ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಕಾರು.. ಚಾಲಕ ಸಾವು
ಕಾರಿನಲ್ಲೇ ಸಜೀವ ದಹನಗೊಂಡ 30 ವರ್ಷದ ಚಾಲಕ
ಅಗ್ನಿಶಾಮಕ ದಳ ಸಿಬ್ಬಂದಿಗಳ ಕಾರ್ಯ ಫಲಿಸಲಿಲ್ಲ
ಕಾರೊಂದು ಅಪಘಾತಕ್ಕೀಡಾದ ಪರಿಣಾಮ 30 ವರ್ಷ ವಯಸ್ಸಿನ ವ್ಯಕ್ತಿ ಸಜೀವ ದಹನಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಲೋವರ್ ದಿಬಾಂಗ್ ವ್ಯಾಲಿ ಜಿಲ್ಲೆಯ ಮೆಕಾ ಪ್ರದೇಶದಲ್ಲಿ ಭಾನುವಾರದಂದು ಈ ದುರ್ಘಟನೆ ಸಂಭವಿಸಿದೆ.
ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಸುಟ್ಟ ದೇಹವನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ದಾಂಬುಕ್ ನಿವಾಸಿ ಜೀವನ್ ಲಾಕ್ರಾ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಮುದ್ದಾದ ಮಗುವಿಗೆ ಜನ್ಮ ನೀಡಿದ ಬಾಲಿವುಡ್ ಖ್ಯಾತ ನಟ ವರುಣ್ ಧವನ್ ಪತ್ನಿ
ಜೀವನ್ ರೋಯಿಂಗ್ಗೆ ತೆರಳುವ ವೇಳೆ ಎದುರಿಗೆ ಬಂದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಜೀವನ್ ಬೆಂಕಿಗೆ ಆಹುತಿಯಾಗಿದ್ದಾರೆ.
ಇದನ್ನೂ ಓದಿ: ಪುತ್ರ ಮೃಣಾಲ್ಗೆ ಒಲಿಯಲಿಲ್ಲ ಲಕ್ಷ್ಮಿ ಕೃಪಾಕಟಾಕ್ಷ.. ಜಗದೀಶ್ ಶೆಟ್ಟರ್ಗೆ ಗೆಲುವಿನ ಸಂತಸ.. ಎಷ್ಟು ಮತಗಳ ಅಂತರ?
ಅಗ್ನಿಶಾಮಕ ದಳ ತಕ್ಷಣವೇ ಸ್ಥಳಕ್ಕೆ ಬಂದಿದ್ದಾರೆ. ಕೂಡಲೇ ಕಾರಿನ ಗಾಜು ಒಡೆದು ಗಾಯಾಳುವನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಅದರೆ ಅಷ್ಟರಲ್ಲಿ ಜೀವನ್ ದೇಹವು ಬಹುಪಾಲು ಸುಟ್ಟುಹೋಗಿತ್ತು. ಪ್ರಜ್ಞಾಹೀನನಾಗಿ ಬಿದ್ದಿದ್ದನು. ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರು ವೈದ್ಯರು ಆತ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಕಾರು.. ಚಾಲಕ ಸಾವು
ಕಾರಿನಲ್ಲೇ ಸಜೀವ ದಹನಗೊಂಡ 30 ವರ್ಷದ ಚಾಲಕ
ಅಗ್ನಿಶಾಮಕ ದಳ ಸಿಬ್ಬಂದಿಗಳ ಕಾರ್ಯ ಫಲಿಸಲಿಲ್ಲ
ಕಾರೊಂದು ಅಪಘಾತಕ್ಕೀಡಾದ ಪರಿಣಾಮ 30 ವರ್ಷ ವಯಸ್ಸಿನ ವ್ಯಕ್ತಿ ಸಜೀವ ದಹನಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಅಲ್ಲಿನ ಲೋವರ್ ದಿಬಾಂಗ್ ವ್ಯಾಲಿ ಜಿಲ್ಲೆಯ ಮೆಕಾ ಪ್ರದೇಶದಲ್ಲಿ ಭಾನುವಾರದಂದು ಈ ದುರ್ಘಟನೆ ಸಂಭವಿಸಿದೆ.
ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಸುಟ್ಟ ದೇಹವನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ದಾಂಬುಕ್ ನಿವಾಸಿ ಜೀವನ್ ಲಾಕ್ರಾ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಮುದ್ದಾದ ಮಗುವಿಗೆ ಜನ್ಮ ನೀಡಿದ ಬಾಲಿವುಡ್ ಖ್ಯಾತ ನಟ ವರುಣ್ ಧವನ್ ಪತ್ನಿ
ಜೀವನ್ ರೋಯಿಂಗ್ಗೆ ತೆರಳುವ ವೇಳೆ ಎದುರಿಗೆ ಬಂದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಜೀವನ್ ಬೆಂಕಿಗೆ ಆಹುತಿಯಾಗಿದ್ದಾರೆ.
ಇದನ್ನೂ ಓದಿ: ಪುತ್ರ ಮೃಣಾಲ್ಗೆ ಒಲಿಯಲಿಲ್ಲ ಲಕ್ಷ್ಮಿ ಕೃಪಾಕಟಾಕ್ಷ.. ಜಗದೀಶ್ ಶೆಟ್ಟರ್ಗೆ ಗೆಲುವಿನ ಸಂತಸ.. ಎಷ್ಟು ಮತಗಳ ಅಂತರ?
ಅಗ್ನಿಶಾಮಕ ದಳ ತಕ್ಷಣವೇ ಸ್ಥಳಕ್ಕೆ ಬಂದಿದ್ದಾರೆ. ಕೂಡಲೇ ಕಾರಿನ ಗಾಜು ಒಡೆದು ಗಾಯಾಳುವನ್ನು ಹೊರತೆಗೆಯಲು ಪ್ರಯತ್ನಿಸಿದ್ದಾರೆ. ಅದರೆ ಅಷ್ಟರಲ್ಲಿ ಜೀವನ್ ದೇಹವು ಬಹುಪಾಲು ಸುಟ್ಟುಹೋಗಿತ್ತು. ಪ್ರಜ್ಞಾಹೀನನಾಗಿ ಬಿದ್ದಿದ್ದನು. ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರು ವೈದ್ಯರು ಆತ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ