ದುರ್ಘಟನೆಯಲ್ಲಿ ಇನ್ನಿಬ್ಬರಿಗೆ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ
ಮಳೆಯಿಂದ ಒದ್ದೆಯಾಗಿ ನಿಂತಿದ್ದ ಪಕ್ಕದ ಮನೆಯ ಗೋಡೆ
ಗೋಡೆ ಗುಡಿಸಿಲಿನ ಮೇಲೆ ಬಿದ್ದು ಅನಾಹುತ ಸಂಭವಿಸಿದೆ
ಧಾರವಾಡ: ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.
ಮಳೆಯಿಂದಾಗಿ ಪಕ್ಕದ ಮನೆಯ ಗೋಡೆ ಗುಡಿಸಲಿನ ಮೇಲೆ ಕುಸಿದು ಬಿದ್ದಿದೆ. ಪರಿಣಾಮ 48 ವರ್ಷದ ಯಲ್ಲಪ್ಪ ರಾಮಣ್ಣ ಹಿಪ್ಪಿಯವರ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ ಯಲ್ಲಪ್ಪನ ಪತ್ನಿ ಹನುಮವ್ವ (38), ಮಗಳು ಯಲ್ಲವ್ವ (17)ಗೆ ಗಾಯವಾಗಿದೆ.
ಗಾಯಗೊಂಡಿರುವ ಇಬ್ಬರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಸಿದು ಬಿದ್ದ ಗೋಡೆ ಅಡಿಯಲ್ಲಿ ಮೂವರು ಸಿಲುಕಿದ್ದರು. ಮೂವರನ್ನು ಗ್ರಾಮಸ್ಥರು ರಕ್ಷಿಸುವ ಪ್ರಯತ್ನ ಮಾಡಿದ್ದರು. ಯಲ್ಲಪ್ಪಗೆ ಬಲವಾದ ಪೆಟ್ಟು ಬಿದ್ದಿರುವ ಹಿನ್ನೆಲೆಯಲ್ಲಿ ಬದುಕಲಿಲ್ಲ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಬ್ಯಾಂಕ್ ಕೆಲಸ ಐದು ದಿನದಲ್ಲಿ ಮುಗಿಸಿಕೊಳ್ಳಿ.. ಆಗಸ್ಟ್ನಲ್ಲಿ ಬ್ಯಾಂಕ್ಗಳಿಗೆ ಭರ್ಜರಿ ರಜೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ದುರ್ಘಟನೆಯಲ್ಲಿ ಇನ್ನಿಬ್ಬರಿಗೆ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ
ಮಳೆಯಿಂದ ಒದ್ದೆಯಾಗಿ ನಿಂತಿದ್ದ ಪಕ್ಕದ ಮನೆಯ ಗೋಡೆ
ಗೋಡೆ ಗುಡಿಸಿಲಿನ ಮೇಲೆ ಬಿದ್ದು ಅನಾಹುತ ಸಂಭವಿಸಿದೆ
ಧಾರವಾಡ: ಪಕ್ಕದ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.
ಮಳೆಯಿಂದಾಗಿ ಪಕ್ಕದ ಮನೆಯ ಗೋಡೆ ಗುಡಿಸಲಿನ ಮೇಲೆ ಕುಸಿದು ಬಿದ್ದಿದೆ. ಪರಿಣಾಮ 48 ವರ್ಷದ ಯಲ್ಲಪ್ಪ ರಾಮಣ್ಣ ಹಿಪ್ಪಿಯವರ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ ಯಲ್ಲಪ್ಪನ ಪತ್ನಿ ಹನುಮವ್ವ (38), ಮಗಳು ಯಲ್ಲವ್ವ (17)ಗೆ ಗಾಯವಾಗಿದೆ.
ಗಾಯಗೊಂಡಿರುವ ಇಬ್ಬರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕುಸಿದು ಬಿದ್ದ ಗೋಡೆ ಅಡಿಯಲ್ಲಿ ಮೂವರು ಸಿಲುಕಿದ್ದರು. ಮೂವರನ್ನು ಗ್ರಾಮಸ್ಥರು ರಕ್ಷಿಸುವ ಪ್ರಯತ್ನ ಮಾಡಿದ್ದರು. ಯಲ್ಲಪ್ಪಗೆ ಬಲವಾದ ಪೆಟ್ಟು ಬಿದ್ದಿರುವ ಹಿನ್ನೆಲೆಯಲ್ಲಿ ಬದುಕಲಿಲ್ಲ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಬ್ಯಾಂಕ್ ಕೆಲಸ ಐದು ದಿನದಲ್ಲಿ ಮುಗಿಸಿಕೊಳ್ಳಿ.. ಆಗಸ್ಟ್ನಲ್ಲಿ ಬ್ಯಾಂಕ್ಗಳಿಗೆ ಭರ್ಜರಿ ರಜೆ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ