newsfirstkannada.com

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು.. ಪೊಲೀಸರ ಸಹಾಯದಿಂದ ಅಪ್ರಾಪ್ತೆ ಬಚಾವ್​, ಪ್ರಿಯಕರ ಸಾವು

Share :

Published March 19, 2024 at 8:40am

    ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಪ್ರಿಯಕರ

    ಅಪ್ರಾಪ್ತೆ ಎಂಬ ಕಾರಣಕ್ಕೆ ಮದುವೆಗೆ ನಿರಾಕರಿಸಿದ ಪೋಷಕರು

    ಸೇತುವೆ ಬಳಿ ಒಟ್ಟಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಲವರ್ಸ್​

ಹಾಸನ: ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ.

ಹೊಳೆನರಸಿಪುರ ತಾಲ್ಲೂಕಿನ, ನಗರನಹಳ್ಳಿ ಗ್ರಾಮದ ರಾಜು (24) ಮೃತ ಯುವಕ. ಈತ ಇದೇ ತಾಲ್ಲೂಕಿನ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ. ಮೈಸೂರಿನಲ್ಲಿ ಕೆಲಸ ಮಾಡಿಕೊಂಡಿದ್ದನು. ಆದರೆ ಪೋಷಕರು ಅಪ್ರಾಪ್ತೆ ಎನ್ನುವ ಕಾರಣಕ್ಕೆ ಮದುವೆಗೆ ನಿರಾಕರಿಸಿ ಆಕೆಗೆ ಬುದ್ದಿವಾದ ಹೇಳಿದ್ದರು.

ಹೇಮಾವತಿ ನದಿ ಸೇತುವೆ ವಿಷ ಸೇವನೆ

ನಿನ್ನೆ ಮಧ್ಯಾಹ್ನ ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ಸೇತುವೆ ಬಳಿ ಇಬ್ಬರು ಒಟ್ಟಿಗೆ ವಿಷ ಸೇವಿಸಿದ್ದಾರೆ. ರೈಲ್ವೇ ಟ್ರ್ಯಾಕ್ ಮೇಲೆ ವಿಷ ಸೇವಿಸಿ ಮಲಗಿದ್ದಾರೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಾಣ ಉಳಿಸಿದ ಪುಣ್ಯಾತ್ಮರು

ಸ್ಥಳಕ್ಕೆ ದೌಡಾಯಿಸಿ ನಗರಠಾಣೆ ಪಿಎಸ್‌ಐ ಅಜಯ್ ಕುಮಾರ್ ಹಾಗೂ ಸಿಬ್ಬಂದಿ ತಮ್ಮ ಜೀಪ್‌ನಲ್ಲೇ ಇಬ್ಬರನ್ನೂ ಕರೆತಂದು ಪಟ್ಟಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪ್ರೇಮಿಗಳನ್ನು ಹಾಸನದ ಹಿಮ್ಸ್‌ಗೆ ದಾಖಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಜು ಮೃತಪಟ್ಟಿದ್ದಾನೆ. ಅತ್ತ ಅಪ್ರಾಪ್ತೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ ಎಂದು ತಿಳಿದುಬಂದಿದೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು.. ಪೊಲೀಸರ ಸಹಾಯದಿಂದ ಅಪ್ರಾಪ್ತೆ ಬಚಾವ್​, ಪ್ರಿಯಕರ ಸಾವು

https://newsfirstlive.com/wp-content/uploads/2024/03/hassana-Suicide.jpg

    ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಪ್ರಿಯಕರ

    ಅಪ್ರಾಪ್ತೆ ಎಂಬ ಕಾರಣಕ್ಕೆ ಮದುವೆಗೆ ನಿರಾಕರಿಸಿದ ಪೋಷಕರು

    ಸೇತುವೆ ಬಳಿ ಒಟ್ಟಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಲವರ್ಸ್​

ಹಾಸನ: ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾನೆ.

ಹೊಳೆನರಸಿಪುರ ತಾಲ್ಲೂಕಿನ, ನಗರನಹಳ್ಳಿ ಗ್ರಾಮದ ರಾಜು (24) ಮೃತ ಯುವಕ. ಈತ ಇದೇ ತಾಲ್ಲೂಕಿನ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ. ಮೈಸೂರಿನಲ್ಲಿ ಕೆಲಸ ಮಾಡಿಕೊಂಡಿದ್ದನು. ಆದರೆ ಪೋಷಕರು ಅಪ್ರಾಪ್ತೆ ಎನ್ನುವ ಕಾರಣಕ್ಕೆ ಮದುವೆಗೆ ನಿರಾಕರಿಸಿ ಆಕೆಗೆ ಬುದ್ದಿವಾದ ಹೇಳಿದ್ದರು.

ಹೇಮಾವತಿ ನದಿ ಸೇತುವೆ ವಿಷ ಸೇವನೆ

ನಿನ್ನೆ ಮಧ್ಯಾಹ್ನ ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ಸೇತುವೆ ಬಳಿ ಇಬ್ಬರು ಒಟ್ಟಿಗೆ ವಿಷ ಸೇವಿಸಿದ್ದಾರೆ. ರೈಲ್ವೇ ಟ್ರ್ಯಾಕ್ ಮೇಲೆ ವಿಷ ಸೇವಿಸಿ ಮಲಗಿದ್ದಾರೆ. ಇದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಾಣ ಉಳಿಸಿದ ಪುಣ್ಯಾತ್ಮರು

ಸ್ಥಳಕ್ಕೆ ದೌಡಾಯಿಸಿ ನಗರಠಾಣೆ ಪಿಎಸ್‌ಐ ಅಜಯ್ ಕುಮಾರ್ ಹಾಗೂ ಸಿಬ್ಬಂದಿ ತಮ್ಮ ಜೀಪ್‌ನಲ್ಲೇ ಇಬ್ಬರನ್ನೂ ಕರೆತಂದು ಪಟ್ಟಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪ್ರೇಮಿಗಳನ್ನು ಹಾಸನದ ಹಿಮ್ಸ್‌ಗೆ ದಾಖಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಜು ಮೃತಪಟ್ಟಿದ್ದಾನೆ. ಅತ್ತ ಅಪ್ರಾಪ್ತೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾಳೆ ಎಂದು ತಿಳಿದುಬಂದಿದೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More