ಲಕ್ನೋ ತಂಡದ ಕ್ಯಾಪ್ಟನ್ ಕೆ.ಎಲ್ ರಾಹುಲ್ಗೆ ಮತ್ತೆ ಅವಮಾನ
ರಾಹುಲ್ಗೆ ಮತ್ತೆ ಅವಮಾನ ಮಾಡಿದ ಲಕ್ನೋ ತಂಡದ ಮಾಲೀಕ
ಲಕ್ನೋ ತಂಡದ ಮಾಲೀಕ ಸಂಜೀವ್ ಯಾವ ಕ್ಷಮೆ ಕೂಡ ಕೇಳಿಲ್ಲ
ಲಕ್ನೋ ಸೂಪರ್ ಜೈಂಟ್ಸ್ ತಂಡದ ಕ್ಯಾಪ್ಟನ್ ಕೆ.ಎಲ್ ರಾಹುಲ್ಗೆ ಮತ್ತೆ ಅವಮಾನ ಮಾಡಲಾಗಿದೆ. LSG ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್ ಕೆ.ಎಲ್ ರಾಹುಲ್ ಅವರನ್ನು ಮನೆಗೆ ಕರೆದಿಲ್ಲ. ರಾಹುಲ್ಗೆ ಯಾವುದೇ ಸನ್ಮಾನ ಮಾಡಿಲ್ಲ ಎಂದು ತಿಳಿದು ಬಂದಿದೆ. ಬದಲಿಗೆ ಕೆ.ಎಲ್ ರಾಹುಲ್ ಮಾತ್ರವಲ್ಲ ಇಡೀ ಟೀಮ್ ಅವರ ಮನೆಗೆ ಭೇಟಿ ನೀಡಿದ್ದು, ಇದೊಂದು ನಾರ್ಮಲ್ ಮೀಟಿಂಗ್ ಎಂದು ಹೇಳಲಾಗುತ್ತಿದೆ. ತಾನು ಮಾಡಿದ ತಪ್ಪಿನ ಅರಿವಿನಿಂದ ಕೆ.ಎಲ್ ರಾಹುಲ್ಗೆ ಸನ್ಮಾನ ಮಾಡಿ ಕ್ಷಮೆ ಕೇಳಿದ್ರು ಅನ್ನೋದು ಸುಳ್ಳು ಎಂದು ತಿಳಿದು ಬಂದಿದೆ.
The entire media has been fooled. Goenka did not invite KL Rahul for dinner party. Guess Rahul wore a T-shirt yesterday when he reached Lucknow in the beginning.👿#KLRahul #IPL2024 #Lsgvsdc #RCBvsCSK pic.twitter.com/ghp4hEm2xo
— Nitesh Sharma (@im_nitesh26) May 15, 2024
ಏನಿದು ಘಟನೆ..?
ಕಳೆದ ಕೆಲವು ದಿನಗಳ ಹಿಂದೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಹೀನಾಯವಾಗಿ ಸೋಲನ್ನಪ್ಪಿತ್ತು.
ಟಾಸ್ ಗೆದ್ದು ಫಸ್ಟ್ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ನಿಗದಿತ 20 ಓವರ್ನಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡ ಅದ್ಭುತ ಪ್ರದರ್ಶನ ತೋರಿ ಕೇವಲ 9.4 ಓವರ್ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಜಯಭೇರಿ ಬಾರಿಸಿತ್ತು.
ಹೈದರಾಬಾದ್ ಪರ ಅಗ್ರೆಸ್ಸಿವ್ ಬ್ಯಾಟಿಂಗ್ ಮಾಡಿದ ಟ್ರಾವಿಸ್ ಹೆಡ್ ಕೇವಲ 30 ಎಸೆತಗಳಲ್ಲಿ 8 ಸಿಕ್ಸರ್, 8 ಫೋರ್ ಸಮೇತ 89 ರನ್ ಸಿಡಿಸಿದ್ರು. ಇನ್ನೊಂದೆಡೆ ಇವರಿಗೆ ಸಾಥ್ ನೀಡಿದ ಅಭಿಷೇಕ್ ಶರ್ಮಾ ಕೇವಲ 28 ಬಾಲ್ನಲ್ಲಿ 8 ಬೌಂಡರಿ, 6 ಸಿಕ್ಸರ್ ಸಮೇತ 75 ರನ್ ಚಚ್ಚಿದ್ರು.
ಪಂದ್ಯ ಸೋತ ಬಳಿಕ ಡ್ರೆಸ್ಸಿಂಗ್ ರೂಮ್ ಬಳಿ LSG ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್ ಕೆ.ಎಲ್ ರಾಹುಲ್ ಮೇಲೆ ಕೂಗಾಡಿದ್ದರು. ರಾಹುಲ್ ತಾಳ್ಮೆಯಿಂದ ಉತ್ತರಿಸಲು ಯತ್ನಿಸಿದ್ರೂ ಗೋಯೆಂಕಾ ಅಸಭ್ಯ ವರ್ತನೆ ತೋರಿದ್ರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಆರ್ಸಿಬಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಆರ್ಸಿಬಿ ಸೇರ್ತೀನಿ ಎಂದ ಬೆನ್ನಲ್ಲೇ ಕನ್ನಡಿಗ ರಾಹುಲ್ ಕ್ಷಮೆ ಕೇಳಿದ ಲಕ್ನೋ ತಂಡದ ಮಾಲೀಕ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್
ಲಕ್ನೋ ತಂಡದ ಕ್ಯಾಪ್ಟನ್ ಕೆ.ಎಲ್ ರಾಹುಲ್ಗೆ ಮತ್ತೆ ಅವಮಾನ
ರಾಹುಲ್ಗೆ ಮತ್ತೆ ಅವಮಾನ ಮಾಡಿದ ಲಕ್ನೋ ತಂಡದ ಮಾಲೀಕ
ಲಕ್ನೋ ತಂಡದ ಮಾಲೀಕ ಸಂಜೀವ್ ಯಾವ ಕ್ಷಮೆ ಕೂಡ ಕೇಳಿಲ್ಲ
ಲಕ್ನೋ ಸೂಪರ್ ಜೈಂಟ್ಸ್ ತಂಡದ ಕ್ಯಾಪ್ಟನ್ ಕೆ.ಎಲ್ ರಾಹುಲ್ಗೆ ಮತ್ತೆ ಅವಮಾನ ಮಾಡಲಾಗಿದೆ. LSG ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್ ಕೆ.ಎಲ್ ರಾಹುಲ್ ಅವರನ್ನು ಮನೆಗೆ ಕರೆದಿಲ್ಲ. ರಾಹುಲ್ಗೆ ಯಾವುದೇ ಸನ್ಮಾನ ಮಾಡಿಲ್ಲ ಎಂದು ತಿಳಿದು ಬಂದಿದೆ. ಬದಲಿಗೆ ಕೆ.ಎಲ್ ರಾಹುಲ್ ಮಾತ್ರವಲ್ಲ ಇಡೀ ಟೀಮ್ ಅವರ ಮನೆಗೆ ಭೇಟಿ ನೀಡಿದ್ದು, ಇದೊಂದು ನಾರ್ಮಲ್ ಮೀಟಿಂಗ್ ಎಂದು ಹೇಳಲಾಗುತ್ತಿದೆ. ತಾನು ಮಾಡಿದ ತಪ್ಪಿನ ಅರಿವಿನಿಂದ ಕೆ.ಎಲ್ ರಾಹುಲ್ಗೆ ಸನ್ಮಾನ ಮಾಡಿ ಕ್ಷಮೆ ಕೇಳಿದ್ರು ಅನ್ನೋದು ಸುಳ್ಳು ಎಂದು ತಿಳಿದು ಬಂದಿದೆ.
The entire media has been fooled. Goenka did not invite KL Rahul for dinner party. Guess Rahul wore a T-shirt yesterday when he reached Lucknow in the beginning.👿#KLRahul #IPL2024 #Lsgvsdc #RCBvsCSK pic.twitter.com/ghp4hEm2xo
— Nitesh Sharma (@im_nitesh26) May 15, 2024
ಏನಿದು ಘಟನೆ..?
ಕಳೆದ ಕೆಲವು ದಿನಗಳ ಹಿಂದೆ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಹೀನಾಯವಾಗಿ ಸೋಲನ್ನಪ್ಪಿತ್ತು.
ಟಾಸ್ ಗೆದ್ದು ಫಸ್ಟ್ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ನಿಗದಿತ 20 ಓವರ್ನಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಸನ್ರೈಸರ್ಸ್ ಹೈದರಾಬಾದ್ ತಂಡ ಅದ್ಭುತ ಪ್ರದರ್ಶನ ತೋರಿ ಕೇವಲ 9.4 ಓವರ್ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ಜಯಭೇರಿ ಬಾರಿಸಿತ್ತು.
ಹೈದರಾಬಾದ್ ಪರ ಅಗ್ರೆಸ್ಸಿವ್ ಬ್ಯಾಟಿಂಗ್ ಮಾಡಿದ ಟ್ರಾವಿಸ್ ಹೆಡ್ ಕೇವಲ 30 ಎಸೆತಗಳಲ್ಲಿ 8 ಸಿಕ್ಸರ್, 8 ಫೋರ್ ಸಮೇತ 89 ರನ್ ಸಿಡಿಸಿದ್ರು. ಇನ್ನೊಂದೆಡೆ ಇವರಿಗೆ ಸಾಥ್ ನೀಡಿದ ಅಭಿಷೇಕ್ ಶರ್ಮಾ ಕೇವಲ 28 ಬಾಲ್ನಲ್ಲಿ 8 ಬೌಂಡರಿ, 6 ಸಿಕ್ಸರ್ ಸಮೇತ 75 ರನ್ ಚಚ್ಚಿದ್ರು.
ಪಂದ್ಯ ಸೋತ ಬಳಿಕ ಡ್ರೆಸ್ಸಿಂಗ್ ರೂಮ್ ಬಳಿ LSG ಮಾಲೀಕ ಸಂಜೀವ್ ಗೋಯೆಂಕಾ ಕ್ಯಾಪ್ಟನ್ ಕೆ.ಎಲ್ ರಾಹುಲ್ ಮೇಲೆ ಕೂಗಾಡಿದ್ದರು. ರಾಹುಲ್ ತಾಳ್ಮೆಯಿಂದ ಉತ್ತರಿಸಲು ಯತ್ನಿಸಿದ್ರೂ ಗೋಯೆಂಕಾ ಅಸಭ್ಯ ವರ್ತನೆ ತೋರಿದ್ರು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಆರ್ಸಿಬಿ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಆರ್ಸಿಬಿ ಸೇರ್ತೀನಿ ಎಂದ ಬೆನ್ನಲ್ಲೇ ಕನ್ನಡಿಗ ರಾಹುಲ್ ಕ್ಷಮೆ ಕೇಳಿದ ಲಕ್ನೋ ತಂಡದ ಮಾಲೀಕ
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್