50 ವಯಸ್ಸಿನ ವ್ಯಕ್ತಿ ಜೊತೆ ಕಾಲೇಜು ವಿದ್ಯಾರ್ಥಿನಿ ನಾಪತ್ತೆ ಕೇಸ್​.. ಇಬ್ಬರ ಮೃತದೇಹಗಳು ಪತ್ತೆ

author-image
Bheemappa
Updated On
ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಸಾವಿಗೆ ಹೊಸ ಟ್ವಿಸ್ಟ್‌; ಆತ್ಮಹತ್ಯೆಯೋ? ಕೊಲೆಯೋ?
Advertisment
  • ಕಳೆದ 4 ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳು
  • ಮದುವೆಯಾದ ವ್ಯಕ್ತಿ ಜೊತೆಗೆ 19ರ ಯುವತಿಯ ಪ್ರೀತಿಯ ಕಹಾನಿ
  • ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರು ಆತ್ಮಹತ್ಯೆ

ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹಗಳನ್ನು ಅಗ್ನಿ ಶಾಮಕ ಸಿಬ್ಬಂದಿ  ಕೆರೆಯಿಂದ ಹೊರ ತೆಗೆದಿದ್ದಾರೆ. ನಿನ್ನೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆ ನೀರಿಗೆ ಇಬ್ಬರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ದರ್ಶನ್​ ಗ್ಯಾಂಗ್​ನ​ ಆರೋಪಿಗಳ ಹೆಸರಲ್ಲಿ ಹೊಸ ಸಿಮ್ ಖರೀದಿಸಿದ ಪೊಲೀಸರು.. ತನಿಖೆ ಏನೇನು ಆಗ್ತಿದೆ?

ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯದ ವಿದ್ಯಾರ್ಥಿನಿ ಅನನ್ಯ (19) ಹಾಗೂ ಬೈರಗೊಂಡ್ಲು ಗ್ರಾಮದ ವಿವಾಹಿತ ಪುರುಷ ರಂಗಶಾಮಣ್ಣ (50) ಮೃತಪಟ್ಟವರು. ಈ ಇಬ್ಬರು ಕೆಲವು ದಿನಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ತಮ್ಮ ಪ್ರೀತಿಯ ಬಗ್ಗೆ ತಮ್ಮ ತಮ್ಮ ಮನೆಯಲ್ಲಿ ಹೇಳಿಕೊಂಡಿದ್ದರು. ಆದರೆ ಇವರ ನಡುವಿನ ವಯಸ್ಸಿನ ಅಂತರ ನೋಡಿ ಮನೆಯಲ್ಲಿ ಪ್ರೀತಿಯನ್ನು ನಿರಾಕರಿಸಿ ಬುದ್ಧಿ ಹೇಳಿದ್ದರು.

ಇದನ್ನೂ ಓದಿ:ದರ್ಶನ್ ಗ್ಯಾಂಗ್ ಜೈಲಲ್ಲಿ ಒಳಸಂಚು ರೂಪಿಸುತ್ತಾ.. ಕೋರ್ಟ್​ಗೆ ಪೊಲೀಸರು ಮತ್ತೆ ಮನವಿ ಮಾಡಿದ್ದೇನು?

publive-image

ಇದಾದ ಮೇಲೆ ಕಳೆದ 4 ದಿನಗಳ ಹಿಂದೆ ಈ ಪ್ರೇಮಿಗಳು ಮನೆಯಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ಹುಡುಕಾಟ ನಡೆಸಿದ್ದರು. ಆದರೆ ನಿನ್ನೆ ಮಾವತ್ತೂರು ಕೆರೆಯ ದಡ ಮೇಲೆ ಇಬ್ಬರ ಚಪ್ಪಲಿ ಹಾಗೂ ಮೊಬೈಲ್ ಇರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೆರೆಯ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅಂಥ ಹುಡುಕಾಟ ನಡೆಸಲಾಗಿತ್ತು. ಅದರಂತೆ ಇಂದು ಬೆಳಗ್ಗೆ ಇಬ್ಬರ ಮೃತದೇಹಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಪತ್ತೆ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment