಘಟನೆ
ದಟ್ಟ ಮಂಜು, ಮಳೆಯಿಂದ ದಾರಿ ಕಾಣದೇ ಲಾರಿ ಪಲ್ಟಿ
ಚಿತ್ರದುರ್ಗಕ್ಕೆ ನೀರಿನ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿ
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ 100 ಅಡಿ ಪ್ರಪಾತಕ್ಕೆ ಲಾರಿಯೊಂದು ಬಿದ್ದಿದೆ. ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೇ ಲಾರಿ ಪಲ್ಟಿಯಾಗಿದೆ. ಪ್ರಪಾತಕ್ಕೆ ಬೀಳುತ್ತಿದ್ದಂತೆಯೇ ಲಾರಿ ಮರಕ್ಕೆ ಬಡಿದು ಸಿಕ್ಕಿಹಾಕಿಕೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಅಲ್ಲಿಗೆ ಆಗಮಿಸಿ ಚಾಲಕ ಮತ್ತು ಕ್ಲೀನರ್ನನ್ನು ರಕ್ಷಿಸಿದ್ದಾರೆ.
ಈ ಮೂಲಕ ಪ್ರಾಣಸಂಕಟಕ್ಕೆ ಸಿಲುಕಿದ್ದ ಇಬ್ಬರು ಜೀವವನ್ನು ಮರ ಉಳಿಸಿದೆ. ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿಗಳನ್ನು ಲಾರಿ ಸಾಗಿಸುತ್ತಿತ್ತು. ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೂಡಿಗೆರೆ ತಾಲೂಕಿನ ಸೋಮನಕಾಡು ಬಳಿ ದುರ್ಘಟನೆ
ದಟ್ಟ ಮಂಜು, ಮಳೆಯಿಂದ ದಾರಿ ಕಾಣದೇ ಲಾರಿ ಪಲ್ಟಿ
ಚಿತ್ರದುರ್ಗಕ್ಕೆ ನೀರಿನ ಬಾಟಲಿಗಳನ್ನು ಸಾಗಿಸುತ್ತಿದ್ದ ಲಾರಿ
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ 100 ಅಡಿ ಪ್ರಪಾತಕ್ಕೆ ಲಾರಿಯೊಂದು ಬಿದ್ದಿದೆ. ದುರ್ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೇ ಲಾರಿ ಪಲ್ಟಿಯಾಗಿದೆ. ಪ್ರಪಾತಕ್ಕೆ ಬೀಳುತ್ತಿದ್ದಂತೆಯೇ ಲಾರಿ ಮರಕ್ಕೆ ಬಡಿದು ಸಿಕ್ಕಿಹಾಕಿಕೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಅಲ್ಲಿಗೆ ಆಗಮಿಸಿ ಚಾಲಕ ಮತ್ತು ಕ್ಲೀನರ್ನನ್ನು ರಕ್ಷಿಸಿದ್ದಾರೆ.
ಈ ಮೂಲಕ ಪ್ರಾಣಸಂಕಟಕ್ಕೆ ಸಿಲುಕಿದ್ದ ಇಬ್ಬರು ಜೀವವನ್ನು ಮರ ಉಳಿಸಿದೆ. ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿಗಳನ್ನು ಲಾರಿ ಸಾಗಿಸುತ್ತಿತ್ತು. ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ