/newsfirstlive-kannada/media/post_attachments/wp-content/uploads/2025/03/chikkatirupati.jpg)
ಕೋಲಾರ: ಮುಡಿ ಕೊಡುತ್ತೇನೆ, ಪ್ರದೀಪ ನಾನು ಬೇಗ ಒಂದಾಗಬೇಕು ಎಂದು ಯುವತಿಯೊಬ್ಬಳು ಚಿಕ್ಕ ತಿರುಪತಿ ಹುಂಡಿಯಲ್ಲಿ ಲವ್ ಲೇಟರ್ ಬರೆದು ಹಾಕಿದ್ದಾಳೆ.
ಇದನ್ನೂ ಓದಿ: ಐಶ್ವರ್ಯಾ ಸಿಂಧೋಗಿ ಮನೆಗೆ ಮೋಕ್ಷಿತಾ ಪೈ ಸರ್ಪ್ರೈಸ್ ಎಂಟ್ರಿ; ಅಸಲಿಗೆ ಬಂದಿದ್ದು ಯಾರಿಗೋಸ್ಕರ ಗೊತ್ತಾ?
ಸಾಮಾನ್ಯವಾಗಿ ದೇವರ ಹುಂಡಿಯಲ್ಲಿ ಆಗಾಗ ಈ ರೀತಿಯ ವಿಚಿತ್ರ ಕೋರಿಕೆಗಳನ್ನು ಬರೆದಿರುವ ಪತ್ರಗಳು ಸಿಗುತ್ತಲೇ ಇರುತ್ತವೆ. ಇದೀಗ ಮತ್ತೊಂದು ಅಂತಹ ಘಟನೆ ಕೋಲಾರದಲ್ಲಿ ನಡೆದಿದೆ.
ಆ ಪತ್ರದಲ್ಲಿ ಏನಿದೆ?
ವೆಂಕಟರಮಣ ಸ್ವಾಮಿ... ತಿರುಪತಿ ತಿಮ್ಮಪ್ಪ, ನಾ ನಿನ್ನ ಸನ್ನಿಧಿಗೆ ಬಂದು ತಲೆ ಮುಡಿ ಕೊಡುತ್ತೇನೆ. ದಯವಿಟ್ಟು ಪ್ರದೀಪ ನಾನು ಬೇಗ ಒಂದಾಗಬೇಕು. ಅವನು ನನ್ನನ್ನು ತುಂಬಾ ಇಷ್ಟ ಪಡಬೇಕು. ನನ್ನ ಬಿಟ್ಟು ಇರಲು ಆಗದಂತೆ ಮಾಡು. ಆಫೀಸ್ನಲ್ಲಿ ಎಲ್ಲದಕ್ಕಿಂತ, ಹೊರಗಡೆ ಎಲ್ಲರಿಗಿಂತ ನನ್ನ ಜಾಸ್ತಿ ಪ್ರೀತಿಸಬೇಕು. ಆದಷ್ಟು ಬೇಗ ನಾವಿಬ್ಬರೂ ಒಂದಾಗಬೇಕು. ಆಗ ಇಡೀ ಆಫೀಸ್ ನನ್ನ ಜೊತೆ ಆ ಬಗ್ಗೆ ಮಾತನಾಡಬೇಕು. ಆದಷ್ಟು ಬೇಗ ನನಗೆ ಏನು ಅವನ ಮೇಲೆ ಏನು ಫೀಲಿಂಗ್ ಇದೆಯೋ, ಅವನಿಗೂ ಅದಕ್ಕಿಂತ 7% ಜಾಸ್ತಿ ಫೀಲಿಂಗ್ ಇರಬೇಕು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ