newsfirstkannada.com

ಅತಿ ವೇಗದಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಬೈಕ್‌; ಭೀಕರ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಸಾವು

Share :

Published September 16, 2023 at 2:20pm

    ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭಯಾನಕ ಆಕ್ಸಿಡೆಂಟ್

    ಗಂಭೀರವಾಗಿ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲು

    ಉಡುಪಿ ಕಡೆಯಿಂದ ಮಂಗಳೂರಿಗೆ ಬರುವಾಗ ಅಪಘಾತ

ಮಂಗಳೂರು: ಅತಿ ವೇಗವಾಗಿ ಚಲಿಸುತ್ತಿದ್ದ ಬೈಕ್​ಗೆ, ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರೀತಿಕಾ ಶೆಟ್ಟಿ (21) ಅಪಘಾತದಲ್ಲಿ ಮೃತಪಟ್ಟ ಯುವತಿ. ಕೇರಳದ ಕಾಸರಗೋಡು ಜಿಲ್ಲೆಯ ಬಾಕ್ರಬೈಲು ನಿವಾಸಿಯಾದ ಪ್ರೀತಿಕಾ ಹಾಗೂ ಬಂಟ್ವಾಳದ ಮನ್ವಿತ್​ ರಾಜ್ ಎನ್ನುವರು ಬೈಕ್​ನಲ್ಲಿ ವೇಗವಾಗಿ ತೆರಳುತ್ತಿದ್ದರು. ಈ ವೇಳೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು, ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ನೆಲಕ್ಕೆ ಬಿದ್ದಿದ್ದಾರೆ.

ಆಕ್ಸಿಡೆಂಟ್ ಆದ ಬೈಕ್ ಮತ್ತು ಕಾರು

ಇದನ್ನು ಓದಿ: SIIMA Awards: ಅತೀ ಹೆಚ್ಚು ಪ್ರಶಸ್ತಿ ಬಾಚಿಕೊಂಡ ಕಾಂತಾರ.. ರಕ್ಷಿತ್​ ಶೆಟ್ಟಿಯ 777 ಚಾರ್ಲಿಗೆ ಏನೆಲ್ಲ ಸಿಕ್ಕಿದೆ..?

ಅಪಘಾತದಲ್ಲಿ ಯುವತಿ ತಲೆಗೆ ಗಂಭೀರವಾದ ಗಾಯವಾಗಿತ್ತು. ಹೀಗಾಗಿ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯು ಪ್ರಯತ್ನ ಮಾಡಲಾದ್ರು ಆಸ್ಪತ್ರೆ ಸೇರುವ ಮೊದಲೇ ಮೃತಪಟ್ಟಿದ್ದಾರೆ. ಇನ್ನು ಯುವಕ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಬೈಕ್​ನಲ್ಲಿ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಇನ್ನು ಈ ಸಂಬಂಧ ಮುಲ್ಕಿ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಕಾರು-ಬೈಕ್​ ನಡುವಿನ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅತಿ ವೇಗದಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಬೈಕ್‌; ಭೀಕರ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಸಾವು

https://newsfirstlive.com/wp-content/uploads/2023/09/MNG_GIRL_DEAD.jpg

    ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭಯಾನಕ ಆಕ್ಸಿಡೆಂಟ್

    ಗಂಭೀರವಾಗಿ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲು

    ಉಡುಪಿ ಕಡೆಯಿಂದ ಮಂಗಳೂರಿಗೆ ಬರುವಾಗ ಅಪಘಾತ

ಮಂಗಳೂರು: ಅತಿ ವೇಗವಾಗಿ ಚಲಿಸುತ್ತಿದ್ದ ಬೈಕ್​ಗೆ, ಕಾರು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರೀತಿಕಾ ಶೆಟ್ಟಿ (21) ಅಪಘಾತದಲ್ಲಿ ಮೃತಪಟ್ಟ ಯುವತಿ. ಕೇರಳದ ಕಾಸರಗೋಡು ಜಿಲ್ಲೆಯ ಬಾಕ್ರಬೈಲು ನಿವಾಸಿಯಾದ ಪ್ರೀತಿಕಾ ಹಾಗೂ ಬಂಟ್ವಾಳದ ಮನ್ವಿತ್​ ರಾಜ್ ಎನ್ನುವರು ಬೈಕ್​ನಲ್ಲಿ ವೇಗವಾಗಿ ತೆರಳುತ್ತಿದ್ದರು. ಈ ವೇಳೆ ಹೆದ್ದಾರಿ ಕ್ರಾಸ್ ಮಾಡುತ್ತಿದ್ದ ಕಾರು, ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿ ನೆಲಕ್ಕೆ ಬಿದ್ದಿದ್ದಾರೆ.

ಆಕ್ಸಿಡೆಂಟ್ ಆದ ಬೈಕ್ ಮತ್ತು ಕಾರು

ಇದನ್ನು ಓದಿ: SIIMA Awards: ಅತೀ ಹೆಚ್ಚು ಪ್ರಶಸ್ತಿ ಬಾಚಿಕೊಂಡ ಕಾಂತಾರ.. ರಕ್ಷಿತ್​ ಶೆಟ್ಟಿಯ 777 ಚಾರ್ಲಿಗೆ ಏನೆಲ್ಲ ಸಿಕ್ಕಿದೆ..?

ಅಪಘಾತದಲ್ಲಿ ಯುವತಿ ತಲೆಗೆ ಗಂಭೀರವಾದ ಗಾಯವಾಗಿತ್ತು. ಹೀಗಾಗಿ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯು ಪ್ರಯತ್ನ ಮಾಡಲಾದ್ರು ಆಸ್ಪತ್ರೆ ಸೇರುವ ಮೊದಲೇ ಮೃತಪಟ್ಟಿದ್ದಾರೆ. ಇನ್ನು ಯುವಕ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಬೈಕ್​ನಲ್ಲಿ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಇನ್ನು ಈ ಸಂಬಂಧ ಮುಲ್ಕಿ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಕಾರು-ಬೈಕ್​ ನಡುವಿನ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More