ಬರೋಬ್ಬರಿ 57 ವರ್ಷಗಳಿಂದ ತಲೆಮರೆಸಿಕೊಂಡ ಕಳ್ಳ
ಎರಡು ಎಮ್ಮೆ ಹಾಗು ಒಂದು ಕರು ಕದ್ದಿದ್ದ ಖತರ್ನಾಕ್ ಕಳ್ಳ
ಪೊಲೀಸರ ಕೈಗೆ ಈತ ಸಿಕ್ಕಿಬಿದ್ದಿದ್ದು ಹೇಗೆ? ಇಲ್ಲಿದೆ ಮಾಹಿತಿ
20 ನೇ ವಯಸ್ಸಿನಲ್ಲಿ 2 ಎಮ್ಮೆ ಹಾಗೂ ಒಂದು ಕರು ಕದ್ದ ಖದೀಮನೊಬ್ಬ 77 ನೇ ವಯಸ್ಸಿನಲ್ಲಿ ಸಿಕ್ಕಿಬಿದ್ದ ಘಟನೆ ಬೀದರ್ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಮೇಹಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1965 ರಲ್ಲಿ ಮಹಾರಾಷ್ಟ್ರ ಮೂಲದ ಇಬ್ಬರು ಎರಡು ಎಮ್ಮೆ ಹಾಗು ಒಂದು ಕರು ಕದ್ದು ಪರಾರಿಯಾಗಿದ್ದರು. ಬಳಿಕ ಪೊಲೀಸರು ಇಬ್ಬರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆದರೆ ಜಾಮೀನು ಮೇಲೆ ಬಿಡುಗಡೆ ಆದ ಗಣಯ್ಯ ಅಲಿಯಾಸ್ ಗಣಪತಿ ಎಂಬಾತ ತಲೆಮರಿಸಿಕೊಂಡಿದ್ದ. ಸತತವಾಗಿ ಅಂದಿನಿಂದ ಆರೋಪಿ ಪತ್ತೆಗಾಗಿ ಜಾಲ ಬೀಸಿದ್ದ ಪೊಲೀಸರು 57 ವರ್ಷಗಳ ಬಳಿಕ ಮಹಾರಾಷ್ಟ್ರ ಜಿಲ್ಲೆಯ ನಾಂದೇಡ ತಾಲೂಕಿನ ಟಾಕಳಗಾಂವ್ ಗ್ರಾಮದಲ್ಲಿ ಆರೋಪಿ ಗಣಯ್ಯನನ್ನ ಬಂಧಿಸಿದ್ದಾರೆ.
ಇಬ್ಬರು ಆರೋಪಿತರಲ್ಲಿ ಇನ್ನೋರ್ವ ಆರೋಪಿ ಕಿಶನ್ ಚಂದರ್ ಈಗಾಗಲೇ ಮೃತಪಟ್ಟಿದ್ದು, ಸದ್ಯ ಬಂಧಿತ ಆರೋಪಿ ಗಣಯ್ಯನನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ. 57 ವರ್ಷಗಳ ಹಿಂದಿನ ಪ್ರಕರಣ ಬೇಧಿಸಿದ ಮೇಹಕರ್ ಪೊಲೀಸ್ ಠಾಣಾ ಪೊಲೀಸರ ಕಾರ್ಯಕ್ಕೆ ಎಸ್ಪಿ ಚನ್ನಬಸವಣ್ಣ ಲಂಗೋಟಿ ಪ್ರಶಂಸೆ ವ್ಯಕ್ತಪಡಿಸಿ ಬಹುಮಾನ ವಿತರಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಬರೋಬ್ಬರಿ 57 ವರ್ಷಗಳಿಂದ ತಲೆಮರೆಸಿಕೊಂಡ ಕಳ್ಳ
ಎರಡು ಎಮ್ಮೆ ಹಾಗು ಒಂದು ಕರು ಕದ್ದಿದ್ದ ಖತರ್ನಾಕ್ ಕಳ್ಳ
ಪೊಲೀಸರ ಕೈಗೆ ಈತ ಸಿಕ್ಕಿಬಿದ್ದಿದ್ದು ಹೇಗೆ? ಇಲ್ಲಿದೆ ಮಾಹಿತಿ
20 ನೇ ವಯಸ್ಸಿನಲ್ಲಿ 2 ಎಮ್ಮೆ ಹಾಗೂ ಒಂದು ಕರು ಕದ್ದ ಖದೀಮನೊಬ್ಬ 77 ನೇ ವಯಸ್ಸಿನಲ್ಲಿ ಸಿಕ್ಕಿಬಿದ್ದ ಘಟನೆ ಬೀದರ್ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಮೇಹಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1965 ರಲ್ಲಿ ಮಹಾರಾಷ್ಟ್ರ ಮೂಲದ ಇಬ್ಬರು ಎರಡು ಎಮ್ಮೆ ಹಾಗು ಒಂದು ಕರು ಕದ್ದು ಪರಾರಿಯಾಗಿದ್ದರು. ಬಳಿಕ ಪೊಲೀಸರು ಇಬ್ಬರನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಆದರೆ ಜಾಮೀನು ಮೇಲೆ ಬಿಡುಗಡೆ ಆದ ಗಣಯ್ಯ ಅಲಿಯಾಸ್ ಗಣಪತಿ ಎಂಬಾತ ತಲೆಮರಿಸಿಕೊಂಡಿದ್ದ. ಸತತವಾಗಿ ಅಂದಿನಿಂದ ಆರೋಪಿ ಪತ್ತೆಗಾಗಿ ಜಾಲ ಬೀಸಿದ್ದ ಪೊಲೀಸರು 57 ವರ್ಷಗಳ ಬಳಿಕ ಮಹಾರಾಷ್ಟ್ರ ಜಿಲ್ಲೆಯ ನಾಂದೇಡ ತಾಲೂಕಿನ ಟಾಕಳಗಾಂವ್ ಗ್ರಾಮದಲ್ಲಿ ಆರೋಪಿ ಗಣಯ್ಯನನ್ನ ಬಂಧಿಸಿದ್ದಾರೆ.
ಇಬ್ಬರು ಆರೋಪಿತರಲ್ಲಿ ಇನ್ನೋರ್ವ ಆರೋಪಿ ಕಿಶನ್ ಚಂದರ್ ಈಗಾಗಲೇ ಮೃತಪಟ್ಟಿದ್ದು, ಸದ್ಯ ಬಂಧಿತ ಆರೋಪಿ ಗಣಯ್ಯನನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ. 57 ವರ್ಷಗಳ ಹಿಂದಿನ ಪ್ರಕರಣ ಬೇಧಿಸಿದ ಮೇಹಕರ್ ಪೊಲೀಸ್ ಠಾಣಾ ಪೊಲೀಸರ ಕಾರ್ಯಕ್ಕೆ ಎಸ್ಪಿ ಚನ್ನಬಸವಣ್ಣ ಲಂಗೋಟಿ ಪ್ರಶಂಸೆ ವ್ಯಕ್ತಪಡಿಸಿ ಬಹುಮಾನ ವಿತರಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ