Advertisment

ಫೋಟೋಗೆ ಪೋಸ್​​ ಕೋಡೋದಕ್ಕೆ ಹೋಗಿ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ..

author-image
Veena Gangani
Updated On
ಫೋಟೋಗೆ ಪೋಸ್​​ ಕೋಡೋದಕ್ಕೆ ಹೋಗಿ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ..
Advertisment
  • ಸರ್ವಧರ್ಮ ಆಶ್ರಮದ ಬಳಿ ಫೋಟೋ ಕ್ಲಿಕ್ಕಿಸಿದ್ದ ವ್ಯಕ್ತಿ
  • ನದಿಯಲ್ಲಿ ನೀರು ಹೆಚ್ಚಿದ್ದ ಕಾರಣ ಕೊಚ್ಚಿ ಹೋದ ಮಹೇಶ್
  • ಕೆ.ಆರ್.ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ

ಮಂಡ್ಯ: ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ವ್ಯಕ್ತಿಯೊಬ್ಬ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ.

Advertisment

ಇದನ್ನೂ ಓದಿ: ನೀವು ಟ್ರೆಕ್ಕಿಂಗ್ ಪ್ರಿಯರೇ..? ಕರ್ನಾಟಕದ ಈ 7 ಬೆಸ್ಟ್ ಪ್ಲೇಸ್​ಗಳನ್ನು ಮಿಸ್​ ಮಾಡಿಕೊಳ್ಳಬೇಡಿ..!

publive-image

ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಸರ್ವಧರ್ಮ ಆಶ್ರಮದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದೆ. ಮಹೇಶ್ (36) ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ. ಈ ಮಹೇಶ್ ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ.

publive-image

ನಿನ್ನೆ ಸ್ನೇಹಿತರೊಂದಿಗೆ ಕೆಆರ್‌ಎಸ್ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದಾಗ ಸರ್ವಧರ್ಮ ಆಶ್ರಮದ ಬಳಿ ಫೋಟೋ ತೆಗೆಸಿಕೊಳ್ಳಲು ಹೋಗಿದ್ದಾನೆ. ಈ ವೇಳೆ ಆಯಾತಪ್ಪಿ ಕಾವೇರಿ ನದಿಗೆ ಕಾಲು ಜಾರಿ ಬಿದ್ದಿದ್ದಾನೆ. ಸದ್ಯ ನದಿಯಲ್ಲಿ ಕೊಚ್ಚಿ ಹೋದ ಮಹೇಶ್‌ಗಾಗಿ ಅಗ್ನಿಶಾಮಕ ದಳದಿಂದ ಶೋಧ ಕಾರ್ಯ ನಡೆಸುತ್ತಿದೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment