/newsfirstlive-kannada/media/post_attachments/wp-content/uploads/2024/06/car-Fire.jpg)
ಕಾರೊಂದು ಅಪಘಾತಕ್ಕೀಡಾದ ಪರಿಣಾಮ 30 ವರ್ಷ ವಯಸ್ಸಿನ ವ್ಯಕ್ತಿ ಸಜೀವ ದಹನಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಲೋವರ್​ ದಿಬಾಂಗ್​ ವ್ಯಾಲಿ ಜಿಲ್ಲೆಯ ಮೆಕಾ ಪ್ರದೇಶದಲ್ಲಿ ಭಾನುವಾರದಂದು ಈ ದುರ್ಘಟನೆ ಸಂಭವಿಸಿದೆ.
ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಸುಟ್ಟ ದೇಹವನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ದಾಂಬುಕ್​ ನಿವಾಸಿ ಜೀವನ್​ ಲಾಕ್ರಾ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಮುದ್ದಾದ ಮಗುವಿಗೆ ಜನ್ಮ ನೀಡಿದ ಬಾಲಿವುಡ್ ಖ್ಯಾತ ನಟ ವರುಣ್ ಧವನ್ ಪತ್ನಿ
ಜೀವನ್​ ರೋಯಿಂಗ್​ಗೆ ತೆರಳುವ ವೇಳೆ ಎದುರಿಗೆ ಬಂದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಜೀವನ್​ ಬೆಂಕಿಗೆ ಆಹುತಿಯಾಗಿದ್ದಾರೆ.
ಅಗ್ನಿಶಾಮಕ ದಳ ತಕ್ಷಣವೇ ಸ್ಥಳಕ್ಕೆ ಬಂದಿದ್ದಾರೆ. ಕೂಡಲೇ ಕಾರಿನ ಗಾಜು ಒಡೆದು ಗಾಯಾಳುವನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಅದರೆ ಅಷ್ಟರಲ್ಲಿ ಜೀವನ್​ ದೇಹವು ಬಹುಪಾಲು ಸುಟ್ಟುಹೋಗಿತ್ತು. ಪ್ರಜ್ಞಾಹೀನನಾಗಿ ಬಿದ್ದಿದ್ದನು. ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರು ವೈದ್ಯರು ಆತ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us