ತೀರ್ಥಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಆತಂಕ
ಹರಿಹರ-ಹೊನ್ನಾಳಿ ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ
ಕೃಷ್ಣ ನದಿಯ ಹಿನ್ನೀರಿನಲ್ಲಿ ಕಾಣೆಯಾದ ಬಾಲಕಿಗಾಗಿ ಹುಡುಕಾಟ
ಮಲೆನಾಡು ಮತ್ತು ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಮಳೆಯಿಂದ ಕರುನಾಡು ಕಂಗಾಲಾಗಿದೆ. ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೆರೆ ಬೀತಿ ಆವರಿಸಿದೆ. ಉತ್ತರ ಕನ್ನಡ ಕುಸಿತದ ಬೆನ್ನಲ್ಲೇ, ಇದೀಗ ಶಿವಮೊಗ್ಗದ ಹಲವು ಕಡೆ ಗುಡ್ಡ ಕುಸಿಯುವ ಆತಂಕ ಮೂಡಿದೆ. ಕಡುನಾಡಿನ ಪ್ರಮುಖ ನದಿಗಳೂ ಕೂಡ ಉಕ್ಕಿ ಹರಿಯುತ್ತಿದ್ದು, ಭಾರೀ ಅವಾಂತರಗಳೇ ಸೃಷ್ಟಿಯಾಗಿವೆ.
ತೀರ್ಥಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಭೀತಿ
ಕಳೆದ ವರ್ಷ ಕರುನಾಡಿನ ಮೇಲೆ ಮುನಿಸಿಕೊಂಡಿದ್ದ ಮಳೆರಾಯ, ಈ ವರ್ಷ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮಲೆನಾಡು, ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿರುವ ಪರಿಣಾಮ ನದಿಗಳು ಆರ್ಭಟಿಸುತ್ತಿವೆ. ಅಲ್ಲಲ್ಲಿ ಗುಡ್ಡ ಕುಸಿತದ ಆತಂಕವೂ ಮನೆ ಮಾಡಿದೆ. ಕರಾವಳಿ ಭಾಗದಲ್ಲಿ ಗುಡ್ಡ ಕುಸಿತದ ಬೆನ್ನಲ್ಲೇ ಇದೀಗ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ.
ತೀರ್ಥಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಆತಂಕ ಎದುರಾಗಿದೆ. ಈಗಾಗಲೇ ತೀರ್ಥಹಳ್ಳಿಯ ಬೈಪಾಸ್ ರಸ್ತೆ ತಡೆಗೋಡೆ ಕುಸಿದು ರಸ್ತೆ ಮೇಲೆ ಮಣ್ಣು ಬಿದ್ದಿತ್ತು. ಇದೀಗ ಹೆದ್ದಾರಿಯಲ್ಲೂ ಬಿರುಕು ಮೂಡಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಈ ರೀತಿ ಆಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ವಾಗ್ದಾಳಿ ನಡೆಸಿದ್ದ ಶಾಸಕ ಆರಗ ಬೈಪಾಸ್ ರಸ್ತೆ ವಿಷಯದಲ್ಲಿ ಮೌನವಾಗಿರೋದು ಕೂಡ ಜನರಲ್ಲಿ ಅಸಮಾಧಾನ ಮೂಡಿಸಿದೆ.
ಹರಿಹರ-ಹೊನ್ನಾಳಿ ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ
ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗ್ತಿದ್ದು, ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಹರಿಹರ-ಹೊನ್ನಾಳಿ ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ನ 13 ಕುಟುಂಬಗಳನ್ನು ಅಂಬೇಡ್ಕರ್ ಸಮುದಾಯ ಭವನದ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನು ಹರಿಹರ ತಾಲೂಕಿನ ಉಕ್ಕಡಗತ್ರಿ ಗ್ರಾಮದ ಬಳಿ ಅಡಿಕೆ ಜಮೀನು ಜಲಾವೃತವಾಗಿದೆ.
ಘಟಪ್ರಭಾ ನದಿ ಅಬ್ಬರಕ್ಕೆ ಯಾದವಾಡ ರಸ್ತೆ ಸೇತುವೆ ಮುಳುಗಡೆ
ಮಹಾರಾಷ್ಟ್ರದಲ್ಲಿ ಮಹಾ ಮಳೆಯಿಂದಾಗಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ಯಾದವಾಡ ರಸ್ತೆ ಸೇತುವೆ ಮುಳುಗಡೆ ಆಗಿದೆ. ಸೇತುವೆ ಮೇಲೆ 2-3 ಅಡಿಯಷ್ಟು ರಭಸದಿಂದ ನಿಂತಿರೋ ಹರಿಯುತ್ತಿದ್ದಾರೆ. ಆದ್ರೆ, ಅಪಾಯವನ್ನೂ ಲೆಕ್ಕಿಸಿದ ವಾಹನ ಸವಾರರು ಸಂಚಾರ ಮಾಡ್ತಿದ್ದಾರೆ. ಮಿರ್ಜಿ, ಚನ್ನಾಳ ಸೇರಿದಂತೆ 15 ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ನದಿ ಪಾತ್ರಗಳಿಗೆ ತೆರಳದಂತೆ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಕೃಷ್ಣಾ ನದಿ ಹಿನೀರಿನಲ್ಲಿ ಬಾಲಕಿ ಕಾಣೆಯಾಗಿರುವ ಶಂಕೆ
ಬಾಗಲಕೋಟೆ ಜಿಲ್ಲೆಯಲ್ಲಿ ಬಾಲಕಿಯೊಬ್ಬಳು ಕೃಷ್ಣ ನದಿಯ ಹಿನ್ನೀರಿನಲ್ಲಿ ನಾಪತ್ತೆ ಆಗಿರುವ ಶಂಕೆ ವ್ಯಕ್ತವಾಗಿದೆ. ಕಡಕೋಳ ಗ್ರಾಮಸ ಸಮೃದ್ಧಿ ಎಂಬ ಬಾಲಕಿ, ಆಟವಾಡುತ್ತಾ ಕೃಷ್ಣ ನದಿ ಕಡೆ ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಬಾಲಕಿ ಕಾಣೆಯಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ಮೂಡಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇತ್ತ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹಾವೇರಿಯಲ್ಲಿ ವರದಾ ನದಿಯಿಂದ ಭಾರೀ ಅವಾಂತರ
ತುಂಬಿ ಹರಿಯುತ್ತಿರುವ ವರದಾ ನದಿಯಿಂದ ಹಾವೇರಿ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ವರದಾ ನದಿಯ ಪ್ರವಾಹದಿಂದ ಬೆಳವಿಗಿ-ನೀರಲಗಿಯ ಸೇತುವೆ ಬಂದ್ ಆಗಿದ್ದು, 10 ಹಳ್ಳಿಗಳ ಸಂಚಾರ ಸ್ಥಗಿತವಾಗಿದೆ. ಹಾವೇರಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಅರ್ಧಕ್ಕೆ ನಿಂತಿರೋ ಬ್ರಿಡ್ಜ್ ಕಾಮಗಾರಿಯಿಂದ ರೈತರ ಬೆಳೆ ನೀರು ಪಾಲಾಗುವ ಆತಂಕ ಎದುರಾಗಿದೆ.
ಜೀವ ಕೈಯಲ್ಲಿ ಹಿಡಿದು ದಿನಕಳೆಯುತ್ತಿರೋ ಮೀನುಗಾರರು
ರಾಯಚೂರು ಜಿಲ್ಲೆ ದೇವದುರ್ಗ ತಾ. ಗೂಗಲ್ ಜನರ ಪರಿಸ್ಥಿತಿ ಹೇಳತೀರದಾಗಿದೆ. ಅಬ್ಬರಿಸೋ ಕೃಷ್ಣಾ ನದಿ ಪಕ್ಕದಲ್ಲೇ ಮೀನುಗಾರರು ವಾಸ ಮಾಡ್ತಿದ್ದಾರೆ.. ಒಂದ್ವೇಳೆ ಕೃಷ್ಣಾ ನದಿಯಲ್ಲಿ ಮತ್ತಷ್ಟು ನೀರು ಏರಿಕೆಯಾದ್ರೆ ಮೀನುಗಾರರಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ.. ಕಳೆದ 20 ವರ್ಷಗಳಿಂದ ಕುಟುಂಬಗಳು ಇಲ್ಲೇ ವಾಸಿಸುತ್ತಿದ್ದು, ಶಾಶ್ವತ ಪರಿಹಾರಕ್ಕಾಗಿ ಮನವಿ ಮಾಡಿದ್ರೂ ಪರಿಹಾರ ಮಾತ್ರ ಸಿಕ್ಕಿಲ್ಲ ಎಂದು ಅಳಲು ತೋಡಿಕೊಳ್ತಿದ್ದಾರೆ. ಬೆಳಗಾವಿಯಲ್ಲಿ ಭಾರೀ ಮಳೆಯಿಂದಾಗಿ ಕಡೋಲಿ ಗ್ರಾಮದ ಹೊರವಲಯದಲ್ಲಿರುವ ಗ್ರಾಮದ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಸುಮಾರು 20 ಎಕರೆ ಜಮೀನಿನಲ್ಲಿ ಕಷ್ಟಪಟ್ಟು ಬೆಳೆದಿದ್ದ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಇತ್ತ ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆಯಿಂದ ಎರಡು ದೊಡ್ಡ ಕೆರೆಗಳಾದ ಅಯ್ಯನಕೆರೆ ಮತ್ತು ಮದಗದ ಕೆರೆ ಕೋಡಿ ಬಿದ್ದು, ರೈತರ ಜಮೀನುಗಳಿಗೆ ನೀರು ನುಗ್ಗಿದೆ.
ಇದನ್ನೂ ಓದಿ: ಗಂಗಾವಳಿ ನದಿ ರಭಸಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ಶಾಕ್.. 3 ಮೃತದೇಹಗಳ ಬಗ್ಗೆ ಏನ್ ಹೇಳಿದ್ದಾರೆ?
ಇನ್ನು ಕರಾವಳಿಯಲ್ಲೂ ಮಳೆ ಗಾಳಿಯಿಂದ ಸಮುದ್ರ ಪ್ರಕ್ಷುಬದ್ಧಗೊಂಡಿದೆ. ಉಳ್ಳಾಲದ ಸೋಮೇಶ್ವರ ಉಚ್ಚಿಲ ಭಾಗದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಕಡಲ್ಕೊರೆತ ಭೀತಿ ಎದುರಾಗಿದೆ. ಸದ್ಯ ಅಪಾಯದಲ್ಲಿದ್ದ, ಯೋಗಿಶ್ ಎಂಬುವರ ಕುಟುಂಬವನ್ನು ಸ್ಥಳಾಂತರ ಮಾಡಲಾಗಿದೆ. ಒಟ್ಟಾರೆ ಕಳೆದ ವರ್ಷ ಅನಾವೃಷ್ಟಿಯಿಂದ ಕಂಗಾಲಾಗಿದ್ದ ಕರುನಾಡು, ಈ ವರ್ಷ ಹಲವು ಭಾಗಗಳಲ್ಲಿ ಅತಿವೃಷ್ಟಿಗೆ ತುತ್ತಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ತೀರ್ಥಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಆತಂಕ
ಹರಿಹರ-ಹೊನ್ನಾಳಿ ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ
ಕೃಷ್ಣ ನದಿಯ ಹಿನ್ನೀರಿನಲ್ಲಿ ಕಾಣೆಯಾದ ಬಾಲಕಿಗಾಗಿ ಹುಡುಕಾಟ
ಮಲೆನಾಡು ಮತ್ತು ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಮಳೆಯಿಂದ ಕರುನಾಡು ಕಂಗಾಲಾಗಿದೆ. ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೆರೆ ಬೀತಿ ಆವರಿಸಿದೆ. ಉತ್ತರ ಕನ್ನಡ ಕುಸಿತದ ಬೆನ್ನಲ್ಲೇ, ಇದೀಗ ಶಿವಮೊಗ್ಗದ ಹಲವು ಕಡೆ ಗುಡ್ಡ ಕುಸಿಯುವ ಆತಂಕ ಮೂಡಿದೆ. ಕಡುನಾಡಿನ ಪ್ರಮುಖ ನದಿಗಳೂ ಕೂಡ ಉಕ್ಕಿ ಹರಿಯುತ್ತಿದ್ದು, ಭಾರೀ ಅವಾಂತರಗಳೇ ಸೃಷ್ಟಿಯಾಗಿವೆ.
ತೀರ್ಥಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಭೀತಿ
ಕಳೆದ ವರ್ಷ ಕರುನಾಡಿನ ಮೇಲೆ ಮುನಿಸಿಕೊಂಡಿದ್ದ ಮಳೆರಾಯ, ಈ ವರ್ಷ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಮಲೆನಾಡು, ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿರುವ ಪರಿಣಾಮ ನದಿಗಳು ಆರ್ಭಟಿಸುತ್ತಿವೆ. ಅಲ್ಲಲ್ಲಿ ಗುಡ್ಡ ಕುಸಿತದ ಆತಂಕವೂ ಮನೆ ಮಾಡಿದೆ. ಕರಾವಳಿ ಭಾಗದಲ್ಲಿ ಗುಡ್ಡ ಕುಸಿತದ ಬೆನ್ನಲ್ಲೇ ಇದೀಗ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲೂ ಗುಡ್ಡ ಕುಸಿತ ಭೀತಿ ಎದುರಾಗಿದೆ.
ತೀರ್ಥಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಆತಂಕ ಎದುರಾಗಿದೆ. ಈಗಾಗಲೇ ತೀರ್ಥಹಳ್ಳಿಯ ಬೈಪಾಸ್ ರಸ್ತೆ ತಡೆಗೋಡೆ ಕುಸಿದು ರಸ್ತೆ ಮೇಲೆ ಮಣ್ಣು ಬಿದ್ದಿತ್ತು. ಇದೀಗ ಹೆದ್ದಾರಿಯಲ್ಲೂ ಬಿರುಕು ಮೂಡಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಈ ರೀತಿ ಆಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ವಾಗ್ದಾಳಿ ನಡೆಸಿದ್ದ ಶಾಸಕ ಆರಗ ಬೈಪಾಸ್ ರಸ್ತೆ ವಿಷಯದಲ್ಲಿ ಮೌನವಾಗಿರೋದು ಕೂಡ ಜನರಲ್ಲಿ ಅಸಮಾಧಾನ ಮೂಡಿಸಿದೆ.
ಹರಿಹರ-ಹೊನ್ನಾಳಿ ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ
ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗ್ತಿದ್ದು, ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಹರಿಹರ-ಹೊನ್ನಾಳಿ ತಾಲೂಕಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹೊನ್ನಾಳಿ ಪಟ್ಟಣದ ಬಾಲರಾಜ್ ಘಾಟ್ನ 13 ಕುಟುಂಬಗಳನ್ನು ಅಂಬೇಡ್ಕರ್ ಸಮುದಾಯ ಭವನದ ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಇನ್ನು ಹರಿಹರ ತಾಲೂಕಿನ ಉಕ್ಕಡಗತ್ರಿ ಗ್ರಾಮದ ಬಳಿ ಅಡಿಕೆ ಜಮೀನು ಜಲಾವೃತವಾಗಿದೆ.
ಘಟಪ್ರಭಾ ನದಿ ಅಬ್ಬರಕ್ಕೆ ಯಾದವಾಡ ರಸ್ತೆ ಸೇತುವೆ ಮುಳುಗಡೆ
ಮಹಾರಾಷ್ಟ್ರದಲ್ಲಿ ಮಹಾ ಮಳೆಯಿಂದಾಗಿ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ಯಾದವಾಡ ರಸ್ತೆ ಸೇತುವೆ ಮುಳುಗಡೆ ಆಗಿದೆ. ಸೇತುವೆ ಮೇಲೆ 2-3 ಅಡಿಯಷ್ಟು ರಭಸದಿಂದ ನಿಂತಿರೋ ಹರಿಯುತ್ತಿದ್ದಾರೆ. ಆದ್ರೆ, ಅಪಾಯವನ್ನೂ ಲೆಕ್ಕಿಸಿದ ವಾಹನ ಸವಾರರು ಸಂಚಾರ ಮಾಡ್ತಿದ್ದಾರೆ. ಮಿರ್ಜಿ, ಚನ್ನಾಳ ಸೇರಿದಂತೆ 15 ಗ್ರಾಮಗಳ ಸಂಪರ್ಕ ಕಡಿತಗೊಂಡಿದ್ದು, ನದಿ ಪಾತ್ರಗಳಿಗೆ ತೆರಳದಂತೆ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಕೃಷ್ಣಾ ನದಿ ಹಿನೀರಿನಲ್ಲಿ ಬಾಲಕಿ ಕಾಣೆಯಾಗಿರುವ ಶಂಕೆ
ಬಾಗಲಕೋಟೆ ಜಿಲ್ಲೆಯಲ್ಲಿ ಬಾಲಕಿಯೊಬ್ಬಳು ಕೃಷ್ಣ ನದಿಯ ಹಿನ್ನೀರಿನಲ್ಲಿ ನಾಪತ್ತೆ ಆಗಿರುವ ಶಂಕೆ ವ್ಯಕ್ತವಾಗಿದೆ. ಕಡಕೋಳ ಗ್ರಾಮಸ ಸಮೃದ್ಧಿ ಎಂಬ ಬಾಲಕಿ, ಆಟವಾಡುತ್ತಾ ಕೃಷ್ಣ ನದಿ ಕಡೆ ಹೋಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಬಾಲಕಿ ಕಾಣೆಯಾಗಿದ್ದು, ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ಮೂಡಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಬಾಲಕಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇತ್ತ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹಾವೇರಿಯಲ್ಲಿ ವರದಾ ನದಿಯಿಂದ ಭಾರೀ ಅವಾಂತರ
ತುಂಬಿ ಹರಿಯುತ್ತಿರುವ ವರದಾ ನದಿಯಿಂದ ಹಾವೇರಿ ಜಿಲ್ಲೆಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ವರದಾ ನದಿಯ ಪ್ರವಾಹದಿಂದ ಬೆಳವಿಗಿ-ನೀರಲಗಿಯ ಸೇತುವೆ ಬಂದ್ ಆಗಿದ್ದು, 10 ಹಳ್ಳಿಗಳ ಸಂಚಾರ ಸ್ಥಗಿತವಾಗಿದೆ. ಹಾವೇರಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಅರ್ಧಕ್ಕೆ ನಿಂತಿರೋ ಬ್ರಿಡ್ಜ್ ಕಾಮಗಾರಿಯಿಂದ ರೈತರ ಬೆಳೆ ನೀರು ಪಾಲಾಗುವ ಆತಂಕ ಎದುರಾಗಿದೆ.
ಜೀವ ಕೈಯಲ್ಲಿ ಹಿಡಿದು ದಿನಕಳೆಯುತ್ತಿರೋ ಮೀನುಗಾರರು
ರಾಯಚೂರು ಜಿಲ್ಲೆ ದೇವದುರ್ಗ ತಾ. ಗೂಗಲ್ ಜನರ ಪರಿಸ್ಥಿತಿ ಹೇಳತೀರದಾಗಿದೆ. ಅಬ್ಬರಿಸೋ ಕೃಷ್ಣಾ ನದಿ ಪಕ್ಕದಲ್ಲೇ ಮೀನುಗಾರರು ವಾಸ ಮಾಡ್ತಿದ್ದಾರೆ.. ಒಂದ್ವೇಳೆ ಕೃಷ್ಣಾ ನದಿಯಲ್ಲಿ ಮತ್ತಷ್ಟು ನೀರು ಏರಿಕೆಯಾದ್ರೆ ಮೀನುಗಾರರಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ.. ಕಳೆದ 20 ವರ್ಷಗಳಿಂದ ಕುಟುಂಬಗಳು ಇಲ್ಲೇ ವಾಸಿಸುತ್ತಿದ್ದು, ಶಾಶ್ವತ ಪರಿಹಾರಕ್ಕಾಗಿ ಮನವಿ ಮಾಡಿದ್ರೂ ಪರಿಹಾರ ಮಾತ್ರ ಸಿಕ್ಕಿಲ್ಲ ಎಂದು ಅಳಲು ತೋಡಿಕೊಳ್ತಿದ್ದಾರೆ. ಬೆಳಗಾವಿಯಲ್ಲಿ ಭಾರೀ ಮಳೆಯಿಂದಾಗಿ ಕಡೋಲಿ ಗ್ರಾಮದ ಹೊರವಲಯದಲ್ಲಿರುವ ಗ್ರಾಮದ ಕೆರೆ ಒಡೆದು ಅವಾಂತರ ಸೃಷ್ಟಿಯಾಗಿದೆ. ಸುಮಾರು 20 ಎಕರೆ ಜಮೀನಿನಲ್ಲಿ ಕಷ್ಟಪಟ್ಟು ಬೆಳೆದಿದ್ದ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಇತ್ತ ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರೀ ಮಳೆಯಿಂದ ಎರಡು ದೊಡ್ಡ ಕೆರೆಗಳಾದ ಅಯ್ಯನಕೆರೆ ಮತ್ತು ಮದಗದ ಕೆರೆ ಕೋಡಿ ಬಿದ್ದು, ರೈತರ ಜಮೀನುಗಳಿಗೆ ನೀರು ನುಗ್ಗಿದೆ.
ಇದನ್ನೂ ಓದಿ: ಗಂಗಾವಳಿ ನದಿ ರಭಸಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ಶಾಕ್.. 3 ಮೃತದೇಹಗಳ ಬಗ್ಗೆ ಏನ್ ಹೇಳಿದ್ದಾರೆ?
ಇನ್ನು ಕರಾವಳಿಯಲ್ಲೂ ಮಳೆ ಗಾಳಿಯಿಂದ ಸಮುದ್ರ ಪ್ರಕ್ಷುಬದ್ಧಗೊಂಡಿದೆ. ಉಳ್ಳಾಲದ ಸೋಮೇಶ್ವರ ಉಚ್ಚಿಲ ಭಾಗದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಕಡಲ್ಕೊರೆತ ಭೀತಿ ಎದುರಾಗಿದೆ. ಸದ್ಯ ಅಪಾಯದಲ್ಲಿದ್ದ, ಯೋಗಿಶ್ ಎಂಬುವರ ಕುಟುಂಬವನ್ನು ಸ್ಥಳಾಂತರ ಮಾಡಲಾಗಿದೆ. ಒಟ್ಟಾರೆ ಕಳೆದ ವರ್ಷ ಅನಾವೃಷ್ಟಿಯಿಂದ ಕಂಗಾಲಾಗಿದ್ದ ಕರುನಾಡು, ಈ ವರ್ಷ ಹಲವು ಭಾಗಗಳಲ್ಲಿ ಅತಿವೃಷ್ಟಿಗೆ ತುತ್ತಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ