ದೇವಸ್ಥಾನದ ಗೋಡೆ ಕುಸಿದು ದುರಂತ; 9 ಮಕ್ಕಳು ಸ್ಥಳದಲ್ಲೇ ಸಾವು

author-image
Ganesh
Updated On
ದೇವಸ್ಥಾನದ ಗೋಡೆ ಕುಸಿದು ದುರಂತ; 9 ಮಕ್ಕಳು ಸ್ಥಳದಲ್ಲೇ ಸಾವು
Advertisment
  • ಇಂದು ಬೆಳಗ್ಗೆ ದೇವಸ್ಥಾನದ ಗೋಡೆ ಕುಸಿದು ಅನಾಹುತ
  • ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ಬಗ್ಗೆ ಮಾಹಿತಿ
  • ಹಲವು ಮಂದಿ ಗಾಯ, ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಹೃದಯ ವಿದ್ರಾವಕ ಘಟನೆ ನಡೆದಿದೆ. ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿದ್ದಾರೆ.

ಶಹಪುರದ ಹರ್ದುಲ್ ಬಾಬಾ ಟೆಂಪಲ್​​ನಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ದುರ್ಘಟನೆ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಹಾಗೂ ಸ್ಥಳೀಯರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

publive-image

ಮೃತರೆಲ್ಲ 10 ರಿಂದ 15 ವರ್ಷದೊಳಗಿನ ಮಕ್ಕಳು ಎಂದು ತಿಳಿದುಬಂದಿದೆ. ದುರಂತಕ್ಕೆ ಮುಖ್ಯಮಂತ್ರಿ ಮೋಹನ್ ಯಾದವ್ ಕಂಬನಿ ಮಿಡಿದಿದ್ದಾರೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡೋದಾಗಿ ಘೋಷಣೆ ಮಾಡಿದ್ದಾರೆ. ವರದಿಗಳ ಪ್ರಕಾರ, ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ದೇವಾಲಯದ ಗೋಡೆ ನೀರಲ್ಲಿ ನೆನೆದು ನಿಂತಿತ್ತು ಎನ್ನಲಾಗಿದೆ.

ಇದನ್ನೂ ಓದಿ:ರೋಹಿತ್​ಗೆ ಬೇಕಿತ್ತು ಪಂತ್.. ರಾಹುಲ್​ಗೆ ಚಾನ್ಸ್​ ಸಿಕ್ಕಿರುವ ಹಿಂದಿದೆ ಓರ್ವ ಸೂತ್ರಧಾರನ ಕೈವಾಡ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment