ಲವ್ವರ್ ಎದುರೇ ಅತ್ಯಾಚಾರ ಮಾಡಿದ ಪ್ರಿಯಕರ
ಅತ್ಯಾಚಾರವೆಸಗಿ ಮಹಿಳೆಯನ್ನು ಕೊಂದ ಲವ್ವರ್
ನಾಲ್ಕು ದಿನದ ಹಿಂದೆ ಕಾಣೆಯಾದವಳು ಕೊಲೆಯಾಗಿ ಪತ್ತೆ
ಚಿಕ್ಕಬಳ್ಳಾಪುರ: ಪ್ರಿಯತಮನೋರ್ವ ತನ್ನ ಪ್ರಿಯತಮೆ ಎದುರೇ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಘಟನೆ ಗೌರಿಬಿದನೂರು ತಾಲ್ಲೂಕಿನ ಕೊನಗಾನಹಳ್ಳಿ ಗ್ರಾಮ ಹೊರವಲಯದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಅಲುಮೇಲಮ್ಮ (40 ವರ್ಷ) ಮಹಿಳೆಯನ್ನು ಸಂಜೀವಪ್ಪ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ. ಅತ್ಯಾಚಾರಿಗೆ ಆತನ ಪ್ರಿಯತಮೆ ರಾಮಾಂಜಿನಮ್ಮ ಕೂಡ ಸಾಥ್ ನೀಡಿದ್ದು, ಇಬ್ಬರು ಕೂಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸಂಜೀವಪ್ಪ ರಾಮಾಂಜಿನಮ್ಮ ನಡುವೆ ಅನೈತಿಕ ಸಂಭಂದವಿದ್ದ ಹಿನ್ನಲೆ ಅಲುಮೇಲಮ್ಮ ಇಬ್ಬರ ಅನೈತಿಕ ಸಂಬಂದಕ್ಕೆ ಅಡ್ಡಿಯಾಗಿದ್ದಳು ಎನ್ನಲಾಗುತ್ತಿದೆ. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.
ಅಲುಮೇಲಮ್ಮ ನಾಲ್ಕು ದಿನಗ ಹಿಂದೆ ಗ್ರಾಮದಿಂದ ನಾಪತ್ತೆಯಾಗಿದ್ದಳು. ಅತ್ತ ಕೊಲೆ ಮಾಡಿದ ಬಳಿಕ ರಾಮಾಂಜಿನಮ್ಮ ವರ್ತನೆಯಿಂದ ಗ್ರಾಮಸ್ಥರು ಅನುಮಾನಗೊಂಡಿದ್ದರು. ಕೊನೆಗೆ ಆಕೆಯನ್ನು ವಿಚಾರಿಸಿದ ವೇಳೆ ಅಸಲಿ ಸತ್ಯ ಬಾಯಿಬಿಟ್ಟಿದ್ದಾಳೆ.
ಇದನ್ನೂ ಓದಿ: ಡ್ರಾ..ಡ್ರಾ.. ಲಕ್ಕಿ ಡ್ರಾ.. ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಮತದಾರನಿಗೆ ಸಿಕ್ತು ವಜ್ರದ ಉಂಗುರ!
ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೂರು ದಾಖಲಿಸಿಕೊಂಡ ಕೂಡಲೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಲವ್ವರ್ ಎದುರೇ ಅತ್ಯಾಚಾರ ಮಾಡಿದ ಪ್ರಿಯಕರ
ಅತ್ಯಾಚಾರವೆಸಗಿ ಮಹಿಳೆಯನ್ನು ಕೊಂದ ಲವ್ವರ್
ನಾಲ್ಕು ದಿನದ ಹಿಂದೆ ಕಾಣೆಯಾದವಳು ಕೊಲೆಯಾಗಿ ಪತ್ತೆ
ಚಿಕ್ಕಬಳ್ಳಾಪುರ: ಪ್ರಿಯತಮನೋರ್ವ ತನ್ನ ಪ್ರಿಯತಮೆ ಎದುರೇ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಘಟನೆ ಗೌರಿಬಿದನೂರು ತಾಲ್ಲೂಕಿನ ಕೊನಗಾನಹಳ್ಳಿ ಗ್ರಾಮ ಹೊರವಲಯದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಅಲುಮೇಲಮ್ಮ (40 ವರ್ಷ) ಮಹಿಳೆಯನ್ನು ಸಂಜೀವಪ್ಪ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ. ಅತ್ಯಾಚಾರಿಗೆ ಆತನ ಪ್ರಿಯತಮೆ ರಾಮಾಂಜಿನಮ್ಮ ಕೂಡ ಸಾಥ್ ನೀಡಿದ್ದು, ಇಬ್ಬರು ಕೂಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸಂಜೀವಪ್ಪ ರಾಮಾಂಜಿನಮ್ಮ ನಡುವೆ ಅನೈತಿಕ ಸಂಭಂದವಿದ್ದ ಹಿನ್ನಲೆ ಅಲುಮೇಲಮ್ಮ ಇಬ್ಬರ ಅನೈತಿಕ ಸಂಬಂದಕ್ಕೆ ಅಡ್ಡಿಯಾಗಿದ್ದಳು ಎನ್ನಲಾಗುತ್ತಿದೆ. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ.
ಅಲುಮೇಲಮ್ಮ ನಾಲ್ಕು ದಿನಗ ಹಿಂದೆ ಗ್ರಾಮದಿಂದ ನಾಪತ್ತೆಯಾಗಿದ್ದಳು. ಅತ್ತ ಕೊಲೆ ಮಾಡಿದ ಬಳಿಕ ರಾಮಾಂಜಿನಮ್ಮ ವರ್ತನೆಯಿಂದ ಗ್ರಾಮಸ್ಥರು ಅನುಮಾನಗೊಂಡಿದ್ದರು. ಕೊನೆಗೆ ಆಕೆಯನ್ನು ವಿಚಾರಿಸಿದ ವೇಳೆ ಅಸಲಿ ಸತ್ಯ ಬಾಯಿಬಿಟ್ಟಿದ್ದಾಳೆ.
ಇದನ್ನೂ ಓದಿ: ಡ್ರಾ..ಡ್ರಾ.. ಲಕ್ಕಿ ಡ್ರಾ.. ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಮತದಾರನಿಗೆ ಸಿಕ್ತು ವಜ್ರದ ಉಂಗುರ!
ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೂರು ದಾಖಲಿಸಿಕೊಂಡ ಕೂಡಲೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ