/newsfirstlive-kannada/media/post_attachments/wp-content/uploads/2024/06/Pream.jpg)
​ಮೈಸೂರು: ನಟ ದರ್ಶನ್​ ಅರೆಸ್ಟ್​ ವಿಚಾರವಾಗಿ ಲವ್ಲಿಸ್ಟಾರ್ ಪ್ರೇಮ್ ಪ್ರತಿಕ್ರಿಯಿಸಲು ಹಿಂದೇಟು ಹಾಕಿದ್ದಾರೆ. ಆಪ್ತ ಗೆಳೆಯನ ಬಗ್ಗೆ ಮಾತನಾಡಲು ಅಂತರ ಕಾಯ್ದುಕೊಂಡಿದ್ದಾರೆ. ಸದ್ಯ ನಟ ದರ್ಶನ್​​ನಿಂದ ಪ್ರೇಮ್​ ದೂರವಾಗಿದ್ದಾರಾ ಎಂಬ ಪ್ರಶ್ನೆಯ ಜೊತೆಗೆ ಅನುಮಾನವು ಅಭಿಮಾನಿಗಳನ್ನು ಕಾಡಲಾರಂಭಿಸಿದೆ.
ಇದನ್ನೂ ಓದಿ: ದರ್ಶನ್ ಪತ್ನಿ ವಿಜಯಲಕ್ಷ್ಮೀ ಠಾಣೆಗೆ ಓಡೋಡಿ ಬಂದ ಕಾರಣ ರಿವೀಲ್..!
ಮೈಸೂರಿನ ಬನ್ನೂರಿನಲ್ಲಿ ಲವ್ಲಿಸ್ಟಾರ್​​ ಪ್ರೇಮ್​ ಕಾಣಿಸಿಕೊಂಡಿದ್ದಾರೆ. ಆಪ್ತ ಸ್ನೇಹಿತ ಬನ್ನೂರಿನ ಮಹೇಂದ್ರಸಿಂಗ್ ಕಾಳಪ್ಪ ಅವರ ತಂದೆಯವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪ್ರೇಮ್ ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮದವರನ್ನ ಕಂಡು ವೇದಿಕೆ ಮೇಲೆ ಪ್ರತಿಕ್ರಿಯಿಸಲ್ಲ ಎಂದು ಮನವಿ ಮಾಡಿದ್ದಾರೆ.
ದರ್ಶನ್ ಹೆಸರು ಹೇಳುತ್ತಿದ್ದಂತೆ ಪ್ಲೀಸ್ ಎಂದು ಮನವಿ ಮಾಡಿಕೊಂಡಿದ್ದಾರೆ. ನಾನು ಬಂದಿರುವ ಕಾರ್ಯಕ್ರಮ ಬೇರೆ. ದಯಮಾಡಿ ಆ ಕಾರ್ಯಕ್ರಮದ ಬಗ್ಗೆ ಮಾತಾಡಿ. ದರ್ಶನ್ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us