ಇಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆ
ರಾಜಿ ಸಂಧಾನ ಮಾಡಲು ಹೋಗಿದ್ದ ಯುವಕ
ಯುವಕನಿಗೆ ಮಚ್ಚು ಲಾಂಗಿನಿಂದ ತೀವ್ರ ಹಲ್ಲೆ
ತುಮಕೂರು: ಇಬ್ಬರು ವ್ಯಕ್ತಿಗಳ ಮಧ್ಯೆ ರಾಜಿ ಮಾಡಿಸಲು ಹೋದ ಯುವಕನಿಗೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಇದರ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೀಗಾಗಿ ಹಲ್ಲೆಗೊಳಗಾದ ಯುವಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತುರುವೇಕೆರೆ ತಾಲೂಕಿನ ಕರೆಕಲ್ಲು ಗ್ರಾಮದಲ್ಲಿ ಪ್ರಕರಣ ನಡೆದಿದೆ. ಈ ಕೃತ್ಯದಲ್ಲಿ ದಿಲೀಪ್ ಎಂಬ ಯುವಕ ಗಲಾಟೆ ಬಿಡಿಸಲು ಹೋಗಿ ತೀವ್ರ ಹಲ್ಲೆಗೆ ಒಳಗಾಗಿದ್ದಾನೆ. ಸದ್ಯ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.
ಅಸಲಿಗೆ ಆಗಿದ್ದೇನು..?
ಪ್ರಸಾದ್, ಕಿರಣ್ ಕುಮಾರ್ ಎಂಬುವರ ಮಧ್ಯೆ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಇಬ್ಬರ ನಡುವೆ ರಾಜೀ ಸಂಧಾನ ಮಾಡಲು ದಿಲೀಪ್ ಎಂಟ್ರಿಯಾಗಿದ್ದ. ಮಾತಿಗೆ ಮಾತು ಬೆಳೆದು ಪ್ರಸಾದ್ ಕಡೆಯವ್ರು ದಿಲೀಪ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ. ಈಗ ಗಂಭೀರವಾಗಿ ಗಾಯಗೊಂಡ ದಿಲೀಪ್ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆ
ರಾಜಿ ಸಂಧಾನ ಮಾಡಲು ಹೋಗಿದ್ದ ಯುವಕ
ಯುವಕನಿಗೆ ಮಚ್ಚು ಲಾಂಗಿನಿಂದ ತೀವ್ರ ಹಲ್ಲೆ
ತುಮಕೂರು: ಇಬ್ಬರು ವ್ಯಕ್ತಿಗಳ ಮಧ್ಯೆ ರಾಜಿ ಮಾಡಿಸಲು ಹೋದ ಯುವಕನಿಗೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಲಾಗಿದೆ. ಇದರ ಪರಿಣಾಮ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೀಗಾಗಿ ಹಲ್ಲೆಗೊಳಗಾದ ಯುವಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತುರುವೇಕೆರೆ ತಾಲೂಕಿನ ಕರೆಕಲ್ಲು ಗ್ರಾಮದಲ್ಲಿ ಪ್ರಕರಣ ನಡೆದಿದೆ. ಈ ಕೃತ್ಯದಲ್ಲಿ ದಿಲೀಪ್ ಎಂಬ ಯುವಕ ಗಲಾಟೆ ಬಿಡಿಸಲು ಹೋಗಿ ತೀವ್ರ ಹಲ್ಲೆಗೆ ಒಳಗಾಗಿದ್ದಾನೆ. ಸದ್ಯ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ.
ಅಸಲಿಗೆ ಆಗಿದ್ದೇನು..?
ಪ್ರಸಾದ್, ಕಿರಣ್ ಕುಮಾರ್ ಎಂಬುವರ ಮಧ್ಯೆ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಇಬ್ಬರ ನಡುವೆ ರಾಜೀ ಸಂಧಾನ ಮಾಡಲು ದಿಲೀಪ್ ಎಂಟ್ರಿಯಾಗಿದ್ದ. ಮಾತಿಗೆ ಮಾತು ಬೆಳೆದು ಪ್ರಸಾದ್ ಕಡೆಯವ್ರು ದಿಲೀಪ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದಾರೆ. ಈಗ ಗಂಭೀರವಾಗಿ ಗಾಯಗೊಂಡ ದಿಲೀಪ್ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ